Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸ್ ಠಾಣೆಗಳಲ್ಲಿ ಜನಸಾಮಾನ್ಯರಿಗೆ...

ಪೊಲೀಸ್ ಠಾಣೆಗಳಲ್ಲಿ ಜನಸಾಮಾನ್ಯರಿಗೆ ನ್ಯಾಯ ಸಿಗುತ್ತಿಲ್ಲ: ಶಾಸಕ ಬಿ.ಬಿ.ನಿಂಗಯ್ಯ

ಮೂಡಿಗೆರೆ ತಾಪಂ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ29 July 2017 6:01 PM IST
share
ಪೊಲೀಸ್ ಠಾಣೆಗಳಲ್ಲಿ ಜನಸಾಮಾನ್ಯರಿಗೆ ನ್ಯಾಯ ಸಿಗುತ್ತಿಲ್ಲ: ಶಾಸಕ ಬಿ.ಬಿ.ನಿಂಗಯ್ಯ

ಮೂಡಿಗೆರೆ, ಜು.29: ಎಂಎಲ್‌ಎ, ಎಂಎಲ್‌ಸಿ, ಜಿ.ಪಂ. ಹಾಗೂ ತಾ.ಪಂ.ಗೆ ಬಂದ ಯಾವುದೇ ಅನುದಾನವಾದರೂ ಸರಿ. ನನ್ನ ಕ್ಷೇತ್ರಕ್ಕೆ ಬಂದ ಹಣದಲ್ಲಿ ಒಂದು ರೂಪಾಯಿ ಕೂಡ ದುರುಪಯೋಗವಾಗಬಾರದು. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಜನರಿಗೆ ಅನುಕೂಲವಾಗುವಂತೆ ಕೆಲಸ ಮಾಡಬೇಕೆಂದು ಶಾಸಕ ಬಿ.ಬಿ.ನಿಂಗಯ್ಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

 ಅವರು ಶನಿವಾರ ತಾಪಂ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿದರೆ ತಾನು ಸುಮ್ಮನೆ ಇರೋದಿಲ್ಲ. ಕೆಆರ್‌ಐಡಿಎಲ್ ನಿಗಮದ ಕೆಲಸಗಳು ಯಾವುದೇ ಗುಣಮಟ್ಟದ್ದಾಗಿರುವುದಿಲ್ಲವೆಂದು ಅನೇಕ ದೂರುಗಳು ಕೇಳಿ ಬರುತ್ತಿದೆ. ತಾಲೂಕಿನಲ್ಲಿ ನಡೆದಿರುವ ಶುದ್ಧಗಂಗಾ ಘಟಕದ ಕಾಮಗಾರಿಗಳಿಗೆ ಸಂಪೂರ್ಣವಾಗಿ ಕಳಪೆಯಾಗಿದೆ. ಶುದ್ಧಗಂಗಾ ಮಾತ್ರವಲ್ಲ, ರಸ್ತೆಗಳು ಕೂಡ ಕಳಪೆಯಾಗಿವೆ. ಈ ನಿಗಮದ ಬಗ್ಗೆ ಸಾರ್ವಜನಿಕರಲ್ಲಿ ಒಳ್ಳೆಯ ಅಭಿಪ್ರಾಯವೇ ಇಲ್ಲವಂತಾಗಿದೆ. ಕೆಆರ್‌ಐಡಿಎಲ್ ನಿಗಮದಿಂದ ಮಾಡಿರುವ ಶುದ್ಧಗಂಗಾ ಘಟಕದ ಕಾಮಗಾರಿ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ ಜಿ.ಪಂ. ಎಇಇ ಚಂದ್ರಶೇಖರ್ ಅವರಿಗೆ ಸೂಚಿಸಿದರು.

ದಿಮ್ಮಿ ನೋಡಿ ಸೌದೆ ಹೊಡೆಯಿರಿ ಎಂಬುದು ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿದೆ. ಇದು ಎಸ್‌ಪಿ ಅವರಿಗೂ ಗಮನಕ್ಕೆ ಬಂದಿದೆ. ಪೊಲೀಸ್ ಠಾಣೆಯಲ್ಲಿ ಜನಸಾಮಾನ್ಯರ ಅಭಿಪ್ರಾಯವನ್ನೇ ಕೇಳುವುದಿಲ್ಲ. ಇದು ಬಣಕಲ್ ಮತ್ತು ಗೋಣಿಬೀಡು ಠಾಣೆಯಲ್ಲಿ ಹೆಚ್ಚಾಗಿ ನಡೆಯುತ್ತಿದೆ. ಪೊಲೀಸರೆಂದರೆ ಸಾಮಾನ್ಯ ಜನರಿಗೆ ಮಾತ್ರ ಭಯ ಮೂಡಿಸಲಾಗುತ್ತಿದೆ. ಇಂತಹ ಭಯ ಪ್ರಭಾವಿಗಳ ಮೇಲೆಯೂ ಮೂಡುವಂತಾಗಬೇಕು.

ಜಮೀನು ವಿಚಾರಗಳಲ್ಲಿ ಪ್ರಭಾವಿಗಳ ಪರ ವಹಿಸುತ್ತಿರುವುದರಿಂದ ಜನಸಾಮಾನ್ಯರಿಗೆ ನ್ಯಾಯ ಸಿಗದಂತಾಗಿದೆ. ಅಪರಾಧಿಗಳ ಜೊತೆಗೆ ಕೈ ಜೋಡಿಸುವುದನ್ನು ಮೊದಲು ಬಿಡಬೇಕು. ನ್ಯಾಯಯುತವಾಗಿ ಕೆಲಸ ಮಾಡಬೇಕು. ಪೊಲೀಸರ ಜೀವನ ಕಲ್ಲಪ್ಪ ಹಂಡಿಬಾಗ್ ಪ್ರಕರಣವಾದಂತೆ ಆಗಬಾರದು ಎಂದ ಅವರು, ಪೊಲೀಸ್ ಇಲಾಖೆ ತುಂಬಾ ವೀಕ್ ಆಗಿದ್ದು, ಪೊಲೀಸರ ಮೇಲೆ ವಿಶ್ವಾಸವೇ ಜನಸಾಮಾನ್ಯರಿಗೆ ಇಲ್ಲದಂತಾಗಿದೆ. ಇದನ್ನು ಮೊದಲು ಸರಿಪಡಿಸಿಕೊಳ್ಳಬೇಕೆಂದು ಸಿಪಿಐ ಜಗದೀಶ್‌ಗೆ ಸೂಚಿಸಿದರು.

ತಾಪಂ ಅಧ್ಯಕ್ಷ ಕೆ.ಸಿ.ರತನ್ ಮಾತನಾಡಿ, ಎಂಜಿನಿಯರ್‌ಗಳು ಗುತ್ತಿಗೆದಾರರು ಹೇಳಿದಂತೆ ಕೆಲಸ ಮಾಡಲು ಸರಕಾರ ನಿಯೋಜನೆ ಮಾಡಿಲ್ಲ. ಕ್ರಿಯಾ ಯೋಜನೆಯ ರೀತಿಯಲ್ಲಿಯೇ ಕಾರ್ಯ ನಿರ್ವಹಿಸಬೇಕು. ನಾಲ್ಕು ವರ್ಷದ ಹಿಂದೆ ಆಗಬೇಕಿದ್ದ ಕಾಮಗಾರಿಗಳು ಈ ಸಭೆಯಲ್ಲಿ ಚರ್ಚೆ ನಡೆಯುತ್ತದೆ ಎಂದರೆ ದುರಂತ. ಜನರಿಗೆ ಉತ್ತರ ಕೊಟ್ಟು ಕೊಟ್ಟು ಸಾಕಾಗಿ ಹೋಗಿದೆ. ಹಳೆ ಕೆಲಸಗಳನ್ನು ಶೀಘ್ರವಾಗಿ ಮುಗಿಸಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X