Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾನವ ಬಂಧುತ್ವ ವೇದಿಕೆಯಿಂದ...

ಮಾನವ ಬಂಧುತ್ವ ವೇದಿಕೆಯಿಂದ ಆಸ್ಪತ್ರೆಯಲ್ಲಿ ಹಾಲು ವಿತರಣೆ

ವಾರ್ತಾಭಾರತಿವಾರ್ತಾಭಾರತಿ27 July 2017 7:36 PM IST
share
ಮಾನವ ಬಂಧುತ್ವ ವೇದಿಕೆಯಿಂದ ಆಸ್ಪತ್ರೆಯಲ್ಲಿ ಹಾಲು ವಿತರಣೆ

ಚಿಕ್ಕಮಗಳೂರು, ಜು.27: ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಬಸವ ಪಂಚಮಿ ಆಚರಣೆಯ ಮೂಲಕ ವೈಚಾರಿಕ ಸಂದೇಶವನ್ನು ನೀಡುತ್ತಿರುವುದಾಗಿ ಮಾನವ ಬಂಧುತ್ವ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮೋಹನ್ ಆರದವಳ್ಳಿ ತಿಳಿಸಿದರು.

ಅವರು ಗುರುವಾರ ಬಸವ ಪಂಚಮಿ ಅಂಗವಾಗಿ ಜಿಲ್ಲಾ ಮಕ್ಕಳ ಆಸ್ಪತ್ರೆಯಲ್ಲಿ ವಿವಿಧ ರೋಗಿಗಳಿಗೆ ಬಿಸಿ ಹಾಲು, ಹಣ್ಣು-ಹಂಪಲು ವಿತರಿಸಿ ಮಾತನಾಡಿದರು.

ರಾಜ್ಯದಾದ್ಯಂತ ಸುಮಾರು 1000 ಕ್ಕಿಂತಲೂ ಅಧಿಕ ಕೇಂದ್ರಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಹಲವು ಅಧ್ಯಯನಗಳ ಪ್ರಕಾರ ರಾಜ್ಯದ     ಸಂಭವಿಸುವ ಶಿಶು ಮರಣಗಳಲ್ಲಿ ಅಪೌಷ್ಟಿಕತೆ ಪ್ರಮುಖ ಕಾರಣವಾಗಿದೆ. ರಾಜ್ಯದಲ್ಲಿ ಒಂದು ವರ್ಷದೊಳಗಿನ ಮಕ್ಕಳ ಮರಣ ಶೆ.43ರಷ್ಟಿದೆ ಎಂದು ವಿವರ ನೀಡಿದರು.

ಇಂದು ಎಲ್ಲೆಡೆಯೂ ಧಾರ್ಮಿಕ ಆಚರಣೆಯ ಹೆಸರಲ್ಲಿ, ಜನರ ಭಾವನೆಗಳ ಹೆಸರಲ್ಲಿ ಹುತ್ತಕ್ಕೆ ಹಾಲು ಹಾಕುವ ಕಾರ್ಯ ಎಗ್ಗಿಲ್ಲದೆ ನಡೆಯುತ್ತಿದೆ. ಅಂತದ್ದನ್ನು ಕೆಲವರು ಪ್ರೋತ್ಸಾಹಿಸುವುದು ನಡೆಯುತ್ತಿದೆ. ಹುತ್ತಕ್ಕೆ ಎರೆಯುವ ಹಾಲನ್ನು ಅಪೌಷ್ಟಿಕಾಂಶದಿಂದ ಬಳಲುತ್ತಿರುವ ಮಕ್ಕಳಿಗೆ ನೀಡಿದರೆ ಆರೋಗ್ಯ ಸರಿ ಮಾಡಬಹುದು. ಆದ್ದರಿಂದ ಹಾಲನ್ನು ವಿನಾ ಕಾರಣ ನಾಶಪಡಿಸುವಂತಹ ಜೀವ ವಿರೊಧಿ ಆಚರಣೆಗಳಿಗೆ ಕಡಿವಾಣ ಹಾಕುವುದು ಅಗತ್ಯ ಎಂದು ಹೇಳಿದರು.

ಜನದನಿ ಸಂಘಟನೆಯ ಸಂಚಾಲಕ ಬಿ.ಅಮ್ಜದ್ ಮಾತನಾಡಿ, ಈ ನಾಡಿನ ಪ್ರಜ್ನಾವಂತರು ಕಾರ್ಯಕ್ರಮದ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು. ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಜನರು ಇಂದು ಕೂಡ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇದರಿಂದ ಅನೇಕರು ಆರೋಗ್ಯದ ಸಮಸ್ಯೆಗಳಿಗೆ ಬಲಿಯಾಗುತ್ತಿದ್ದಾರೆ. ಇಂತಹ ಪರಿಸ್ಥಿತಿ ಇರುವಾಗ ಉತ್ಕೃಷ್ಟ ಪೋಷಕಾಂಶಭರಿತ ಹಾಲು ಪೋಲು ಮಾಡುವುದು ಸರಿಯಲ್ಲ ಎಂದು ಸಾಮಾನ್ಯ ಜನರಿಗೆ ಮನವರಿಕೆ ಮಾಡಬೇಕಾಗಿದೆ ಎಂದು ನುಡಿದರು.

ಈ ಸಮಯದಲ್ಲಿ ಜಿಲ್ಲಾ ಸರ್ಜನ್ ಡಾ.ಡೊಡ್ಡಮಲ್ಲಪ್ಪ, ಡಾ.ನಾಗೇಂದ್ರ, ಕಬ್ಬಿಗೆರೆ ಮೋಹನ್, ನಲ್ಲೂರು ಪುಟ್ಟಸ್ವಾಮಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X