Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ...

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ

ರಾಜಕೀಯ ಕಾರಣಕ್ಕೆ ಹೆಸರು ಕೈಬಿಡಲಾಗಿದೆ ಎಂದು ಆರೋಪ

ವಾರ್ತಾಭಾರತಿವಾರ್ತಾಭಾರತಿ29 July 2017 7:49 PM IST
share
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ

ನಾಗಮಂಗಲ, ಜು.29: ರಾಜಕೀಯ ಕಾರಣಕ್ಕಾಗಿಯೇ ಪ್ರತಿ ಚುನಾವಣಾ ವರ್ಷದಲ್ಲಿ ಅರ್ಹರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು, ತಮಗೆ ಬೇಕಾದವರನ್ನು ಸೇರ್ಪಡೆ ಮಾಡುವ ಅಕ್ರಮ ನಡೆಯುತ್ತಿದ್ದು, ದೂರು ನೀಡಿದರು ಪ್ರಯೋಜನವಾಗುತ್ತಿಲ್ಲ ಎಂದು ಆರೋಪಿಸಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿಯ ಹರಳಕೆರೆ ಮತ್ತು ಚನ್ನಮ್ಮನಕೊಪ್ಪಲು ಗ್ರಾಮಸ್ಥರು ತಾಲೂಕು ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ನಾಗಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುತ್ತದೆ. 193 ಮತಗಟ್ಟೆ ಸಂಖ್ಯೆಯ ಹರಳಕೆರೆ ಮತ್ತು ಚನ್ನಮ್ಮನಕೊಪ್ಪಲು ಬೂತ್ ಅತ್ಯಂತ ಸೂಕ್ಷ್ಮ ಮತಗಟ್ಟೆಯಾಗಿದ್ದು, ಚುನಾವಣೆಗಾಗಿಯೇ ಅನೇಕ ಬಾರಿ ಗಲಾಟೆಗಳು ನಡೆದು ವ್ಯಾಜ್ಯ ಕೋರ್ಟ್ ಮೇಟ್ಟಿಲೇರಿದೆ. ಕಳೆದ ಮೂರು ಚುನಾವಣಾ ವರ್ಷದಿಂದಲೂ ಮತದಾರರ ಪಟ್ಟಿಯಿಂದ ತಮ್ಮನ್ನು ರಾಜಕೀಯ ಕಾರಣಕ್ಕಾಗಿಯೇ ಕೈಬಿಡಲಾಗುತ್ತಿದೆ. ಮತ್ತೆ ಹೆಸರು ನೋಂದಣಿ ಮಾಡಿಸಿದರೂ ಗ್ರಾಮದಲ್ಲಿ ವಾಸವಿಲ್ಲ ಎಂದು ಸುಳ್ಳು ವರದಿ ನೀಡಿ ನೂರಾರು ಮಂದಿಯನ್ನ ಮತದಾನದಿಂದ ವಂಚಿಸಲಾಗುತ್ತಿದೆ. ಅರ್ಹರಲ್ಲದವರನ್ನ ಪಟ್ಟಿಗೆ ಸೇರಿಸಿ ಅಕ್ರಮ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ತಾವೆಲ್ಲರೂ ಗ್ರಾಮದಲ್ಲೆ ವಾಸವಿರುವವರಾಗಿರುವುದನ್ನು ಸಾಬೀತುಪಡಿಸಿದರೂ ಪ್ರಯೋಜನವಾಗಿಲ್ಲ. ಹೀಗೆ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲೂ ಈ ಅಕ್ರಮ ನಡೆಯುತ್ತಿದ್ದ ಜನರ ದೂರಿಗೆ ಯಾರು ಸ್ಪಂದಿಸುತ್ತಿಲ್ಲ. ಕೂಡಲೇ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್ ಶಿವಣ್ಣ, ಸ್ಥಳೀಯ ಬಿಎಲ್‌ಓಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳು ಒತ್ತಡಹಾಕಿ, ತಮಗೆ ಬೇಡದವರ ಹೆಸರು ಕೈಬಿಟ್ಟು ಅನರ್ಹರ ಹೆಸರು ಸೇರಿಸುವ ಕೆಲಸ ಮಾಡುತ್ತಿದ್ದಾರೆಂಬ ಮಾಹಿತಿಗಳು ಕೇಳಿಬಂದಿದ್ದು, ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ನಾಗಮಂಗಲ ಕ್ಷೇತ್ರದಲ್ಲಿ ಮಾತ್ರ ಅಂಕಿ ಅಂಶಗಳಿಗಿಂತಲೂ ಹೆಚ್ಚು ಮತದಾರರು ಇರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಮತಪಟ್ಟಿ ಪರಿಶೀಲನೆ ನಡೆಯುತ್ತದೆ. ಅರ್ಹರಿರುವವರ ಸೇರ್ಪಡೆಗೆ ಕ್ರಮವಹಿಸಲಾಗುವುದು. ಸಂಬಂಧಪಟ್ಟ ನಮೂನೆಯಲ್ಲಿ ಅರ್ಜಿಸಲ್ಲಿಸಬೇಕು ಎಂದು ಭರವಸೆ ನೀಡಿದರು.

ಗ್ರಾಪಂ ಅಧ್ಯಕ್ಷ ಯೋಗೇಶ್, ಸದಸ್ಯ ಚಂದ್ರಶೇಖರ್, ವರದರಾಜು, ಚನ್ನಕೇಶವ, ಸತೀಶ, ಕೃಷ್ಣಪ್ಪ, ಸುಂದರರಾಜು, ಕೃಷ್ಣೇಗೌಡ, ಪುಟ್ಟಸ್ವಾಮಿ, ನಾಗಣ್ಣ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X