Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಮಹಿಳಾ ಕ್ರಿಕೆಟಿಗರಿಗೆ...

ಭಾರತದ ಮಹಿಳಾ ಕ್ರಿಕೆಟಿಗರಿಗೆ ರೈಲ್ವೆಯಿಂದ 1.30 ಕೋ.ರೂ. ಉಡುಗೊರೆ

ವಾರ್ತಾಭಾರತಿವಾರ್ತಾಭಾರತಿ27 July 2017 11:31 PM IST
share
ಭಾರತದ ಮಹಿಳಾ ಕ್ರಿಕೆಟಿಗರಿಗೆ ರೈಲ್ವೆಯಿಂದ 1.30 ಕೋ.ರೂ. ಉಡುಗೊರೆ

ಹೊಸದಿಲ್ಲಿ, ಜು.27: ಭಾರತೀಯ ರೈಲ್ವೆಯಲ್ಲಿ ಉದ್ಯೋಗಿಗಳಾಗಿರುವ ಭಾರತದ ಮಹಿಳಾ ಕ್ರಿಕೆಟ್ ತಂಡದ 10 ಸದಸ್ಯೆಯರಿಗೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಗುರುವಾರ 1.30 ಕೋ.ರೂ. ಬಹುಮಾನ ಘೋಷಿಸಿದ್ದಾರೆ. ನಾಯಕಿ ಮಿಥಾಲಿ ರಾಜ್ ಹಾಗೂ ಉಪ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ಪತ್ರಾಂಕಿತ ಅಧಿಕಾರಿ ಆಗಿ ಭಡ್ತಿ ನೀಡಲಾಗಿದ್ದು, ತಂಡದ ಉಳಿದ ಆಟಗಾರ್ತಿಯರಿಗೂ ಭಡ್ತಿ ನೀಡಲಾಗಿದೆ ಎಂದು ಪ್ರಭು ಘೋಷಿಸಿದರು.

‘‘ವಿಶ್ವಕಪ್‌ನಲ್ಲಿ ಮಹಿಳಾ ತಂಡದ ಸಾಧನೆಯು ರೈಲ್ವೆಗೆ ವಿಶೇಷ ಹೆಮ್ಮೆ ತಂದಿದೆ. 15 ವಿಶ್ವ ದರ್ಜೆಯ ಕ್ರಿಕೆಟಿಗರ ಪೈಕಿ 10 ಮಂದಿ ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದಾರೆ. ನಾಯಕಿ, ಉಪನಾಯಕಿ, ವಿಕೆಟ್‌ಕೀಪರ್, ಗರಿಷ್ಠ ಸ್ಕೋರರ್ ಎಲ್ಲರೂ ರೈಲ್ವೆಯ ಉದ್ಯೋಗಿಗಳಾಗಿದ್ದಾರೆ’’ ಎಂದು ರೈಲ್ವೆ ಭವನದಲ್ಲಿ ಮಹಿಳಾ ಕ್ರಿಕೆಟಿಗರನ್ನು ಗೌರವಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಭು ತಿಳಿಸಿದ್ದಾರೆ.

 ‘‘ಮಾಜಿ ನಾಯಕಿ ಡಯಾನಾ ಎಡುಲ್ಜಿ ಅವರ ಬಳಿ ನೀವು ಯಾವಾಗ ಕ್ರಿಕೆಟ್ ಆಡಲು ಆರಂಭಿಸಿದ್ದೀರಿ ಎಂದು ಕೇಳಿದೆ. ಅದಕ್ಕೆ ಅವರು 1971ರಲ್ಲಿ ಕ್ರಿಕೆಟ್ ಆಡಲು ಆರಂಭಿಸಿದ್ದಾಗಿ ಹೇಳಿದರು. 46 ವರ್ಷಗಳ ಹಿಂದೆಯೇ ಅವರು ಕ್ರಿಕೆಟ್ ಆಡಲು ಆರಂಭಿಸಿದ್ದರು. ನಮ್ಮ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್‌ನ ಫೈನಲ್‌ಗೆ ತಲುಪಬಹುದೆಂದು ಎಡುಲ್ಜಿ ಕೂಡ ಯೋಚಿಸಿರಲಿಲ್ಲ. ಯಾರೂ ಕೂಡ ಮಹಿಳಾ ತಂಡ ಇಷ್ಟೊಂದು ಸಾಧನೆ ಮಾಡುತ್ತದೆ ಎಂದು ನಿರೀಕ್ಷಿಸಿರಲಿಲ್ಲ’’ಎಂದು ಪ್ರಭು ಅಭಿಪ್ರಾಯಪಟ್ಟರು.

ಕ್ರೀಡಾ ಸಚಿವ ವಿಜಯ್ ಗೋಯೆಲ್‌ರಿಂದ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಸನ್ಮಾನ

ಮಹಿಳೆಯರ ಐಸಿಸಿ ವಿಶ್ವಕಪ್‌ನಲ್ಲಿ ಚಿತ್ತಾಕರ್ಷಕ ಪ್ರದರ್ಶನ ನೀಡಿದ್ದ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯೆಲ್ ಗುರುವಾರ ಸನ್ಮಾನಿಸಿದರು. ರವಿವಾರ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ತನಕ ಹೋರಾಟ ನೀಡಿದ್ದ ಭಾರತ 9 ರನ್‌ಗಳಿಂದ ಸೋತಿತ್ತು. ವೀರೋಚಿತ ಸೋಲುಂಡಿದ್ದ ಭಾರತ ಇಡೀ ದೇಶದ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿತ್ತು.

‘‘ನಮ್ಮ ಮಹಿಳಾ ಕ್ರಿಕೆಟ್ ತಂಡ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಈ ತಂಡವನ್ನು ಎಷ್ಟು ಶ್ಲಾಘಿಸಿದರೂ ಕಡಿಮೆ. ಟೂರ್ನಿಯಲ್ಲಿ ರನ್ನರ್-ಅಪ್ ಎನಿಸಿಕೊಂಡರೂ ಇಡೀ ದೇಶದ ಜನತೆಯ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕ್ರಿಕೆಟ್ ಆಟಗಾರ್ತಿಯರು ದೇಶದ ಮಿಲಿಯನ್ ಯುವತಿಯರಿಗೆ ಸ್ಫೂರ್ತಿಯಾಗಿದಾರೆ’’ ಎಂದು ಗೋಯೆಲ್ ತಿಳಿಸಿದ್ದಾರೆ.

‘‘ರಿಯೋ ಒಲಿಂಪಿಕ್ಸ್‌ನಿಂದ ಪ್ಯಾರಾಲಿಂಪಿಕ್ಸ್ ತನಕ, ಹಾಕಿ, ಕುಸ್ತಿ, ಬ್ಯಾಡ್ಮಿಂಟನ್ ಹಾಗೂ ಇದೀಗ ಮಹಿಳಾ ವಿಶ್ವಕಪ್‌ನಲ್ಲೂ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದೆ. ಮಹಿಳೆಯರ ಈ ಪ್ರದರ್ಶನ ಮುಂಬರುವ ಅಂಡರ್-17 ವಿಶ್ವಕಪ್‌ನಲ್ಲಿ ಭಾರತದ ಫುಟ್ಬಾಲ್ ತಂಡ ಉತ್ತಮ ಪ್ರದರ್ಶನ ನೀಡಲು ಪ್ರೇರಣೆಯಾಗಲಿ’’ ಎಂದು ಗೋಯೆಲ್ ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X