Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೊಲ್ಲರಹಟ್ಟಿಗಳಿಗೆ ಮೂಲಸೌಕರ್ಯಕ್ಕೆ...

ಗೊಲ್ಲರಹಟ್ಟಿಗಳಿಗೆ ಮೂಲಸೌಕರ್ಯಕ್ಕೆ ಕಾಡುಗೊಲ್ಲರ ಯುವಸೇನೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ29 July 2017 5:54 PM IST
share
ಗೊಲ್ಲರಹಟ್ಟಿಗಳಿಗೆ ಮೂಲಸೌಕರ್ಯಕ್ಕೆ ಕಾಡುಗೊಲ್ಲರ ಯುವಸೇನೆ ಒತ್ತಾಯ

ತುಮಕೂರು.ಜು.28: ಕಾಡುಗೊಲ್ಲರ ಹಟ್ಟಿಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು, ರಾಜಕೀಯವಾಗಿ ಸ್ಥಳೀಯ ಯುವಕರಿಗೆ ಅವಕಾಶ ನೀಡಬೇಕು, ಕಾಡುಗೊಲ್ಲರ ಕುಲಶಾಸ್ತ್ರ ಅಧ್ಯಯನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕಾಡುಗೊಲ್ಲರ ಯುವಸೇನೆ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ರಾಜ್ಯ ಕಾಡುಗೊಲ್ಲರ ಯುವಸೇನೆ ರಾಜ್ಯಾಧ್ಯಕ್ಷ ಒಕ್ಕೋಡಿ ರಮೇಶ್, ಸಂಶೋಧಕ ಜಯರಾಂ, ಉಪಾಧ್ಯಕ್ಷ ನಾಗರಾಜು, ರಾಜ್ಯ ಕಾರ್ಯಾಧ್ಯಕ್ಷ ಹನುಮಂತರಾಜು, ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಾಲಿಂಗಯ್ಯ ಮತ್ತಿತರರು, ಇಂದಿಗೂ ಬಡುಕಟ್ಟು ಸ್ವರೂಪ ಹೊಂದಿರುವ ಕಾಡುಗೊಲ್ಲರನ್ನು,ಯಾದವ ಸಮುದಾಯದ ಇತರೆಯವರು ಕಾಡುಗೋಲ್ಲ-ಊರುಗೊಲ್ಲ-ಯಾದವ ಒಂದೇ ಎಂಬ ಹೇಳಿಕೆ ನೀಡುವ ಮೂಲಕ ಸರಕಾರವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಈ ಮೂರು ಪಂಗಡಗಳ ಆಚಾರ-ವಿಚಾರ, ಸಂಪ್ರದಾಯಗಳ ಪಾಲನೆಯಲ್ಲಿ ಸಾಕಷ್ಟು ಬಿನ್ನತೆಯಿದ್ದು, ಹಲವಾರು ಸಂಶೋಧನೆಗಳು ಇದನ್ನು ದೃಢಪಡಿಸಿವೆ ಎಂದರು.

ಕಾಡುಗೊಲ್ಲ ಸಮುದಾಯದ ಶೇ70ರಷ್ಟು ಜನರು ಇಂದಿಗೂ ಕುರಿ, ಮೇಕೆ ಸಾಕಿಕೊಂಡು ಊರೂರು ಅಲೆಯುತ್ತಲೇ ಬದುಕುತ್ತಿದ್ದಾರೆ. ಆದರೆ ಗೊಲ್ಲರ ಹೆಸರಿನಲ್ಲಿ ಈಗಾಗಲೇ ರಾಜಕೀಯವಾಗಿ, ಆರ್ಥಿಕವಾಗಿ ಬಲಿತ ಕೆಲ ಊರುಗೊಲ್ಲರು, ಕಾಡುಗೊಲ್ಲರು ನಮ್ಮಿಂದ ದೂರವಾದರೆ ಎಲ್ಲಿ ನಮಗೆ ಸಿಗುತ್ತಿರುವ ಮೀಸಲಾತಿಯ ಸೌಲಭ್ಯ ಕೈತಪ್ಪುತ್ತದೆ ಎಂಬ ಭಯದಲ್ಲಿ ಕಾಡುಗೊಲ್ಲ-ಊರುಗೊಲ್ಲ ಒಂದೇ ಎಂಬ ವಾದ ಮಂಡಿಸುತ್ತಿದ್ದಾರೆ. 40 ವರ್ಷಗಳಿಂದ ರಾಜಕೀಯ ಅಧಿಕಾರ ಅನುಭವಿಸಿ ಇತ್ತೀಚಗೆ ನಿಧನರಾದ ವ್ಯಕ್ತಿಯೊಬ್ಬರು, ಅವರ ರಾಜಕೀಯ ಜೀವನದ ಒಂದು ದಿನವೂ ಒಂದು ಗೊಲ್ಲರ ಹಟ್ಟಿಗಳಿಗೆ ಭೇಟಿ ನೀಡಿ ಅವರ ಕಷ್ಟ, ಸುಖ ವಿಚಾರಿಸಲಿಲ್ಲ. ಇಂದಿಗೂ ಗೊಲ್ಲರಹಟ್ಟಿಗಳಲ್ಲಿ ವಿದ್ಯುತ್ ಇಲ್ಲ, ರಸ್ತೆ ಇಲ್ಲ, ಶೌಚಾಲಯಗಳಿಲ್ಲದೆ ಶೋಚನೀಯವಾಗಿ ಬದುಕುತ್ತಿದ್ದಾರೆ. ಇದು ಯಾವುದೇ ರಾಜಕಾರಣಿಗಳ ಕಣ್ಣಿಗೂ ಕಂಡಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿರುವ ಸರಕಾರ ನಮ್ಮ ಸಮುದಾಯಕ್ಕೆ ಸೇರಿದ ಜಯಮ್ಮ ಬಾಲರಾಜು ಅವರನ್ನು ಗುರುತಿಸಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದಾರೆ.ಇದುವರೆಗೂ ಅವರು ರಾಜ್ಯದಾದ್ಯಂತ ಗೊಲ್ಲರಹಟ್ಟಿಗಳಿಗೆ ಪ್ರವಾಸ ಮಾಡಿ ಸಂಘಟಿಸುವ ಕೆಲಸ ಮಾಡಿಲ್ಲ. ಅಲ್ಲದೆ ಚುನಾವಣೆ ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ ಗುಬ್ಬಿ, ಚಿಕ್ಕನಾಯಕನಹಳ್ಳಿ, ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಳೂರಿನ ಕೆಲ ಬಲಿತ ಗೊಲ್ಲರು, ನಿವೃತ್ತ ಅಧಿಕಾರಿಗಳು, ಸಮುದಾಯದ ಹೆಸರಿನಲ್ಲಿ ಸ್ಪರ್ಧೆಗೆ ಇಳಿಯಲು ವೇದಿಕೆ ಸಿದ್ದಗೊಳಿಸುತ್ತಿದ್ದಾರೆ. ಹಣ ಇಲ್ಲದ ಸ್ಥಳೀಯ ಗೊಲ್ಲರು ಇವರ ಮುಂದೆ ಕೈಕಟ್ಟಿ ನಿಲ್ಲಬೇಕಾಗಿದೆ. ಆದ್ದರಿಂದ ಈ ಬಾರಿ ಎಲ್ಲೆಲ್ಲಿ ಜನಾಂಗದ ಮತಗಳು ಹೆಚ್ಚಾಗಿವೆಯೋ ಆ ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಯುವಸೇನೆ ತನ್ನ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸಲಿದೆ ಎಂದು ಮುಖಂಡರು ಸ್ಪಷ್ಟಪಡಿಸಿದರು.

ಎಸ್.ಟಿ.ಗೆ ಸೇರಿಸಲು ಊರುಗೊಲ್ಲರ ವಿರೋಧ: ಕಾಡುಗೊಲ್ಲರನ್ನು ಬುಡಕಟ್ಟು ಆಧಾರದಲ್ಲಿ ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಹಲವಾರು ಹೋರಾಟಗಳನ್ನು ಹಿಂದಿನಿಂದಲೂ ಮಾಡಿಕೊಂಡು ಬರಲಾಗುತ್ತಿದೆ. ಈ ಬಗ್ಗೆ ಸರಕಾರ ಕೂಡ ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಆದರೆ ಕೆಲ ಬೆಂಗಳೂರಿನ ಅರ್ಥಿಕವಾಗಿ,  ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಸದೃಢರಾಗಿರುವ ಗೊಲ್ಲರು, ಕಾಡುಗೊಲ್ಲರನ್ನು ಎಸ್.ಟಿ. ಜಾತಿ ಪಟ್ಟಿಗೆ ಸೇರದಂತೆ ತರಕಾರು ಅರ್ಜಿ ಹಾಕಿದ್ದಾರೆ. ಇದರಿಂದ ಬುಡಕಟ್ಟು ಸ್ವರೂಪದಲ್ಲಿಯೇ ಸಾವಿರಾರು ವರ್ಷಗಳಿಂದ ಬದುಕುತ್ತಿರುವ ಸಮುದಾಯಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ಕುಲಶಾಸ್ತ್ರ ಅಧ್ಯಯನಕ್ಕೆ ಅವಕಾಶ ನೀಡದೆ ವಂಚಿಸಲಾಗಿದೆ. ಕೂಡಲೇ ಸರಕಾರ ಕುಲಶಾಸ್ತ್ರ ಅಧ್ಯಯನಕ್ಕೆ ಅವಕಾಶ ನೀಡಬೇಕು. ಗೊಲ್ಲರಹಟ್ಟಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ, ಕಂದಾಯ ಗ್ರಾಮಗಳಾಗಿ ಘೋಷಿಸಬೇಕು, ರಾಜಕೀಯವಾಗಿ ವಲಸೆಯನ್ನು ತಡೆಯುವ ಪ್ರಯತ್ನ ಮಾಡಬೇಕೆಂದು ಮುಖಂಡರು ಒತ್ತಾಯಿಸಿದರು.

   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X