Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಕ್ಕೂಟ ವ್ಯವಸ್ಥೆಯಲ್ಲಿ ಸ್ಥಳೀಯ ಭಾಷೆಗಳ...

ಒಕ್ಕೂಟ ವ್ಯವಸ್ಥೆಯಲ್ಲಿ ಸ್ಥಳೀಯ ಭಾಷೆಗಳ ಪಾತ್ರ ಮಹತ್ವವಾದುದು: ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ29 July 2017 6:31 PM IST
share

ಬೆಂಗಳೂರು, ಜು.29: ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಉಳಿಯಬೇಕಾದರೆ ಸ್ಥಳೀಯ ಭಾಷೆಗಳು ಉಳಿಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಶನಿವಾರ ನಗರದ ನಯನ ಸಭಾಂಗಣದಲ್ಲಿ ದಶಮುಖ ಪತ್ರಿಕೆ 4ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಸಂವಿಧಾನದಲ್ಲಿ ಉಲ್ಲೇಖಿಸಿರುವ 22 ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದಾಗಿದೆ. ಆದರೆ, ಅದನ್ನೇ ರಾಷ್ಟ್ರ ಭಾಷೆ ಎಂದು ಎಲ್ಲ ರಾಜ್ಯಗಳ ಮೇಲೆ ಹೇರಲು ಮುಂದಾಗಿರುವುದು ಸರಿಯಲ್ಲ ಎಂದರು. ಹಿಂದಿ ಭಾಷೆಗೆ ವಿಶೇಷವಾದ ಸಂವಿಧಾನದ ಬದ್ಧ ಸ್ಥಾನಮಾನವಿಲ್ಲ. ಆದರೆ, ದೇಶದಲ್ಲಿ ಹೆಚ್ಚಾಗಿ ಹಿಂದಿ ಭಾಷಿಕರಿದ್ದಾರೆ ಎಂಬ ನೆಪವೊಡ್ಡಿ, ಅದನ್ನು ಹೇರಿಕೆ ಮಾಡಲು ಹೊರಟಿದ್ದಾರೆ. ನಮ್ಮದು ಹಿಂದಿ ಭಾಷೆ ಹೇರಿಕೆ ವಿರುದ್ಧ ಹೋರಾಟ ಹೊರತು, ಹಿಂದಿ ಭಾಷೆಯ ವಿರುದ್ಧವಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ಭಾಷೆಗಳಿಗೂ ಸಮಾನ ಸ್ಥಾನಮಾನ ಸಿಗಬೇಕು. ಹೀಗಾಗಿ, ದೇಶದ ಹಿಂದಿಯೇತರ ರಾಜ್ಯಗಳ ಮೇಲೆ ಅನಗತ್ಯವಾಗಿ ಹಿಂದಿ ಹೇರಿಕೆಯ ದಬ್ಬಾಳಿಕೆಯನ್ನು ನಾವು ವಿರೋಧ ಮಾಡುತ್ತೇವೆ ಎಂದು ತಿಳಿಸಿದರು.

ಹಿರಿಯ ಸಾಹಿತಿ ದೊಡ್ಡರಂಗೇಗೌಡ ಮಾತನಾಡಿ, ಪತ್ರಿಕೆ ನಡೆಸುವ ಕೆಲಸ ಕಷ್ಟಕರವಾದುದ್ದು, ಸತ್ಯವನ್ನು ಮರೆಮಾಚದೆ, ಲೇಖನಿಯನ್ನು ನೇರವಾಗಿ ಯಾರಿಗೂ ಮಾರಾಟ ಮಾಡಿಕೊಳ್ಳದೇ ಸ್ಪಷ್ಟ ನಿಲುವುನೊಂದಿಗೆ ಓದುಗರಿಗೆ ನೀಡಬೇಕು. ನೋವಿನಲ್ಲಿಯೂ ಗೆಲ್ಲುವ ಛಲ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಾಹೀರಾತು ನೀಡುತ್ತಿದೆ ಎಂದು ಸರಕಾರ ಮಾಡುವುದೆಲ್ಲ ಸರಿ ಎಂದು ಅಥವಾ ಜಾಹೀರಾತು ನೀಡಲಿಲ್ಲ ಎಂದು ತೆಗಳುವುದು ಸರಿಯಾದ ಬೆಳವಣಿಗೆಯಲ್ಲ ಎಂದ ಅವರು, ಪತ್ರಿಕಾ ಸಂಪಾದಕರಿಗೆ ಅಖಂಡ ಭಾರತದ ಇತಿಹಾಸದ ಅರಿವು ಇರಬೇಕು. ಒಳ್ಳೆಯದನ್ನು ಗುರುತಿಸಿ ಬೆಳೆಸಬೇಕು. ಸ್ವಾಭಿಮಾನವನ್ನು ಎಲ್ಲಿಯೂ ಮಾರಾಟಕ್ಕಿಡಬಾರದು ಎಂದು ಹೇಳಿದರು.

ಶಾಸಕ ಸತೀಶ್ ರೆಡ್ಡಿ ಮಾತನಾಡಿ, ರಾಜ್ಯದಲ್ಲಿರುವ ಕೆಲವು ಬಿಹಾರ, ಉತ್ತರ ಪ್ರದೇಶದ ವಲಸಿಗರಿಗೆ ಕಾನೂನಿನ ಭಯ ಇಲ್ಲವಾಗಿದೆ. ಕನ್ನಡಿಗರು ಎಲ್ಲರನ್ನು ನಮ್ಮವರೆಂದು ಭಾವಿಸುತ್ತಾರೆ. ಆದರೆ, ಇದನ್ನೆ ಅವರು ದುರ್ಬಳಕ್ಕೆ ಮಾಡಿಕೊಳ್ಳಬಾರದು ಎಂದು ಎಚ್ಚರಿಸಿದರು.
  
ಈ ಸಂದರ್ಭದಲ್ಲಿ ಹಿರಿಯ ಚಲನಚಿತ್ರ ಕಲಾವಿದ ಎಸ್.ಶಿವರಾಂ, ಸಾಹಿತಿ ಪ್ರೊ.ದೊಡ್ಡರಂಗೇಗೌಡ, ಶಾಸಕ ಎಂ.ಸತೀಶ್ ರೆಡ್ಡಿ ಗೆ ‘ಪ್ರಜಾ ಸೇವಾಭೂಷಣ ಪ್ರಶಸ್ತಿ’ ಹಾಗೂ ಪಾಲಿಕೆ ಸದಸ್ಯೆ ಶೋಭಾ ಮುನಿರಾಂ, ಎಚ್.ಡಿ.ರಾಜೇಶ್, ಗೋಪಾಲರೆಡ್ಡಿ, ಪ್ರೇಮಸಾಗರ್, ಟಿ.ಟಿ.ವೆಂಕಟೇಶ್ ಗೆ ‘ದಶಮುಖ ಸಾಮಾಜಿಕ ಸೇವಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ.ಸಂತೋಷಭಾರತಿ ಸ್ವಾಮೀಜಿ, ಒಕ್ಕಲಿಗರ ಮಹಾವೇದಿಕೆ ಅಧ್ಯಕ್ಷ ವೈ.ಡಿ.ರಶಂಕರ್, ದಶಮುಖ ಪತ್ರಿಕೆ ಸಂಪಾದಕ ಹಾಗೂ ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ಹೊನಕೆರೆ ಕೆ.ಬೊಮ್ಮೆಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X