Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿತೀಶ್ ಸಂಪುಟಕ್ಕೆ 26 ನೂತನ ಸಚಿವರ...

ನಿತೀಶ್ ಸಂಪುಟಕ್ಕೆ 26 ನೂತನ ಸಚಿವರ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ29 July 2017 8:40 PM IST
share
ನಿತೀಶ್ ಸಂಪುಟಕ್ಕೆ 26 ನೂತನ ಸಚಿವರ ಸೇರ್ಪಡೆ

ಪಾಟ್ನಾ,ಜು.29: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ತನ್ನ ಸಂಪುಟಕ್ಕೆ 26 ನೂತನ ಸಚಿವರನ್ನು ಸೇರ್ಪಡೆ ಮಾಡಿಕೊಂಡರು. ಈ ಪೈಕಿ 14 ಸಚಿವರು ಜಿಡಿಯುಗೆ, 11 ಬಿಜೆಪಿಗೆ ಮತ್ತು ಓರ್ವ ಎನ್‌ಡಿಎ ಮಿತ್ರಪಕ್ಷ ಎಲ್‌ಜೆಪಿಗೆ ಸೇರಿದವರಾಗಿದ್ದಾರೆ. ಜೆಡಿಯು ಜೊತೆಗಿನ ಸಮ್ಮಿಶ್ರ ಸರಕಾರಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅತ್ಯಂತ ಹೆಚ್ಚಿನ ಸಚಿವ ಸ್ಥಾನಗಳನ್ನು ಗಿಟ್ಟಿಸಿಕೊಂಡಿದೆ. ಇನ್ನೋರ್ವ ಬಿಜೆಪಿ ಶಾಸಕರೂ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

ಈ ಹಿಂದೆ 2010ರಲ್ಲಿ ರಾಜ್ಯದಲ್ಲಿ ಜೆಡಿಯು-ಬಿಜೆಪಿ ಸಮ್ಮಿಶ್ರ ಸರಕಾರವಿದ್ದು, ಬಿಜೆಪಿ 11 ಸಚಿವರನ್ನು ಹೊಂದಿತ್ತು. ಈಗಿನ 53 ಶಾಸಕ ಬಲಕ್ಕೆ ಹೋಲಿಸಿದರೆ ಆಗ ಸದನದಲ್ಲಿ ಬಿಜೆಪಿಯ 91 ಸದಸ್ಯರಿದ್ದರು.

ರಾತ್ರಿಯವರೆಗೂ ಸಚಿವರಿಗೆ ಖಾತೆಗಳನ್ನು ಪ್ರಕಟಿಸಲಾಗಿರಲಿಲ್ಲ.

ಈ ಬಾರಿಯ ಸಂಪುಟದಲ್ಲಿ ಖುರ್ಷಿದ್ ಆಲಂ ಅವರು ಏಕೈಕ ಮುಸ್ಲಿಂ ಮತ್ತು ಮಂಜು ವರ್ಮಾ ಅವರು ಏಕೈಕ ಮಹಿಳಾ ಸಚಿವರಾಗಿದ್ದಾರೆ.

ಹಿಂದಿನ ಸಂಪುಟದಲ್ಲಿದ್ದ ಜೆಡಿಯುನ ಬಿಜೇಂದ್ರ ಯಾದವ, ಶ್ರವಣ ಕುಮಾರ್ ಮತ್ತು ರಾಜೀವ ರಂಜನ ಸಿಂಗ್ ಲಲ್ಲನ್ ನೂತನ ಸಂಪುಟದಲ್ಲಿ ಸಚಿವರಾಗಿ ಮುಂದುವರಿದಿದ್ದಾರೆ.

ಉಪ ಮುಖ್ಯಮಂತ್ರಿ ಸುಶೀಲ ಕುಮಾರ್ ಮೋದಿ ಜೊತೆಗೆ ನಂದಕಿಶೋರ ಯಾದವ ಮತ್ತು ಪ್ರೇಮ ಕುಮಾರ್ ಅವರು ಮಾತ್ರ ಉಭಯ ಸರಕಾರ(2010 ಮತ್ತು 2017)ಗಳಲ್ಲಿನ ಬಿಜೆಪಿ ನಾಯಕರಾಗಿದ್ದಾರೆ.

ಜೆಡಿಯು-ಎನ್‌ಡಿಎ ಸಮ್ಮಿಶ್ರ ಸರಕಾರದ ನಡುವಿನ ಒಡಂಬಡಿಕೆಯಂತೆ ಜೆಡಿಯು ಒಟ್ಟು 19, ಬಿಜೆಪಿ 13 ಹಾಗೂ ಎನ್‌ಡಿಎ ಮಿತ್ರಪಕ್ಷಗಳಾದ ಎಲ್‌ಜೆಪಿ, ಎಚ್‌ಎಎಂ ಹಾಗೂ ಆರ್‌ಎಲ್‌ಎಸ್‌ಪಿ ತಲಾ ಓರ್ವ ಸಚಿವರನ್ನು ಹೊಂದಿರಲಿವೆ.

ಕೇಂದ್ರಸಚಿವ ಉಪೇಂದ್ರ ಕುಮಾರ್ ಕುಶವಾಹ್ ನೇತೃತ್ವದ ಆರ್‌ಎಲ್‌ಎಸ್‌ಪಿ ಸಚಿವ ಸ್ಥಾನಕ್ಕೆ ತನ್ನ ಪ್ರತಿನಿಧಿಯನ್ನು ಇನ್ನಷ್ಟೇ ಸೂಚಿಸಬೇಕಾಗಿದೆ. ಎಲ್‌ಜೆಪಿಯಿಂದ ಕೇಂದ್ರ ಸಚಿವ ರಾಮ ವಿಲಾಸ್ ಪಾಸ್ವಾನ್ ಅವರ ಸೋದರ ಪಶುಪತಿ ಪಾರಸ್ ಅವರು ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ, ಸದ್ಯಕ್ಕೆ ಅವರು ವಿಧಾನ ಮಂಡಲದ ಯಾವುದೇ ಸದನದ ಸದಸ್ಯರಾಗಿಲ್ಲ.

ತನ್ನ ಎಚ್‌ಎಎಂ ಪಕ್ಷದ ಏಕೈಕ ಶಾಸಕರಾಗಿರುವ ಜಿತನ್ ರಾಮ ಮಂಝಿ ಸಚಿವ ಹುದ್ದೆಯ ಕೊಡುಗೆಯನ್ನು ತಳ್ಳಿ ಹಾಕಿದ್ದು, ಸದನದಿಂದ ಹೊರತಾಗಿರುವ ಪಕ್ಷದ ಸದಸ್ಯನ ಹೆಸರನ್ನು ಸೂಚಿಸಿದ್ದಾರೆ. ಆದರೆ ಈ ಬಗ್ಗೆ ಇನ್ನಷ್ಟೇ ನಿರ್ಧಾರ ಅಂತಿಮಗೊಳ್ಳಬೇಕಿದೆ.

ಮಾಜಿ ಬಿಹಾರ ಬಿಜೆಪಿ ಅಧ್ಯಕ್ಷ ಹಾಗು ಚುನಾವಣೆ ಸನ್ನಿಹಿತವಾಗಿರುವ ಹಿಮಾಚಲ ಪ್ರದೇಶದಲ್ಲಿ ಪಕ್ಷದ ಸಂಘಟನೆಯ ಉಸ್ತುವಾರಿ ಹೊಂದಿರುವ ಮಂಗಲ್ ಪಾಂಡೆ ಅವರು ವಿಮಾನಯಾನದಲ್ಲಿ ವಿಳಂವದಿಂದಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X