Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರಕ್ಕೆ...

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರಕ್ಕೆ ಪ್ರಧಾನಿ ಮೋದಿ ಆಸಕ್ತಿ ತೋರಲಿ: ಕೆ.ಷರೀಫಾ

‘ಸಂವಿಧಾನ ಬಚಾವೋ-ದೇಶ್ ಬಚಾವೋ’ ಮಹಿಳಾ ಜಾಗೃತಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ28 July 2017 6:02 PM IST
share

ಬೆಂಗಳೂರು, ಜು. 28: ‘ನೋಟುಗಳ ಅಮಾನ್ಯೀಕರಣಗೊಳಿಸುವ ಮತ್ತು ಜಿಎಸ್ಟಿಯನ್ನು ರಾತ್ರೋರಾತ್ರಿ ಜಾರಿಗೆ ತರಲು ಪ್ರಧಾನಿ ಮೋದಿ ತೋರಿದ ಆಸಕ್ತಿಯನ್ನು ಸಂಸತ್ತಿನಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರಲು ತೋರಿಸಲಿ’ ಎಂದು ಲೇಖಕಿ ಡಾ.ಕೆ.ಶರೀಫಾ ಸವಾಲು ಹಾಕಿದರು.

ಶುಕ್ರವಾರ ನಗರದ ಸೆಂಟ್ರಲ್ ಕಾಲೇಜಿನ ಸೆನೆಟ್ ಹಾಲ್‌ನಲ್ಲಿ ಕರ್ನಾಟಕ ದಲಿತ ಮಹಿಳಾ ಒಕ್ಕೂಟ ಹಾಗೂ ದಲಿತ ಸಂಘರ್ಷ ಸಮಿತಿ(ಭೀಮವಾದ) ಆಯೋಜಿಸಿದ್ದ ‘ಸಂವಿಧಾನ ಬಜಾವೋ-ದೇಶ್ ಬಜಾವೋ’ ಮಹಿಳಾ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಹಿಳಾ ಮೀಸಲಾತಿ ಕುರಿತ ವಿಧೇಯಕವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಂಸತ್ತಿನಲ್ಲಿ ಮಂಡಿಸಿ 21 ವರ್ಷಗಳೇ ಕಳೆದರೂ ಇನ್ನೂ ಜಾರಿಗೊಳ್ಳದಿರುವುದು ನಾಚಿಕೆಗೇಡಿನ ಸಂಗತಿ. ದೇಶದಲ್ಲಿನ 1,600 ಮಹಿಳಾ ಸಂಘಟನೆಗಳು ಮಹಿಳಾ ಮೀಸಲಾತಿ ಕುರಿತು ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಹಿಳಾ ಮೀಸಲಾತಿಗೆ ಒಪ್ಪಿಗೆ ನೀಡಿದರೆ ತಮ್ಮ ಸ್ಥಾನಗಳಿಗೆ ಎಲ್ಲಿ ಕುತ್ತು ಬರುತ್ತೆ ಎಂದು ಅಲಕ್ಷ ತೋರುತ್ತಿದ್ದಾರೆ ಎಂದು ದೂರಿದರು.

ಸಂವಿಧಾನ ದಲಿತ, ಮಹಿಳೆಯರ ರಕ್ಷಣೆ ನಿಲ್ಲುತ್ತದೆ ಎಂದು ಅನುಮಾನ ಕಾಡತೊಡಗಿದೆ. ಸಂವಿಧಾನವನ್ನು ವಿರೋಧಿಸುತ್ತಿದ್ದ ಆರ್‌ಎಸ್‌ಎಸ್ ನಾಯಕರನ್ನೇ ನೂತನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುರಸ್ಕರಿಸುತ್ತಿದ್ದಾರೆ. ರಾಷ್ಟ್ರಪತಿ ಸ್ಥಾನ ಸ್ವೀಕರಿಸಿದ ಬಳಿಕ ಮಾತನಾಡಿದ ಮೊದಲ ಭಾಷಣದಲ್ಲಿ ಅಂಬೇಡ್ಕರ್ ಅವರ ಕುರಿತು ಒಂದೇ ಒಂದು ಮಾತನ್ನು ಕೂಡ ಆಡದ ಕೋವಿಂದ್ ಹೇಗೆ ದಲಿತರ ‘ರಕ್ಷಕ ಮತ್ತು ಪ್ರತಿನಿಧಿ’ ಆಗುತ್ತಾರೆ ಎಂದು ಪ್ರಶ್ನಿಸಿದರು.

ಪಠ್ಯ ಪುಸ್ತಕಗಳಲ್ಲಿ ರಾಷ್ಟ್ರಕವಿ ಟ್ಯಾಗೂರ್ ಅವರ ತತ್ವ ಹಾಗೂ ಉರ್ದು ಪದಗಳನ್ನು ತೆಗೆಯಬೇಕು ಎಂದು ಆರೆಸೆಸ್ಸ್ ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಬಹುತ್ವಕ್ಕೆ ಕೊಂಕು ತರುತ್ತಿರುವ ಮನುವಾದಿಗಳ ವಿರುದ್ಧ ಮಹಿಳೆಯರನ್ನು ಜಾಗೃತಗೊಳಿಸಬೇಕಿದೆ ಎಂದು ತಿಳಿಸಿದರು.

ಸಂವಿಧಾನದ ಮೇಲೆ ಸರ್ಜಿಕಲ್ ದಾಳಿ: ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಸಂವಿಧಾನದ ಮೇಲೆ ರಾತ್ರೋರಾತ್ರಿ ಸರ್ಜಿಕಲ್ ದಾಳಿ ಮಾಡಿ ಮನುವಾದ ಶಾಸ್ತ್ರ ಜಾರಿಗೆ ತರುವ ಕಾಲ ದೂರವೇನಿಲ್ಲ ಎಂದು ದಲಿತ ಸಂಘರ್ಷ ಸಮಿತಿ(ಭೀಮವಾದ)ದ ಅಧ್ಯಕ್ಷ ಆರ್.ಮೋಹನ್ ರಾಜ್ ಭೀತಿ ವ್ಯಕ್ತಪಡಿಸಿದರು.

ಮೂಲಭೂತ ಹಕ್ಕುಗಳ ಮೇಲೆ ದಾಳಿ ಮಾಡುತ್ತಿರುವ ಕೋಮುವಾದಿ ಮತ್ತು ಸಂವಿಧಾನ ವಿರೋಧಿಗಳ ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕಿದೆ. ಈ ಕುರಿತು ದೇಶದ ಪ್ರತಿ ಗ್ರಾಮದಲ್ಲಿ ಮಹಿಳೆಯರನ್ನು ಸುಶಿಕ್ಷಿತರನ್ನಾಗಿಸಲು ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಆಂದೋಲನ ರೂಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಡಾ.ಕಾವಲಮ್ಮ, ಸಮಿತಿಯ ಕಾರ್ಯಾಧ್ಯಕ್ಷ ಬಸವರಾಜ್ ಕೌತಾಳ್, ದಲಿತ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಡಾ.ಮನೋಹರ್ ಚಂದ್ರ ಪ್ರಸಾದ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X