Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಲಿ ಹುದ್ದೆಯಿಂದ ಆಡಳಿತಕ್ಕೆ ಸಂಕಷ್ಟ:...

ಖಾಲಿ ಹುದ್ದೆಯಿಂದ ಆಡಳಿತಕ್ಕೆ ಸಂಕಷ್ಟ: ಸದಸ್ಯರ ಕಳವಳ

ಎಪಿಎಂಸಿ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ28 July 2017 7:00 PM IST
share
ಖಾಲಿ ಹುದ್ದೆಯಿಂದ ಆಡಳಿತಕ್ಕೆ ಸಂಕಷ್ಟ: ಸದಸ್ಯರ ಕಳವಳ

ಪುತ್ತೂರು, ಜು.28: ವರ್ಷಕ್ಕೆ 6 ಕೋಟಿ ಆದಾಯ ಹೊಂದಿರುವ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆಡಳಿತ ವಿಭಾಗದಲ್ಲಿ ಕೆಲಸ ಮಾಡಲು 15 ಹುದ್ದೆಗಳು ಮಂಜೂರುಗೊಂಡಿದ್ದು, ಇದೀಗ ಕೇವಲ 3 ಮಂದಿ ಮಾತ್ರ ಕರ್ತವ್ಯದಲ್ಲಿರುವಾಗ ಎಪಿಎಂಸಿ ಕೆಲಸ ಮಾಡುವ ಬಗೆ ಹೇಗೆ ಎಂಬ ವಿಚಾರದ ಬಗ್ಗೆ ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ಬಾರೀ ಚರ್ಚೆ ನಡೆಯಿತು.
 
ಶುಕ್ರವಾರ ಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಿರ್ದೇಶಕರಾದ ಪುಲಸ್ತ್ಯಾ ರೈ, ದಿನೇಶ್ ಮೆದು, ತೀರ್ಥಾನಂದ ದುಗ್ಗಳ, ತ್ರಿವೇಣಿ ಪೆರ್ವೋಡಿ, ಮಂಜುನಾಥ್ ಎನ್.ಎಸ್., ಕೃಷ್ಣ ಕುಮಾರ್ ರೈ ಕೆದಂಬಾಡಿ ಗುತ್ತು ಮತ್ತಿತರರು ಪುತ್ತೂರು ಎಪಿಎಂಸಿಯಲ್ಲಿ ಪ್ರಭಾರ ನೆಲೆಯಲ್ಲಿದ್ದ ಕಾರ್ಯದರ್ಶಿ ಎಷ್.ಕೆ. ಕೃಷ್ಣ ಮೂರ್ತಿ ಜುಲಾಯಿ 31ಕ್ಕೆ ನಿವೃತ್ತಿ ಹೊಂದಲಿದ್ದು, ನಂತರ ಕೇವಲ ಇಬ್ಬರು ಮಾತ್ರ ಉಳಿಯುತ್ತಾರೆ. ಸರಕಾರ ಈ ಹುದ್ದೆಗಳನ್ನು ಭರ್ತಿ ಮಾಡದೇ ಹೋದರೆ ಇಲ್ಲಿ ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಎಪಿಎಂಸಿಗೆ ಆರೂವರೆ ಕೋಟಿ ಆದಾಯವಿದೆ. ಇದರಲ್ಲಿ ಸರಕಾರದ ಸಂಚಿತ ನಿಧಿಗೆ ತಿಂಗಳಿಗೆ ಸುಮಾರು 10 ಲಕ್ಷದಷ್ಟು ಮೊತ್ತವನ್ನು ಪಾವತಿ ಮಾಡುತ್ತಿದ್ದೇವೆ. ರಾಜ್ಯ ಕೃಷಿ ಮಾರಾಟ ಮಂಡಳಿಗೆ ವಂತಿಗೆ, ಕೃಷಿ ವಿಶ್ವವಿದ್ಯಾನಿಲಯ ವಂತಿಗೆ, ಆವರ್ತ ನಿಧಿಗೆ ಹಣ ಪಾವತಿ ಮಾಡಲಾಗುತ್ತದೆ. ನಮಗೆ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಕೊಡಲು ಸರಕಾರಕ್ಕೇನು ಸಮಸ್ಯೆ ಎಂದು ನಿರ್ದೇಶಕರು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಮಾತನಾಡಿದ ಎಪಿಎಂಸಿ ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಇಲಾಖೆಯ ಜಂಟಿ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಸಿಬ್ಬಂದಿ ಸಮಸ್ಯೆ ಬಗ್ಗೆ ಗಮನ ಸೆಳೆಯಲಾಗಿದೆ. ಒಬ್ಬ ಖಾಯಂ ಕಾರ್ಯದರ್ಶಿಯನ್ನು ನೀಡುವಂತೆ ವಿನಂತಿಸಲಾಗಿದೆ. ಸಮಿತಿ ಸಭೆಯ ನಿರ್ಣಯವನ್ನೂ ಕಳುಹಿಸಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ಖಾಯಂ ಕಾರ್ಯದರ್ಶಿ ಸಿಗುವ ನಿರೀಕ್ಷೆ ಇದೆ ಎಂದರು.

ಪ್ರಭಾರ ಕಾರ್ಯದರ್ಶಿ ಎಚ್.ಕೆ. ಕೃಷ್ಣಮೂರ್ತಿ ಮಾತನಾಡಿ, ರಾಜ್ಯದ ಎಪಿಎಂಸಿಗಳಲ್ಲಿ ಹಿಂದೆ 3500 ಹುದ್ದೆಗಳಿತ್ತು. ಈಗ 6500 ಸಾವಿರಕ್ಕೇರಿದೆ. ಇದರಲ್ಲಿ ಕೇವಲ 1200 ಹುದ್ದೆಗಳನ್ನು ಮಾತ್ರ ಭರ್ತಿಯಾಗಿದೆ. ಉಳಿದೆಲ್ಲ ಹುದ್ದೆಗಳನ್ನು ಆಯಾ ಎಪಿಎಂಸಿಗಳೇ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿವೆ. ನಮ್ಮ ಎಪಿಎಂಸಿಗೆ ಎಂಜಿನಿಯರ್ ಕೂಡ ಇಲ್ಲ. ಎಂಟು ಎಪಿಎಂಸಿಗೆ ಒಬ್ಬರು ಎಂಜಿನಿಯರ್ ಇದ್ದು, ಅವರೇ ಇಲ್ಲಿಗೂ ಬಂದು ಹೋಗುತ್ತಿದ್ದಾರೆ ಎಂದರು. ಪುತ್ತೂರು ಎಪಿಎಂಸಿ ಹುದ್ದೆಗಳನ್ನು ಭರ್ತಿ ಮಾಡುವಂತೆ ವಿನಂತಿಸಿ ಇಲಾಖೆಗೆ ಬರೆಯಲು ನಿರ್ಣಯ ಕೈಗೊಳ್ಳಲಾಯಿತು.

ಎಪಿಎಂಸಿ ಉಪಾಧ್ಯಕ್ಷ ಬಾಲಕೃಷ್ಣ ಬಾಣಜಾಲು, ನಿರ್ದೇಶಕರಾರ ಶಕೂರ್ ಹಾಜಿ, ತ್ರಿವೇಣಿ ಕರುಣಾಕರ ಪೆರ್ವೋಡಿ, ಪುಲಸ್ತ್ಯಾ ರೈ, ದಿನೇಶ್ ಮೆದು, ಮೇದಪ್ಪ ಗೌಡ, ಕೊರಗಪ್ಪ, ಕುಶಾಲಪ್ಪ ಗೌಡ ಅನಿಲ, ಕಾರ್ತಿಕ್ ರೈ, ತೀರ್ಥಾನಂದ ದುಗ್ಗಳ, ಕೃಷ್ಣ ಕುಮಾರ್ ರೈ, ಮಂಜುನಾಥ ಎನ್.ಎಸ್., ನಾಮ ನಿರ್ದೇಶಿತರಾದ ಗೀತಾ ದಾಸರಮೂಲೆ, ಶಶಿಕಿರಣ್ ರೈ, ರಾಮಕೃಷ್ಣ ಉಪಸ್ಥಿತರಿದ್ದರು. ಲೆಕ್ಕಪತ್ರ ವಿಭಾಗದ ರಾಮಚಂದ್ರ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X