Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶಾದ್ಯಂತ ಕೋಮುವಾದದ ಕಾರಾಗೃಹಗಳ...

ದೇಶಾದ್ಯಂತ ಕೋಮುವಾದದ ಕಾರಾಗೃಹಗಳ ನಿರ್ಮಾಣ: ಬರಗೂರು ರಾಮಚಂದ್ರಪ್ಪ ಆತಂಕ

ದೇಶವನ್ನು ಉಳಿಸೋಣ-ದೇಶವನ್ನು ಬೆಳಸೋಣ ಜಾಗೃತಿ ಜಾಥಾ

ವಾರ್ತಾಭಾರತಿವಾರ್ತಾಭಾರತಿ26 July 2017 6:56 PM IST
share
ದೇಶಾದ್ಯಂತ ಕೋಮುವಾದದ ಕಾರಾಗೃಹಗಳ ನಿರ್ಮಾಣ: ಬರಗೂರು ರಾಮಚಂದ್ರಪ್ಪ ಆತಂಕ

ಬೆಂಗಳೂರು, ಜು.26: ಲೋಕಸಭಾ ಚುನಾವಣೆಗೆ ಇನ್ನೂ ಎರಡು ವರ್ಷ ಇರುವಾಗಲೇ ಕೋಮುವಾದಿಗಳು ದೇಶಾದ್ಯಂತ ಕೋಮುವಾದದ ಕಾರಾಗೃಹಗಳನ್ನು ನಿರ್ಮಿಸಲು ನಿರತವಾಗಿದ್ದಾರೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ಬುಧವಾರ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ಹಾಗೂ ಅಖಿಲ ಭಾರತ ಯುವಜನ ಫೆಡರೇಷನ್ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ದೇಶವನ್ನು ಉಳಿಸೋಣ-ದೇಶವನ್ನು ಬೆಳಸೋಣ’ ಕುರಿತು ಜಾಗೃತಿ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲಕ್ಷಾಂತರ ಉದ್ಯೋಗಗಳನ್ನು ನಿರ್ಮಿಸುತ್ತೇವೆ ಎಂದು ಆಶ್ವಾಸನೆ ನೀಡಲಾಗಿತ್ತು. ಆದರೆ, ಇಲ್ಲಿಯವರೆಗೂ ಕನಿಷ್ಠ ಮೂರು ಲಕ್ಷ ಉದ್ಯೋಗಗಳು ನಿರ್ಮಾಣವಾಗಿಲ್ಲ. ಹಾಗೆಯೇ ಬಡವರ ಬ್ಯಾಂಕ್ ಖಾತೆಗೆ 15ಲಕ್ಷ ರೂ. ಹಾಕಲಾಗಿಲ್ಲ. ಬಿಜೆಪಿ ಕೊಟ್ಟ ಭರವಸೆಗಳೆಲ್ಲ ಹುಸಿಯಾಗಿದೆ ಎಂದು ಅವರು ಕಿಡಿಕಾರಿದರು.

ಇಷ್ಟಾದರೂ ಜನರ ಮಧ್ಯೆ ಕೋಮುವಾದದ ಬೀಜ ಬಿತ್ತಿ, ಅದರ ಮೂಲಕ ಚುನಾವಣೆ ಪ್ರಚಾರಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೋಮುವಾದಿಗಳು ದೇಶಾದ್ಯಂತ ಕೋಮುವಾದವನ್ನು ಸೃಷ್ಟಿಸಲು ಬೇಕಾದ ಕಾರಾಗೃಹಗಳನ್ನು ನಿರ್ಮಿಸಲು ಈಗಿನಿಂದಲೇ ನಿರತರಾಗಿದ್ದಾರೆ ಎಂದು ಅವರು ತಿಳಿಸಿದರು.
ದೇಶದಲ್ಲಿ ಎಡಪಕ್ಷಗಳನ್ನು ಹೊರತು ಪಡಿಸಿದರೆ ಉಳಿದ ಪಕ್ಷಗಳು ರಾಜಕೀಯವನ್ನು ಕೇವಲ ಚುನಾವಣೆಗೆ ಮಾತ್ರ ಸೀಮಿತಗೊಳಿಸಿವೆ. ದೇಶದಲ್ಲಾಗುತ್ತಿರುವ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆಯ ಕುರಿತು ಕಿಂಚಿತ್ತೂ ಕಾಳಜಿ ಇಲ್ಲವಾಗಿದೆ. ಹೀಗಾಗಿಯೇ ದೇಶದ ಆರ್ಥಿಕ ಕ್ಷೇತ್ರವನ್ನು ಕಾರ್ಪೊರೇಟ್ ಶಕ್ತಿಗಳು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರಕ್ಕೆ ದೇಶದ ಅಭಿವೃದ್ಧಿಯೆಂದರೆ ಕೇವಲ ಕಾರ್ಪೊರೇಟ್ ಸಂಸ್ಥೆಗಳ ಅಭಿವೃದ್ಧಿಯಾಗಿದೆ. ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದ್ದರೂ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿಲ್ಲ. ಕೇವಲ ಜಾತಿ, ಧರ್ಮಗಳ ಹೆಸರಿನಲ್ಲಿ ವಾಗ್ವಾದಗಳ ಮೂಲಕ ದೇಶದಲ್ಲಿ ನಿಜವಾಗಿ ಕಾಡುತ್ತಿರುವ ಸಮಸ್ಯೆಗಳನ್ನು ಮರೆ ಮಾಚಲಾಗುತ್ತಿದೆ ಎಂದು ಅವರು ವಿಷಾದಿಸಿದರು.

ಏಕ ಸಂಸ್ಕೃತಿಯನ್ನು ಪ್ರತಿಪಾದಿಸುವ ಕೋಮುವಾದಿಗಳು ಒಗ್ಗಟ್ಟಾಗಿದ್ದಾರೆ. ಆದರೆ, ಬಹುತ್ವವನ್ನು ಕಾಪಾಡುವ, ಜನಪರ ಆಶಯಕ್ಕಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿರುವ ಪ್ರಗತಿಪರ ಸಂಘಟನೆಗಳು ವಿಭಾಗಗಳಾಗಿರುವುದರಿಂದ ಕೋಮುವಾದಿಗಳಿಗೆ ಜಯವಾಗುತ್ತಿದೆ. ಈ ಕುರಿತು ಜನಪರ ಸಂಘಟನೆಗಳ ನಾಯಕರು ಗಂಭೀರವಾಗಿ ಚಿಂತಿಸಿ ಒಕ್ಕೂಟ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕಾಗಿದೆ. ಜನಪರ ಸಂಘಟನೆಗಳು ತಮ್ಮ ಮೂಲ ಸಿದ್ಧಾಂತಕ್ಕೆ ಸೃಜನಶೀಲತೆಯ ಆಯಾಮ ಕೊಡಬೇಕಾಗಿದೆ. ಆಗ ಮಾತ್ರ ಚಲನಶೀಲತೆಯನ್ನು ಪಡೆದುಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಪ್ರಗತಿಪರ ಚಿಂತಕ ಜಿ.ರಾಮಕೃಷ್ಣ, ಎಐವೈಎಫ್ ರಾಜ್ಯ ಸಂಚಾಲಕ ಎಚ್.ಎಂ.ಸಂತೋಷ, ಎಐಎಸ್‌ಎಫ್ ರಾಜ್ಯಾಧ್ಯಕ್ಷೆ ಜ್ಯೋತಿ.ಕೆ, ಹೊಸತು ಮಾಸ ಪತ್ರಿಕೆಯ ಸಂಪಾದಕ ಡಾ.ಸಿದ್ದನಗೌಡ ಪಾಟೀಲ್, ಎಐವೈಎಫ್ ರಾಷ್ಟ್ರೀಯ ಮಂಡಳಿ ಅಧ್ಯಕ್ಷ ಅಫ್ತಬ್ ಆಲಂ ಖಾನ್, ಎಐಎಸ್‌ಎಫ್ ರಾಷ್ಟ್ರೀಯ ಮಂಡಳಿ ಅಧ್ಯಕ್ಷ ಸೈಯದ್ ವಲಿವುಲ್ಲಾ ಖಾದ್ರಿ ಮತ್ತಿತರರಿದ್ದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X