Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 3 ಬಾರಿಯೂ ಅರ್ಧದಲ್ಲೇ ಅಧಿಕಾರ ಕಳೆದುಕೊಂಡ...

3 ಬಾರಿಯೂ ಅರ್ಧದಲ್ಲೇ ಅಧಿಕಾರ ಕಳೆದುಕೊಂಡ ಶರೀಫ್

ವಾರ್ತಾಭಾರತಿವಾರ್ತಾಭಾರತಿ28 July 2017 9:09 PM IST
share
3 ಬಾರಿಯೂ ಅರ್ಧದಲ್ಲೇ ಅಧಿಕಾರ ಕಳೆದುಕೊಂಡ ಶರೀಫ್

ಇಸ್ಲಾಮಾಬಾದ್, ಜು. 28: ‘ಪಂಜಾಬ್‌ನ ಹುಲಿ’ ಎಂಬ ಖ್ಯಾತಿ ಹೊಂದಿರುವ ನವಾಝ್ ಶರೀಫ್ ರಾಜಕೀಯವಾಗಿ ಅಸ್ಥಿರವಾಗಿರುವ ಪಾಕಿಸ್ತಾನದಲ್ಲಿ ದಾಖಲೆಯ ಮೂರು ಬಾರಿಗೆ ಪ್ರಧಾನಿಯಾಗಿದ್ದಾರೆ. ಆದರೆ, ತನ್ನ ಅಧಿಕಾರಾವಧಿಯನ್ನು ಸಂಪೂರ್ಣಗೊಳಿಸಲು ಅವರು ಪ್ರತಿ ಬಾರಿಯೂ ವಿಫಲರಾಗಿದ್ದಾರೆ.

ಮೊದಲನೆ ಬಾರಿ ಅಧ್ಯಕ್ಷರು ಅವರ ದಾರಿಗೆ ಅಡ್ಡವಾದರೆ, ಎರಡನೆ ಬಾರಿ ಸೇನೆ ಮತ್ತು ಈಗ ಮೂರನೆ ಬಾರಿ ನ್ಯಾಯಾಂಗ ಅವರ ಅಧಿಕಾರವನ್ನು ಮೊಟಕುಗೊಳಿಸಿದೆ.

2013 ಜೂನ್‌ನಲ್ಲಿ ಮೂರನೆ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ತನಗೆದುರಾದ ಎಲ್ಲ ‘ಸುನಾಮಿ’ಗಳನ್ನು ನಿಭಾಯಿಸಿ ಸುಲಲಿತವಾಗಿ ಈಜುವಲ್ಲಿ ಅವರು ಯಶಸ್ವಿಯಾಗಿದ್ದರು. ಆದರೆ, ಪನಾಮಗೇಟ್ ಹಗರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ನೀಡಿರುವ ತೀರ್ಪು ಅವರ ರಾಜಕೀಯ ಜೀವನಕ್ಕೆ ಪ್ರಬಲ ಆಘಾತ ನೀಡಿದೆ.

ಉಕ್ಕು ಉದ್ಯಮಿ ಹಾಗೂ ರಾಜಕಾರಣಿ ಶರೀಫ್ ಮೊದಲ ಬಾರಿ 1990ರಿಂದ 1993ರವರೆಗೆ ಪ್ರಧಾನಿಯಾಗಿದ್ದರು.

ಆ ಅವಧಿಯಲ್ಲಿ ಸಂಪ್ರದಾಯವಾದಿ ಅಧ್ಯಕ್ಷ ಗುಲಾಮ್ ಇಶಾಕ್ ಖಾನ್ ಜೊತೆ ತೀವ್ರ ಭಿನ್ನಾಭಿಪ್ರಾಯಗಳನ್ನು ಬೆಳೆಸಿಕೊಂಡರು. ಅಧ್ಯಕ್ಷರು 1993 ಎಪ್ರಿಲ್‌ನಲ್ಲಿ ತನ್ನ ವಿಶೇಷಾಧಿಕಾರವನ್ನು ಬಳಸಿ ನ್ಯಾಶನಲ್ ಅಸೆಂಬ್ಲಿಯನ್ನು ವಿಸರ್ಜಿಸಿದರು.

ಸೇನೆಯಿಂದ ಒತ್ತಡಕ್ಕೊಳಗಾದ ಹಿನ್ನೆಲೆಯಲ್ಲಿ, ಶರೀಫ್ ಜುಲೈನಲ್ಲಿ ರಾಜೀನಾಮೆ ನೀಡಿದರು. ಜೊತೆಗೆ, ಅಧ್ಯಕ್ಷರು ಕೂಡ ಅಧಿಕಾರ ಕಳೆದುಕೊಳ್ಳುವಂತೆ ನೋಡಿಕೊಂಡರು.

 ಶರೀಫ್ ಎರಡನೆ ಬಾರಿಗೆ 1997ರಲ್ಲಿ ಪಾಕ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. 1999ರಲ್ಲಿ ಸೇನಾ ಮುಖ್ಯಸ್ಥ ಪರ್ವೇಝ್ ಮುಶರ್ರಫ್ ಕ್ರಿಪ್ರಕ್ರಾಂತಿ ನಡೆಸಿ ಶರೀಫ್‌ರನ್ನು ಪದಚ್ಯುತಗೊಳಿಸಿದರು.

ಮುಶರ್ರಫ್ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಭೂಸ್ಪರ್ಶ ಮಾಡಲು ಅವಕಾಶ ನಿರಾಕರಿಸಲಾದ ಪ್ರಕರಣದಲ್ಲಿ ಅವರಿಗೆ ಜೈಲು ಶಿಕ್ಷೆಯಾಯಿತು. ಬಳಿಕ ಅವರು ಸೌದಿ ಅರೇಬಿಯಕ್ಕೆ ದೇಶಭ್ರಷ್ಟರಾಗಿ ತೆರಳಿದರು ಹಾಗೂ 2007ರವರೆಗೆ ಪಾಕಿಸ್ತಾನಕ್ಕೆ ಹಿಂದಿರುಗಲಿಲ್ಲ.

 2013ರಲ್ಲಿ ನಡೆದ ಚುನಾವಣೆಯಲ್ಲಿ ಅವರ ಪಾಕಿಸ್ತಾನ್ ಮುಸ್ಲಿಮ್ ಲೀಗ್-ಎನ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಪಕ್ಷೇತರರ ನೆರವನ್ನು ಪಡೆದುಕೊಂಡು ಅವರು ಮೂರನೆ ಬಾರಿಗೆ ಅಧಿಕಾರಕ್ಕೆ ಬಂದರು.

ಶರೀಫ್ ದಿನಗಳು ಮುಗಿದಿಲ್ಲ: ಪಿಎಂಎಲ್-ಎನ್

 ನವಾಝ್ ಶರೀಫ್‌ರನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ ಪಾಕಿಸ್ತಾನದ ಪ್ರತಿಪಕ್ಷಗಳು ಸಂಭ್ರಮಿಸುತ್ತಿರುವಂತೆಯೇ, ಶರೀಫ್‌ರ ದಿನಗಳು ಇನ್ನೂ ಮುಗಿದಿಲ್ಲ ಎಂದು ಆಡಳಿತಾರೂಢ ಪಿಎಂಎಲ್-ಎನ್ ನಾಯಕರು ಹೇಳಿದ್ದಾರೆ.

‘‘ಇದು ಪಿಎಂಎಲ್-ಎನ್‌ಗೆ ಕಷ್ಟದ ಸಮಯ. ಆದರೆ ಪಕ್ಷದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ನವಾಝ್ ಶರೀಫ್ ಬಳಿಯೇ ಇದೆ’’ ಎಂದು ಪಂಜಾಬ್ ಕಾನೂನು ಸಚಿವ ರಾಣಾ ಸನಾವುಲ್ಲಾ ಸುಪ್ರೀಂ ಕೋರ್ಟ್ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X