Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಧಿಕಾರಿಗೆ ಮಣೆ ಹಾಕಲು ಅಥ್ಲೀಟ್‌ಗಳನ್ನು...

ಅಧಿಕಾರಿಗೆ ಮಣೆ ಹಾಕಲು ಅಥ್ಲೀಟ್‌ಗಳನ್ನು ಕಡೆಗಣಿಸಿದ ಎಎಫ್‌ಐ

ವಾರ್ತಾಭಾರತಿವಾರ್ತಾಭಾರತಿ26 July 2017 11:54 PM IST
share
ಅಧಿಕಾರಿಗೆ ಮಣೆ ಹಾಕಲು ಅಥ್ಲೀಟ್‌ಗಳನ್ನು ಕಡೆಗಣಿಸಿದ ಎಎಫ್‌ಐ

ಬೆಂಗಳೂರು, ಜು.26: ಭಾರತದ ಅಥ್ಲೆಟಿಕ್ ಫೆಡರೇಶನ್(ಎಎಫ್‌ಐ)ಅಧಿಕಾರಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದಲೇ ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದ ಅಥ್ಲೀಟ್‌ಗಳನ್ನು ತಂಡದಿಂದ ಹೊರಗಿಟ್ಟಿದೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ.

ಮುಂದಿನ ತಿಂಗಳು ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಓರ್ವ ಐಎಎಸ್ ಅಧಿಕಾರಿ ಸಹಿತ 13 ಅಧಿಕಾರಿಗಳನ್ನು ಅಥ್ಲೀಟ್ ತಂಡದೊಂದಿಗೆ ಕಳುಹಿಸಿಕೊಡಲು ಎಎಫ್‌ಐ ನಿರ್ಧರಿಸಿದೆ.

  ಭುವನೇಶ್ವರದಲ್ಲಿ ಇತ್ತೀಚೆಗೆ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ್ನು ಯಶಸ್ವಿಯಾಗಿ ಆಯೋಜಿಸಿದ್ದ ಒಡಿಶಾದ ಐಎಎಸ್ ಅಧಿಕಾರಿ ವಿಶಾಲ್ ಕುಮಾರ್ ದೇವ್ ಭಾರತದ ಅಥ್ಲೀಟ್‌ಗಳ ನೇತೃತ್ವವಹಿಸಿಕೊಂಡಿದ್ದಾರೆ. ಎಎಫ್‌ಐ ಅಧಿಕಾರಿ ಟೋನಿ ಡೇನಿಯಲ್ ಟೀಮ್ ಮ್ಯಾನೇಜರ್ ಆಗಿ ಆಯ್ಕೆಯಾಗಿದ್ದಾರೆ. ಆದರೆ, ಭುವನೇಶ್ವರದಲ್ಲಿ ನಡೆದಿದ್ದ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಜಯಿಸಿ ನೇರ ಪ್ರವೇಶ ಪಡೆದಿದ್ದ ಮೂವರು ಅಥ್ಲೀಟ್‌ಗಳಾದ ಸುಧಾ ಸಿಂಗ್, ಪಿ.ಯು. ಚಿತ್ರಾ ಹಾಗೂ ಅಜಯ್ ಕುಮಾರ್ ಸರೋಜ್‌ರನ್ನು ತಂಡದಿಂದ ಕೈಬಿಟ್ಟಿರುವ ಎಎಫ್‌ಐ ಎಲ್ಲರನ್ನು ಅಚ್ಚರಿಗೊಳಿಸಿದೆ.

ಆಯ್ಕೆಗಾರರ ‘ಇಬ್ಬಗೆ ನೀತಿ’ಯನ್ನು ಪ್ರಶ್ನಿಸಿದ ಏಷ್ಯನ್ ಚಾಂಪಿಯನ್ ಸುಧಾ ಸಿಂಗ್, ಆಯ್ಕೆ ಸಮಿತಿಯ ಮುಖ್ಯಸ್ಥ ಗುರ್ಬಚನ್ ಸಿಂಗ್ ರಾಂಧವಾ ‘ಅಥ್ಲೀಟ್‌ಗಳ ಹಿತಾಸಕ್ತಿ’ಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

  ‘‘ರಾಂಧವಾಜೀ ನನ್ನ ವಯಸ್ಸೆಷ್ಟು ಎಂದು ಕೇಳಿದ್ದರು. ನಾನು 1986ರಲ್ಲಿ ಜನಿಸಿದ್ದಾಗಿ ತಿಳಿಸಿದ್ದೆ. ನನ್ನ ವಯಸ್ಸು ಹೆಚ್ಚಾಗಿದೆ ಎಂದು ಹೇಳಿದರು. ರಾಂಧವಾಜೀ ಅಥ್ಲೀಟ್‌ಗಳ ವಯಸ್ಸಿನ ಆಧಾರದಲ್ಲಿ ವೃತ್ತಿಜೀವನ ಅಂತ್ಯಗೊಳಿಸಿದ್ದು ಹೇಗೆ?ವಯಸ್ಸೇ ಮಾನದಂಡವಾಗಿದ್ದರೆ ನನ್ನನ್ನು ರಾಷ್ಟ್ರೀಯ ಶಿಬಿರಕ್ಕೆ ಸೇರಿಸಿಕೊಂಡಿದ್ದೇಕೆ? ಏಷ್ಯನ್ ಚಾಂಪಿಯನ್‌ಶಿಪ್‌ಗಿಂತ ಮೊದಲು ಚಿನ್ನ ಗೆಲ್ಲುವವರನ್ನು ಆಯ್ಕೆಗೆ ಪರಿಗಣಿಸಲಾಗುವುದು ಎಂದು ನಮಗೆ ಹೇಳಿದ್ದರು. ಆದರೆ, ನಾವು ಆಯ್ಕೆ ಮಾನದಂಡವನ್ನು ತಲುಪಿಲ್ಲ ಎಂದು ಈಗ ಅವರು ಹೇಳುತ್ತಿದ್ದಾರೆ. ಭುವನೇಶ್ವರದಲ್ಲಿ ನನಗೆ ಯಾರೂ ಸ್ಪರ್ಧೆ ಒಡ್ಡಿರಲಿಲ್ಲ. ತಂಡದಲ್ಲಿ ಸ್ಥಾನ ಪಡೆಯಲು ಚಿನ್ನ ಗೆಲ್ಲಬೇಕೆಂಬ ಗುರಿ ಹಾಕಿಕೊಂಡಿದ್ದೆ. ಆ ನಿಟ್ಟಿನಲ್ಲಿ ಯಶಸ್ವಿಯಾಗಿದ್ದೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ನಡೆದ ಶಿಬಿರದಲ್ಲಿ ನಾನು ಭಾಗವಹಿಸಿ ಸಾಕಷ್ಟು ಅಭ್ಯಾಸ ನಡೆಸಿದ್ದೇನೆ. ಇದೀಗ ರಾಷ್ಟ್ರೀಯ ಅಥ್ಲೀಟ್‌ಗಳ ತಂಡದಿಂದ ಹೊರಗಿಡಲಾಗಿದೆ. ನಾನು ಈಗಾಗಲೇ ಎರಡು ಒಲಿಂಪಿಕ್ಸ್ ಹಾಗೂ 2 ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆಡಿದ್ದಾಗಿ ಅವರು ಹೇಳುತ್ತಿದ್ದಾರೆ’’ ಎಂದು 2010ರ ಏಷ್ಯಾ ಚಾಂಪಿಯನ್ ಸುಧಾ ಬೇಸರ ವ್ಯಕ್ತಪಡಿಸಿದರು.

ಸುಧಾ ಆಯ್ಕೆಗಾರರ ವಿರುದ್ಧ ಕಿಡಿಕಾರಿದರೆ, ಕೇರಳದ ಅಥ್ಲೀಟ್ ಚಿತ್ರಾ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.
ಎಎಫ್‌ಐನ ಮಾಜಿ ಅಧಿಕಾರಿಯೊಬ್ಬರು ಆಯ್ಕೆಗಾರರು ಮೂವರು ಅಥ್ಲೀಟ್‌ಗಳನ್ನು ತಂಡದಿಂದ ಹೊರಗಿಟ್ಟಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

‘‘ಕಳಪೆ ಟೈಮಿಂಗ್‌ನ ಕಾರಣ ನೀಡಿ ಮೂವರು ಅಥ್ಲೀಟ್‌ಗಳನ್ನು ಹೊರಗಿಡಲಾಗಿದೆ. ಆದರೆ, ಅರ್ಹತಾ ಮಾರ್ಕನ್ನು ತಲುಪದ ಜಿ. ಲಕ್ಷ್ಮಣನ್‌ರನ್ನು ಆಯ್ಕೆ ಮಾಡಲಾಗಿದೆ. ಪುರುಷರ 4x400 ಮೀ. ರಿಲೇ ತಂಡಕ್ಕೆ ಸಚಿನ್ ರಾಬಿ ಅವರನ್ನು ಆಯ್ಕೆ ಮಾಡಿರುವುದು ನನಗೆ ಅಚ್ಚರಿ ತಂದಿದೆ. ಸಚಿನ್ ಗುಂಟೂರ್‌ನಲ್ಲಿ ನಡೆದಿದ್ದ ಅಂತರ್-ರಾಜ್ಯ ಕ್ರೀಡಾಕೂಟದಲ್ಲಿ 400ಮೀ.ಫೈನಲ್‌ನಲ್ಲಿ 7ನೆ ಸ್ಥಾನ ಪಡೆದಿದ್ದರು’’ ಎಂದು ಎಎಫ್‌ಐನ ಮಾಜಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X