‘ಪತ್ರಕರ್ತರಿಂದ ಸಮಾಜ, ಜನತೆಯ ಬದಲಾವಣೆ ಸಾಧ್ಯ’

ಬಹ್ಮಾವರ, ಜು.25: ಪತ್ರಕರ್ತರ ಜೊತೆಗೆ ಜನತೆ ಕೂಡ ಬದಲಾವಣೆ ಬಯಸಿದಲ್ಲಿ ಮಾತ್ರ ಸಮಾಜದಲ್ಲೂ ಬದಲಾವಣೆ ಕಾಣಲು ಸಾದ್ಯವಾಗಲಿದೆ ಎಂದು ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಬ್ರಹ್ಮಾವರ ಬಂಟರಭವನದಲ್ಲಿ ರವಿವಾರ ಬ್ರಹ್ಮಾವರ ಪ್ರೆಸ್ ಕ್ಲಬ್ ವತಿಯಿಂದ ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಪತ್ರಿಕೋದ್ಯಮ, ರಾಜಕೀಯ ಕಾನೂನು ವಿಷಯಾಧಾರಿತ ಪತ್ರಿಕೋದ್ಯಮ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ರಾಜಕಾರಣದಲ್ಲಿರುವವರು ದಿನ ನಿತ್ಯ ಹಣ ನೀಡುತ್ತಾರೆ ಎಂದರೆ ಆ ಹಣದ ಮೂಲ ಯಾವುದು ಎನ್ನುವ ಪ್ರಶ್ನೆ ಮಾಡುವ ಮನೋಭಾವವನ್ನು ಜನತೆ ಹೊಂದದಿದ್ದರೆ ಉತ್ತಮ ಜನಪ್ರತಿನಿಧಿಯ ಆಯ್ಕೆ ಸಾಧ್ಯವಿಲ್ಲ ಎಂದರು.
ನ್ಯಾಯವಾದಿ, ರೈತಪರ ಹೋರಾಟಗಾರ ಸುಧೀರ್ ಕುಮಾರ್ ಮುರೊಳಿ ಮಾತನಾಡಿ, ನಿಷ್ಟುರವಾಗಿ ವರದಿಗಳನ್ನು ಮಾಡುತ್ತಿರುವುದು ನಗರದ ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತುಕೊಂಡಿರುವ ವರದಿಗಾರರಲ್ಲ, ಬದಲಿಗೆ ಗ್ರಾಮೀಣ ಪ್ರದೇಶದಲ್ಲಿ ವರದಿಗಾರಿಕೆಯನ್ನು ಮಾಡಿಕೊಂಡಿರುವ ಗ್ರಾಮೀಣ ಪತ್ರಕರ್ತರು ಎನ್ನಬಹುದು ಎಂದರು.
ನ್ಯಾಯವಾದಿ, ರೈತಪರ ಹೋರಾಟಗಾರ ಸುಧೀರ್ ಕುಮಾರ್ ಮುರೊಳಿ ಮಾತನಾಡಿ, ನಿಷ್ಟುರವಾಗಿ ವರದಿಗಳನ್ನು ಮಾಡುತ್ತಿರುವುದು ನಗರದ ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತುಕೊಂಡಿರುವ ವರದಿಗಾರರಲ್ಲ, ಬದಲಿಗೆ ಗ್ರಾಮೀಣ ಪ್ರದೇಶದಲ್ಲಿ ವರದಿಗಾರಿಕೆಯನ್ನು ಮಾಡಿಕೊಂಡಿರುವ ಗ್ರಾಮೀಣ ಪತ್ರಕರ್ತರು ಎನ್ನಬಹುದು ಎಂದರು. ರಾಜಕಾರಣಿಗಳು ಎಂದರೆ ಒಂದು ರೀತಿಯಲ್ಲಿ ನೋಡುವ ಈ ಕಾಲದಲ್ಲಿ ಕಾನೂನು ಕಾಯಿದೆಯನ್ನು ಸುವ್ಯವಸ್ಥೆಯಲ್ಲಿರಿಸಿರುವುದು ರಾಜಕಾರಣಿಗಳು ಎನ್ನುವುದನ್ನು ನಾವು ಮರೆಯಬಾರದು. ಸದ್ಯದ ಪರಿಸ್ಥಿತಿಯಲ್ಲಿ ಪತ್ರಿಕೋದ್ಯಮ ರಾಜಕೀಯ ಮತ್ತು ಕಾನೂನು ಸಮತೋಲನ ಕಾಪಾಡಿಕೊಳ್ಳಬೇಕಾದ ಅಗತ್ಯತೆ ಇದೆ ಎಂದರು.
ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಬ್ರಹ್ಮಾವರ ಪ್ರೆಸ್ ಕ್ಲಬ್ ಅಧ್ಯಕ್ಷ ಚಿತ್ತೂರು ಪ್ರಬಾಕರ ಆಚಾರ್ಯ ಉಪಸ್ಥಿತರಿದ್ದರು. ಬ್ರಹ್ಮಾವರ ಪ್ರೆಸ್ ಕ್ಲಬ್ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಸ್ವಾಗತಿಸಿದರು. ಚಿಂತಕ ಜ್ಞಾನವಸಂತ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಲಬ್ನ ಉಪಾಧ್ಯಕ್ಷ ಶೇಷಗಿರಿ ಭಟ್ ಕಾರ್ಯಕ್ರಮ ನಿರೂಪಿಸಿದರು.







