Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಏಕಪಕ್ಷೀಯ ಜಾರಿಯಿಂದ ಬೀಡಿ ಕಾರ್ಮಿಕರಿಗೆ...

ಏಕಪಕ್ಷೀಯ ಜಾರಿಯಿಂದ ಬೀಡಿ ಕಾರ್ಮಿಕರಿಗೆ ಅನ್ಯಾಯ: ಸೈಯದ್ ಮುಜೀಬ್

ವಾರ್ತಾಭಾರತಿವಾರ್ತಾಭಾರತಿ25 July 2017 9:53 PM IST
share
ಏಕಪಕ್ಷೀಯ ಜಾರಿಯಿಂದ ಬೀಡಿ ಕಾರ್ಮಿಕರಿಗೆ ಅನ್ಯಾಯ: ಸೈಯದ್ ಮುಜೀಬ್

ಮೂಡುಬಿದಿರೆ, ಜು. 25: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಬಾರದೆಂಬ ಕೋಟ್ಪಾ ಕಾಯಿದೆಯ ಒಂದು ನಿಯಮವನ್ನು ಮಾತ್ರ ಸಮರ್ಥವಾಗಿ ಜಾರಿಗೆ ತಂದಿರುವ ಸರಕಾರಗಳು ಅದೇ ಕಾಯಿದೆಯಲ್ಲಿ ಉಲ್ಲೇಖಿತವಾಗಿರುವ ಬೀಡಿ ಕಾರ್ಮಿಕರಿಗೆ ಪರಿಹಾರ ನೀಡುವ ಯೋಜನೆಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿವೆ. ಈ ಕಾಯಿದೆಯ ಏಕಪಕ್ಷೀಯ ಅನುಷ್ಠಾನದಿಂದಾಗಿ ಬೀಡಿ ಕಾರ್ಮಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ಇದರ ಕಾರ್ಯದರ್ಶಿ ಸೈಯದ್ ಮುಜೀಬ್ ಹೇಳಿದ್ದಾರೆ.

ಅವರು ಸಿಐಟಿಯು ಹಾಗೂ ಬೀಡಿ ಕಾರ್ಮಿಕರ ಫೆಡರೇಶನ್ ಬೀಡಿ ಕಾರ್ಮಿಕರ ಸಮಸ್ಯೆಗಳ ಕುರಿತಾಗಿ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ತಮ್ಮ ವಿಚಾರ ಮಂಡಿಸಿದರು.

ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನಗಳಂತೆ ಧೂಮಪಾನದ ಮೇಲೆ ನಿಯಂತ್ರಣ ಹೇರುವ ಉದ್ದೇಶಗಳಿಂದ ಸರಕಾರಗಳು ತರುತ್ತಿರುವ ನೀತಿಗಳಿಂದಾಗಿ ಬೀಡಿ ಕಾರ್ಮಿಕರು ಬೀದಿಪಾಲಾಗುವ ದುರವಸ್ಥೆ ಒದಗಿಬಂದಿದೆ. ಕನಿಷ್ಠ ಕೂಲಿ, ಹೆರಿಗೆ ಭತ್ಯೆ, ಫ್ರವಿಡೆಂಟ್ ಫಂಡ್, ಆರೋಗ್ಯ ಹಾಗೂ ಸಾಮಾಜಿಕ ಭದ್ರತೆಗಳನ್ನು ಬೀಡಿ ಕಾರ್ಮಿಕರಿಗೆ ಸರಕಾರ ಖಾತರಿಪಡಿಸಬೇಕು. ಹಣದ ಅಪಮೌಲ್ಯ ಹಾಗೂ ಜಿಎಸ್‌ಟಿ ಜಾರಿಯಿಂದಾಗಿ ಬೀಡಿ ಉದ್ಯಮವೂ ಸಂಪೂರ್ಣ ನೆಲಕಚ್ಚಿದ್ದು, ಲಕ್ಷಾಂತರ ಕಾರ್ಮಿಕರ ಸಮಸ್ಯೆ ಕೇಳುವವರಿಲ್ಲವಾಗಿದೆ ಎಂದರು.

ಬೀಡಿ ಉದ್ಯಮದ ರಕ್ಷಣೆಯ ಹೊಣೆಯನ್ನು ಬೀಡಿ ಕಾರ್ಮಿಕರು ಮಾತ್ರವಲ್ಲದೇ, ಗುತ್ತಿಗೆದಾರರು, ಇತರೆ ಕೆಲಸಗಾರರು, ಮಾಲಕರು ಹೊತ್ತುಕೊಳ್ಳಬೇಕು. ಉದ್ಯಮದ ಮೇಲಾಗಿರುವ ಆಘಾತದ ವಿರುದ್ಧ ಧ್ವನಿಯೆತ್ತುವ ಮೂಲಕ ನಮ್ಮನ್ನು ನಾವು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಎಐಟಿಯುಸಿಯ ಮುಖಂಡ ಸೀತರಾಮ್ ಉದ್ಯಮಕ್ಕೆ ಪುನಶ್ಚೇತನ ನೀಡುವ ಮೂಲಕ ಕನಿಷ್ಠ ಕೂಲಿ ಹಾಗೂ ಇತರ ಸವಲತ್ತುಗಳನ್ನು ಪಡೆಯುವಲ್ಲಿ ಹೋರಾಟ ಅಗತ್ಯ ಎಂದರು.

ದ.ಕ. ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ವಸಂತ ಆಚಾರಿ ಅಧ್ಯಕ್ಷತೆ ವಹಿಸಿದ್ದರು. ಗುತ್ತಿಗೆದಾರರ ಸಂಘದ ಅಬ್ದುಲ್ ಖಾದರ್ ಕಿನ್ನಿಗೋಳಿ, ಅಬ್ದುಲ್ ರಹಿಮಾನ್ ಮೂಡುಬಿದಿರೆ, ಕೃಷ್ಣ ರೈ, ಕೃಷ್ಣಪ್ಪ ಬೋಳಾರ, ರವಿ ಉಡುಪಿ, ಗಂಗಾಧರ ರೈ ಪುತ್ತೂರು ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಬೀಡಿಯ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಉದ್ಯಮ ಸಂಕಷ್ಟದ ಪರಿಸ್ಥಿತಿಗೆ ತಲುಪಿದ್ದು, ಮಾಲಕರ ಮೇಲಾಗುತ್ತಿರುವ ನಷ್ಟ ನೇರವಾಗಿ ಕಾರ್ಮಿಕರ ಹೊರೆಯಾಗುತ್ತಿದೆ. 28% ಬೀಡಿಗೆ, 18% ನೂಲಿಗೆ, 16 % ತಂಬಾಕಿಗೆ ಜಿಎಸ್‌ಟಿ ಬರೆಯನ್ನು ಬೀಡಿ ಉದ್ಯಮದ ಮೇಲೆ ಎಳೆದಿರುವ ಕೇಂದ್ರ ಸರಕಾರದ ನಡೆಯಿಂದಾಗಿ ಕಾರ್ಮಿಕರು ಸಂಕಷ್ಟಕ್ಕೊಳಗಾಗಿದ್ದಾರೆ. -ವಸಂತ ಆಚಾರಿ, ದ.ಕ. ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X