Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಿರುನೆಲ್ವೆಲಿ ಜಿಲ್ಲಾಧಿಕಾರಿಯ ‘ಕರುಣೆಯ...

ತಿರುನೆಲ್ವೆಲಿ ಜಿಲ್ಲಾಧಿಕಾರಿಯ ‘ಕರುಣೆಯ ಗೋಡೆ’ಗೆ ಸಾರ್ವಜನಿಕರಿಂದ ದೇಣಿಗೆಗಳ ಮಹಾಪೂರ

ವಾರ್ತಾಭಾರತಿವಾರ್ತಾಭಾರತಿ26 July 2017 11:48 PM IST
share
ತಿರುನೆಲ್ವೆಲಿ ಜಿಲ್ಲಾಧಿಕಾರಿಯ ‘ಕರುಣೆಯ ಗೋಡೆ’ಗೆ ಸಾರ್ವಜನಿಕರಿಂದ ದೇಣಿಗೆಗಳ ಮಹಾಪೂರ

ತಿರುನೆಲ್ವೆಲಿ(ತ.ನಾ),ಜು.26: ತಮಿಳುನಾಡು ವಿನೂತನ ಉಪಕ್ರಮವೊಂದಕ್ಕೆ ಸಾಕ್ಷಿಯಾಗಿದೆ. ತಿರುನೆಲ್ವೆಲಿಯ ಜಿಲ್ಲಾಧಿಕಾರಿ ಸಂದೀಪ್ ನಂದೂರಿ ಅವರ ಕಲ್ಪನೆಯ ಕೂಸು ಇದು.

‘‘ನಿಮಗೆ ಅಗತ್ಯವಿಲ್ಲದಿದ್ದರೆ ಅದನ್ನು ದೇಣಿಗೆಯಾಗಿ ನೀಡಿ! ನಿಮಗೆ ಅಗತ್ಯವಿದ್ದರೆ ಅದನ್ನು ತೆಗೆದುಕೊಳ್ಳಿ!’’:ಇವು ಈ ವರ್ಣರಂಜಿತ ‘ಕರುಣೆಯ ಗೋಡೆ’ಯ ಮೇಲೆ ಎದ್ದು ಕಾಣುವ ಶಬ್ದಗಳು.

ಇಲ್ಲದವರ ಅಗತ್ಯಕ್ಕಾಗಿ ಈ ಗೋಡೆಯನ್ನು ಸ್ಥಾಪಿಸಲಾಗಿದೆ. ಪುಸ್ತಕಗಳು,ಆಟಿಕೆಗಳಿಂದ ಹಿಡಿದು ಬಟ್ಟೆಗಳು ಮತ್ತು ಶೂಗಳವರೆಗೆ ಬಳಸಲರ್ಹವಾದ ಯಾವುದೇ ವಸ್ತುವನ್ನು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ ಗೋಡೆಯಲ್ಲಿ ಅಳವಡಿಸಲಾ ಗಿರುವ ಶೆಲ್ಫ್‌ಗಳಲ್ಲಿ ಇಡಬಹುದಾಗಿದೆ. ಅಗತ್ಯವುಳ್ಳವರು ಅವುಗಳನ್ನು ತೆಗೆದುಕೊಳ್ಳ ಬಹುದಾಗಿದೆ. ಶರ್ಟ್‌ಗಳು ಮತ್ತು ಪ್ಯಾಂಟ್‌ಗಳು ಈ ಗೋಡೆಗೆ ತೂಗುಬಿದ್ದಿದ್ದು, ಕುತೂಹಲಿ ಜನರು ಇಲ್ಲಿರುವ ವಸ್ತುಗಳನ್ನು ಪರಿಶೀಲಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ನಾವು ನಮ್ಮ ಮನೆಗಳಲ್ಲಿ ಬಳಸದೆ ಬಿಟ್ಟಿರುವ ವಸ್ತುಗಳಿಂದ ಬಡಜನರಿಗೆ ಪ್ರಯೋಜನವಾಗಲಿ ಎನ್ನುವುದು ಈ ಪರಿಕಲ್ಪನೆಯ ಹಿಂದಿನ ಉದ್ದೇಶವಾಗಿದೆ. ಇದು ವಸ್ತುಗಳ ವಿನಿಮಯಕ್ಕೊಂದು ಸ್ಥಳವಾಗಿದೆ,ಅಷ್ಟೇ. ಇದೇನೂ ಹೊಸ ಪರಿಕಲ್ಪನೆಯಲ್ಲ. ಇರಾನ್‌ನ ಎಲ್ಲೋ ಒಂದು ಕಡೆ ಇದು ಆರಂಭಗೊಂಡಿತ್ತು. ಉತ್ತರ ಭಾರತದ ರಾಜ್ಯಗಳಲ್ಲಿ, ನಮ್ಮ ನೆರೆಯ ಕೆಲವು ರಾಜ್ಯಗಳಲ್ಲಿಯೂ ಇದೆ. ಆದರೆ ತಮಿಳುನಾಡಿನಲ್ಲಿ ಇದೇ ಮೊದಲ ಬಾರಿಗೆ ಈ ವ್ಯವಸ್ಥೆ ಮಾಡಲಾಗಿದೆ ಎಂದು ನಂದೂರಿ ಸುದ್ದಿಗಾರರಿಗೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಎಂದ ಮೇಲೆ ಬಹಳಷ್ಟು ಜನರು ಬಂದು ಹೋಗುತ್ತಿರುತ್ತಾರೆ. ಹೀಗಾಗಿ ಈ ‘ಕರುಣೆಯ ಗೋಡೆ ’ಯನ್ನು ಇಲ್ಲಿಯೇ ಸ್ಥಾಪಿಸಲು ನಾವು ನಿರ್ಧರಿಸಿದೆವು ಎಂದೂ ಅವರು ತಿಳಿಸಿದರು.

ಕರುಣೆಯ ಗೋಡೆ ಅಸ್ತಿತ್ವಕ್ಕೆ ಬಂದು ಕೇವಲ ಮೂರು ದಿನಗಳಾಗಿವೆ. ಸಾರ್ವಜನಿಕರು ತಮ್ಮಲ್ಲಿರುವ, ತಾವು ಬಳಸದ ವಸ್ತುಗಳನ್ನು ರಾಶಿರಾಶಿಯಾಗಿ ತಂದು ಇಲ್ಲಿಡುತ್ತಿದ್ದಾರೆ. ಅಗತ್ಯವುಳ್ಳವುರು ತಮಗೆ ಬೇಕಾದ್ದನ್ನು ಇಲ್ಲಿಂದ ಆರಿಸಿಕೊಂಡು ಒಯ್ಯುತ್ತಾರೆ.

ಇಂತಹ ಯೋಜನೆಯೊಂದನ್ನು ಆರಂಭಿಸಿದ್ದಕ್ಕಾಗಿ ಜಿಲ್ಲಾಧಿಕಾರಿಗಳಿಗೆ ನಾವು ಋಣಿಯಾಗಿದ್ದೇವೆ. ನಾವು ಇಲ್ಲಿಂದ ಸೀರೆ, ಪ್ಯಾಂಟ್ ಮತ್ತು ಶರ್ಟ್‌ಗಳನ್ನು ತೆಗೆದುಕೊಂಡಿದ್ದೇವೆ ಎಂದು ದಿನಗೂಲಿ ಮಾಡಿ ಹೊಟ್ಟೆ ಹೊರೆದುಕೊಳ್ಳುತ್ತಿರುವ ಮರಿಯಮ್ಮಾಳ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X