Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 50 ವರ್ಷಗಳ ಹಿಂದಿನ ಏರ್ ಇಂಡಿಯಾ ವಿಮಾನ...

50 ವರ್ಷಗಳ ಹಿಂದಿನ ಏರ್ ಇಂಡಿಯಾ ವಿಮಾನ ಅಪಘಾತದ ಮೃತರ ಅವಶೇಷ ಪತ್ತೆ?

ವಾರ್ತಾಭಾರತಿವಾರ್ತಾಭಾರತಿ29 July 2017 5:58 PM IST
share
50 ವರ್ಷಗಳ ಹಿಂದಿನ ಏರ್ ಇಂಡಿಯಾ ವಿಮಾನ ಅಪಘಾತದ ಮೃತರ ಅವಶೇಷ ಪತ್ತೆ?

ಹೊಸದಿಲ್ಲಿ,ಜು.29: ಫ್ರೆಂಚ್ ಆಲ್ಪ್ಸ್ ಪರ್ವತಶ್ರೇಣಿಯ ಮೊಂಟ್ ಬ್ಲಾಂಕ್‌ನಲ್ಲಿ ಮಾನವ ದೇಹದ ಅವಶೇಷಗಳು ಪತ್ತೆಯಾಗಿವೆ. ಇವು 50 ವರ್ಷಗಳಿಗೂ ಹಿಂದೆ ಇಲ್ಲಿ ಸಂಭವಿಸಿದ್ದ ಎರಡು ಏರ್ ಇಂಡಿಯಾ ವಿಮಾನ ಅಪಘಾತಗಳಲ್ಲೊಂದರಲ್ಲಿ ಸತ್ತವರದ್ದಾ ಗಿರಬಹುದು ಎಂದು ಮೂಲಗಳು ತಿಳಿಸಿವೆ.

ವಿಮಾನ ಅಪಘಾತಗಳ ಬಗ್ಗೆ ಆಸಕ್ತಿ ಬೆಳೆಸಿಕೊಂಡಿರುವ ಡೇನಿಯಲ್ ರೋಶೆ ಅವರು ಅವಶೇಷಗಳಿಗಾಗಿ ವರ್ಷಗಳ ಕಾಲ ಬಾಸ್ಸನ್ಸ್ ನೀರ್ಗಲ್ಲು ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದು, ಗುರುವಾರ ಮಾನವ ದೇಹದ ಭಾಗಗಳನ್ನು ಪತ್ತೆ ಹಚ್ಚಿದ್ದಾರೆ.

ಈ ಹಿಂದೆ ಅವರಿಗೆ ಮಾನವ ಅವಶೇಷಗಳು ಪತ್ತೆಯಾಗಿರಲಿಲ್ಲ. ಆದರೆ ಈಗ ಮಾನವ ದೇಹದ ಒಂದು ಕೈ ಮತ್ತು ಕಾಲಿನ ಮೇಲ್ಭಾಗ ಅವರ ಕಣ್ಣಿಗೆ ಬಿದ್ದಿವೆ.

1966,ಜನವರಿಯಲ್ಲಿ ಮುಂಬೈ(ಆಗ ಬಾಂಬೆ)ನಿಂದ ನ್ಯೂಯಾರ್ಕ್‌ಗೆ ಪ್ರಯಾಣಿಸು ತ್ತಿದ್ದ ಏರ್ ಇಂಡಿಯಾದ ಬೋಯಿಂಗ್ 707 ವಿಮಾನವು ಮೊಂಟ್ ಬ್ಲಾಂಕ್ ಶಿಖರದ ಬಳಿ ಪತನಗೊಂಡು ಅದರಲ್ಲಿದ್ದ ಎಲ್ಲ 117 ಜನರು ಮೃತಪಟ್ಟಿದ್ದರು. 1950ರಲ್ಲಿ ಇದೇ ಪರ್ವತದ ಮೇಲೆ ಏರ್ ಇಂಡಿಯಾದ ಇನ್ನೊಂದು ವಿಮಾನ ಪತನಗೊಂಡು 48 ಜನರು ಮೃತಪಟ್ಟಿದ್ದರು.

ತಾನು ಪತ್ತೆಹಚ್ಚಿರುವ ಅವಶೇಷಗಳು 1966ರ ಬೋಯಿಂಗ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಿಳೆಯದ್ದಾಗಿರಬಹುದು ಎಂದು ರೋಶೆ ಹೇಳಿದ್ದಾರೆ. ಅವರು ವಿಮಾನದ ನಾಲ್ಕು ಜೆಟ್ ಇಂಜಿನ್‌ಗಳ ಪೈಕಿ ಒಂದನ್ನೂ ಪತ್ತೆ ಹಚ್ಚಿದ್ದಾರೆ.

ರೋಶೆ ನೀಡಿದ ಮಾಹಿತಿಯಂತೆ ಸ್ಥಳೀಯ ತುರ್ತುಸೇವೆ ಘಟಕವು ಹೆಲಿಕಾಪ್ಟರ್ ಮೂಲಕ ಮಾನವ ಅವಶೇಷಗಳನ್ನು ಸಾಗಿಸಿದ್ದು, ಅವುಗಳನ್ನು ತಜ್ಞರು ಪರೀಕ್ಷಿಸಲಿದ್ದಾರೆ.

ಈ ಅವಶೇಷಗಳು ಬಹುಶಃ ಒಂದೇ ವ್ಯಕ್ತಿಗೆ ಸೇರಿದ್ದಲ್ಲ. ಅವು ಎರಡು ವಿಮಾನಗಳ ಪೈಕಿ ಒಂದರ ಪ್ರಯಾಣಿಕರದ್ದಾಗಿರಬಹುದು. ಆದರೆ ಯಾವ ವಿಮಾನ ಎಂದು ಹೇಳುವುದು ಕಷ್ಟ ಎಂದು ಸ್ಥಳೀಯ ಅಧಿಕಾರಿ ಸ್ಟೆಫಾನೆ ಬೊರೊನ್ ಹೇಳಿದ್ದಾರೆ.

10 ದಿನಗಳ ಹಿಂದಷ್ಟೇ ಸ್ವಿಸ್ ಆಲ್ಪ್ಸ್‌ನ ಡಾಯಾಬ್ಲೆರೆಟ್ಸ್ ನೀರ್ಗಲ್ಲು ಪ್ರದೇಶದಲ್ಲಿ ಅಕ್ಕಪಕ್ಕದಲ್ಲಿ ಬಿದ್ದುಕೊಂಡಿದ್ದ ಎರಡು ಶವಗಳು ಪತ್ತೆಯಾಗಿದ್ದವು. ಈ ಶವಗಳು 75ವರ್ಷ ಗಳ ಹಿಂದೆ ಆಲ್ಪ್ಸ್‌ನಿಂದ ಕಾಣೆಯಾಗಿದ್ದ ಶೂ ತಯಾರಕ ಮರ್ಸೆಲಿನ್ ಡುಮಾವ್ಲಿನ್ (40) ಮತ್ತು ಶಾಲಾ ಶಿಕ್ಷಕಿಯಾಗಿದ್ದ ಆತನ ಪತ್ನಿ ಫ್ರಾನ್ಸಿನೆ(37) ಅವರದ್ದು ಎಂದು ಡಿಎನ್‌ಎ ಪರೀಕ್ಷೆಯಿಂದ ಗುರುತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X