Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 120 ವರ್ಷಗಳಷ್ಟು ಹಳೆಯ ಶಿಲುಬೆ ಧ್ವಂಸ...

120 ವರ್ಷಗಳಷ್ಟು ಹಳೆಯ ಶಿಲುಬೆ ಧ್ವಂಸ ಪ್ರಕರಣ: ದೂರು ದಾಖಲಿಸಲು ಮುಂಬೈ ನಿವಾಸಿಗಳ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ29 July 2017 6:38 PM IST
share
120 ವರ್ಷಗಳಷ್ಟು ಹಳೆಯ ಶಿಲುಬೆ ಧ್ವಂಸ ಪ್ರಕರಣ: ದೂರು ದಾಖಲಿಸಲು ಮುಂಬೈ ನಿವಾಸಿಗಳ ನಿರ್ಧಾರ

ಮುಂಬೈ,ಜು.29: ಬಾಂದ್ರಾ(ಪಶ್ಚಿಮ)ದ ಡಿ’ಮಾಂಟೆ ಸ್ಟ್ರೀಟ್‌ನಲ್ಲಿದ್ದ 120 ವರ್ಷಗಳಷ್ಟು ಹಳೆಯದಾದ ವಿವಾದಾಸ್ಪದ ಶಿಲುಬೆಯನ್ನು ಬೃಹನ್ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಯು ನೆಲಸಮಗೊಳಿಸಿದ ಮೂರು ತಿಂಗಳ ಬಳಿಕ ಇದೀಗ ಸ್ಥಳೀಯ ನಿವಾಸಿಗಳು ಮತ್ತು ಕೆಥೊಲಿಕ್ ಗುಂಪುಗಳು ಬಿಎಂಸಿಯ ಉಪ ಆಯುಕ್ತ ಶರದ್ ಉಘಾಡೆ ಮತ್ತು ವಾರ್ಡ್ ಕಚೇರಿಯ ಇಬ್ಬರು ಇಂಜಿನಿಯರ್‌ಗಳ ವಿರುದ್ಧ ಕ್ರಿಮಿನಲ್ ದೂರು ದಾಖಲಿ ಸಲು ನಿರ್ಧರಿಸಿದ್ದಾರೆ.

ಬಿಎಂಸಿ ಶಿಲುಬೆಯನ್ನು ತೆಗೆಯುತ್ತಿದ್ದನ್ನು ಕಂಡು ಆಘಾತವಾಗಿತ್ತು. ಮುನ್ನಾದಿನ ರಾತ್ರಿಯಷ್ಟೇ ನಮಗೆ ಬಿಎಂಸಿಯ ಯೋಜನೆಯ ಬಗ್ಗೆ ಗೊತ್ತಾಗಿತ್ತು. ಆದರೆ ನಾವು ಏನನ್ನೂ ಮಾಡುವ ಸ್ಥಿತಿಯಲ್ಲಿರಲಿಲ್ಲ ಎಂದು ಸಾವಿಯೊ ಗೊನ್ಸಾಲ್ವಿಸ್ ಹೇಳಿದರು. ಶಿಲುಬೆಯಿದ್ದ ಸ್ಥಳದ ಎದುರಿನ ನಿವಾಸಿಯಾಗಿರುವ ಅವರು ಕಳೆದ 35 ವರ್ಷಗಳಿಂದಲೂ ಅದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.

ಬಿಎಂಸಿ ಎ.29ರಂದು ಡಿ’ಮಾಂಟೆ ಶಿಲುಬೆಯನ್ನು ಧ್ವಂಸಗೊಳಿಸಿತ್ತು. ಇದನ್ನು ವಿರೋಧಿಸಿ ಕೆಥೊಲಿಕ್ ಸಮದಾಯವು ಮೇ 3ರಂದು ವಾರ್ಡ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತ್ತು. ಶಿಲುಬೆ ಕಾನೂನುಬದ್ಧವಾಗಿತ್ತು ಮತ್ತು ಖಾಸಗಿ ಜಾಗದಲ್ಲಿತ್ತು ಎಂದು ನಿವಾಸಿಗಳು ಹೇಳಿದ್ದಾರೆ.

ಬಿಎಂಸಿಯು ಶಿಲುಬೆಯನ್ನು ವರ್ಗ ‘ಬಿ’ಯ ರಚನೆ ಎಂದು ತಪ್ಪಾಗಿ ಗುರುತಿಸಿತ್ತು. ನಾವು ಪ್ರಕರಣವನ್ನು ನ್ಯಾಯಾಲಯಕ್ಕೆ ಒಯ್ದಿದ್ದೆವು, ಬಿಎಂಸಿ ಈವರೆಗೂ ನ್ಯಾಯಾಲಯ ದಲ್ಲಿ ಅಫಿದಾವತ್ತು ಸಲ್ಲಿಸಿಲ್ಲ ಎಂದು ಎನ್‌ಜಿಒ ವಾಚ್‌ಡಾಗ್ ಫೌಂಡೇಷನ್‌ನ ಟ್ರಸ್ಟಿ ಗಾಡಫ್ರೆ ಪಿಮೆಂಟ್ಸ್ ಹೇಳಿದರು.

 ಪ್ರಕರಣದ ಮುಂದಿನ ವಿಚಾರಣೆ ಉಚ್ಚ ನ್ಯಾಯಾಲಯದಲ್ಲಿ ಆ.21ರಂದು ನಡೆಯಲಿದೆ. ಬಿಎಂಸಿ ಶಿಲುಬೆಯನ್ನು ಮರುಸ್ಥಾಪಿಸಬೇಕೆಂದು ನಾವು ಬಯಸಿದ್ದೇವೆ. ಶಿಲುಬೆಯನ್ನು ತಪ್ಪಾಗಿ ಗುರುತಿಸಿದ್ದಕ್ಕಾಗಿ ಮತ್ತು ಅದನ್ನು ಧ್ವಂಸಗೊಳಿಸಿದ್ದಕ್ಕಾಗಿ ಕ್ರಿಮಿನಲ್ ಆರೋಪ ಪಟ್ಟಿ ರೂಪಿಸಲಾಗಿದೆ ಎಂದು ಬಾಂಬೆ ಕೆಥೊಲಿಕ್ ಸಭಾದ ಮುಖ್ಯಸ್ಥೆ ರೀಟಾ ಡೇ’ಸಾ ಹೇಳಿದರು.

2011ರ ಪಟ್ಟಿಯಲ್ಲಿ ಈ ಶಿಲುಬೆಯನ್ನು ಬಿ ವರ್ಗದಡಿ ಸೇರಿಸಲಾಗಿತ್ತು. ನ್ಯಾಯಾಲ ಯದ ಆದೇಶದ ಮೇರೆಗೆ ನಾವು ಕ್ರಮ ಕೈಗೊಂಡಿದ್ದೇವೆ. ಶಿಲುಬೆಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಉಘಾಡೆ ಸುದ್ದಿಸಂಸ್ಥೆಗೆ ತಿಳಿಸಿದರು.

ಬಾಂದ್ರಾ(ಪ)ದಲ್ಲಿಯ 38 ಅಕ್ರಮ ತಾಣಗಳ ಪೈಕಿ ಒಂದು ಶಿಲುಬೆಯನ್ನು ಮಾತ್ರ ನೆಲಸಮಗೊಳಿಸಲಾಗಿದೆ. ವಾರ್ಡ್ ಕಚೇರಿಯು ಗುರುವಾರ ನಾಲ್ಕು ದೇವಸ್ಥಾನಗಳನ್ನು ನೆಲಸಮಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X