Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರಿಯಾಲ ಮಠಾಧ್ಯಕ್ಷರಾದ ಶ್ರೀ...

ಮರಿಯಾಲ ಮಠಾಧ್ಯಕ್ಷರಾದ ಶ್ರೀ ಮಹಾಂತಸ್ವಾಮಿ ನಿಧನ

ವಾರ್ತಾಭಾರತಿವಾರ್ತಾಭಾರತಿ28 July 2017 9:42 PM IST
share
ಮರಿಯಾಲ ಮಠಾಧ್ಯಕ್ಷರಾದ ಶ್ರೀ ಮಹಾಂತಸ್ವಾಮಿ ನಿಧನ

ಚಾಮರಾಜನಗರ, ಜು. 28: ತಾಲೂಕಿನ ಮರಿಯಾಲ ಶ್ರೀ ಮುರುಘರಾಜೇಂದ್ರ ಸ್ವಾಮಿಗಳ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ವಿದ್ವಾನ್ ಶ್ರೀ ಮಹಾಂತಸ್ವಾಮಿಗಳು (80) ಇಂದು ಮಧ್ಯಾಹ್ನ 3 ಗಂಟೆಗೆ ಅನಾರೋಗ್ಯದಿಂದ ನಿಧನರಾದರು.

ಶ್ರೀಗಳು ಮರಿಯಾಲದ ಶ್ರೀ ಮುರುಘರಾಜೇಂದ್ರ ಸ್ವಾಮಿ ಮಠದ ಪರಂಪರೆಯಂತೆ 1979 ರ ನ. 16 ರಂದು ಶ್ರೀಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು  ಸಂಸ್ಥಾನದ ಅಭಿವೃದ್ದಿಗೆ ತಮ್ಮನ್ನು ಅರ್ಪಿಸಿಕೊಂಡಿದ್ದರು. ಬಸವಾದಿ ಶರಣರ ತತ್ವಗಳನ್ನು ಮೈಗೂಡಿಸಿಕೊಂಡು ಧರ್ಮ ಪ್ರಚಾರದಲ್ಲಿ ತೊಡಗಿಸಿಕೊಂಡು. ದಾಸೋಹ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ದಾಸೋಹವನ್ನು ಕಲ್ಪಿಸುವ ನಿಟ್ಟಿನಲ್ಲಿ 1993ರಲ್ಲಿ ಶ್ರೀ ಮುರಘರಾಜೇಂದ್ರ ಸ್ವಾಮಿ ವಿದ್ಯಾ ಸಂಸ್ಥೆಯನ್ನು ಸ್ಥಾಪನೆ ಮಾಡಿ ಸಾವಿರಾರು ಬಡ ಮಕ್ಕಳಿಗೆ  ಶಿಕ್ಷಣ ದಾಸೋಹ ನೀಡಿದರು.

ರಾಜ್ಯಸಭಾ ಮಾಜಿ ಸದಸ್ಯರು, ಹಿರಿಯ ರಾಜಕೀಯ ಮತ್ಸದ್ದಿ ದಿ. ರಾಜಶೇಖರಮೂರ್ತಿ ಅವರ ಸಹಕಾರವನ್ನು ಪಡೆದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಬದುಕಿಗೆ ಅತ್ಯವಶ್ಯಕವಾದ ಆಧ್ಯಾತ್ಮಿಕ, ಭೌತಿಕ ಪರಿಪೂರ್ಣ ಶಿಕ್ಷಣವನ್ನು ನೀಡಲು ಬಸವ ವಿದ್ಯಾ ಪೀಠವನ್ನು ಸ್ಥಾಪನೆ ಮಾಡುವ ಮೂಲಕ ಮರಿಯಾಲದಲ್ಲಿ ಶಿಕ್ಷಣ ಕ್ರಾಂತಿಯನ್ನು ಮಾಡಿದ್ದರು.

 ಚಾ.ನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿ ಗ್ರಾಮದ ಶಿವಶರಣೆ ಮರಿಯಮ್ಮ ಮತ್ತು ಶಿವಶರಣ ಪುಟ್ಟದೇವರು ದಂಪತಿಗಳ ಮಗನಾಗಿ 1937 ರ  ಸೆ.2ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ತೇರಂಬಳ್ಳಿ ಗ್ರಾಮದಲ್ಲಿ, ಪ್ರೌಢಶಿಕ್ಷಣನ್ನು ಕೊಳ್ಳೇಗಾಲದ ಎಂಜಿಎಸ್‌ವಿ ಪ್ರೌಢಶಾಲೆಯಲ್ಲಿ ಪೂರ್ಣ ಮಾಡಿ, ಮೈಸೂರಿನ ಮಹಾರಾಜ ಸಂಸ್ಕೃತ ಪಾಠಶಾಲೆಯಲ್ಲಿ ವ್ಯಾಸಂಗ ಮಾಡಿ, ಶಕ್ತಿ ವಿಶಿಷ್ಠಾದ್ವೈತ ವಿಷಯದಲ್ಲಿ ಎಂ.ಎ. ವಿದ್ವಾತ್ ಪಡೆದು, ತರ್ಕಶಾಸ್ತ್ರ ಹಾಗು ನ್ಯಾಯ ಶಾಸ್ತ್ರದಲ್ಲಿ ಪಾಂಡಿತ್ಯ ಪಡೆದಿದ್ದರು. ಲಕ್ಷಾಂತರ ಮಂದಿ ಭಕ್ತವೃಂದಕ್ಕೆ ದಾರಿ ದೀಪವಾಗಿದ್ದರು. ಕಿರಿಯ ಶ್ರೀಗಳಾದ ಇಮ್ಮುಡಿ ಮರುಘರಾಜೇಂದ್ರಸ್ವಾಮಿಗಳಿಗೆ ಶ್ರೀಮಠದ ಅಧಿಕಾರವನ್ನು ವಹಿಸಿ, ತಮ್ಮ ಮಾರ್ಗದರ್ಶನದಲ್ಲಿ ಕಿರಿಯ ಶ್ರೀಗಳ ಏಳ್ಗೆಯನ್ನು ಕಂಡ ಮಹಾಂತಸ್ವಾಮಿಗಳು ಶ್ರೀ ಮುರುಘರಾಜೇಂದ್ರಸ್ವಾಮಿಗಳು ಸಂಸ್ಮರಣಾ ಶತಮಾನೋತ್ಸವನ್ನು ಮೂರುದಿನಗಳ ಕಾಲ ಅದ್ದೂರಿಯಾಗಿ ಆಚರನೆ ಮಾಡಿದ್ದರು.

ಚಾಮರಾಜನಗರ ಜಿಲ್ಲೆ ಅಲ್ಲದೇ ಉತ್ತರ ಕರ್ನಾಟಕ ಭಾಗದಲ್ಲಿಯೂ ಅಪಾರವಾದ ಭಕ್ತ ವೃಂದವನ್ನು ಶ್ರೀಗಳು ಹೊಂದಿದ್ದರು. ಶ್ರೀಗಳ ಅಂತ್ಯ ಸಂಸ್ಕಾರ ನಾಳೆ ಮಧ್ಯಾಹ್ನ ಶ್ರೀಮರಿಯಾಲದ ಅವರಣದಲ್ಲಿ ನಡೆಯಲಿದ್ದು, ಮರಿಯಾಲದ ಹಿರಿಯ ಶ್ರೀಗಳ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಮಠದ ಕಡೆಗೆ ಸಂಜೆಯಿಂದಲೇ ಭಕ್ತವೃಂದ ದರ್ಶನಕ್ಕೆ ಬರುತ್ತಿದ್ದಾರೆ. ಇನ್ನು ಚಿತ್ರದುರ್ಗ, ಹಾವೇರಿ, ಬಿಜಾಪುರದಿಂದಲೂ ಹೆಚ್ಚಿನ ಭಕ್ತರು ಆಗಮಿಸಲಿದ್ದಾರೆ.

ಸಂತಾಪ : ಶ್ರೀ ಮಹಾಂತಸ್ವಾಮಿಗಳ  ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ, ಎಪಿಎಂಸಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೋಡಸೋಗೆ ಶಿವಬಸಪ್ಪ, ಪ್ರಧಾನ ಕಾರ್ಯದರ್ಶಿ ಹೊಸೂರು ನಟೇಶ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೊಡ್ಡರಾಯಪೇಟೆ ಗೀರೀಶ್ ಅನೇಕರು ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X