Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಡೂರು: ಬಸ್ ನಿಲ್ದಾಣದಲ್ಲಿ ಮನಸೂರೆಗೊಂಡ...

ಕಡೂರು: ಬಸ್ ನಿಲ್ದಾಣದಲ್ಲಿ ಮನಸೂರೆಗೊಂಡ ಮಕ್ಕಳ ಕಲರವ

ವಾರ್ತಾಭಾರತಿವಾರ್ತಾಭಾರತಿ29 July 2017 9:03 PM IST
share
ಕಡೂರು: ಬಸ್ ನಿಲ್ದಾಣದಲ್ಲಿ ಮನಸೂರೆಗೊಂಡ ಮಕ್ಕಳ ಕಲರವ

ಕಡೂರು, ಜು. 29: ಸದಾ ಜನಜಂಗುಳಿಯಿಂದ ಕೂಡಿದ್ದ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಶನಿವಾರ ಪ್ರಜ್ಞಾ ಶಾಲೆಯ ಮಕ್ಕಳ ಕಲರವ. ನಿಲ್ದಾಣದ ಆವರಣದೊಳಗೆ ಸಾಮಾಜಿಕ ಕಳಕಳಿಯ ರೂಪಕಗಳನ್ನು ಅಭಿನಯಿಸಿ ಜನರ ಮನಸೂರೆಗೊಂಡರು.

ಪ್ರಜ್ಞಾ ಶಾಲೆಯ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಈ ಮೈಮ್ ವಿಧಾನದ ರೂಪಕದಲ್ಲಿ ಪರಿಸರದ ಬಗ್ಗೆ ಜಾಗೃತಿ, ಮಹಿಳೆಯರ ಶೋಷಣೆ, ಕುಡಿಯುವ ನೀರಿನ ಮಿತ ಬಳಕೆ ಮತ್ತು ವಾಹನಗಳನ್ನು ಚಲಾಯಿಸುವಾಗ ಮೊಬೈಲ್ ಬಳಕೆ ಕುರಿತಂತೆ ಜಾಗೃತಿ ಮೂಡಿಸಲಾಯಿತು.

ರೈಲೊಂದು ಚಲಿಸುತ್ತಾ ನಿಲ್ದಾಣಕ್ಕೆ ಬರುತ್ತದೆ. ಪ್ರಯಾಣಿಕನೋರ್ವ ನೀರು ಕುಡಿಯಲು ಇಳಿಯುತ್ತಾನೆ. ಅಷ್ಟರಲ್ಲಿ ರೈಲು ಹೊರಡುತ್ತದೆ. ರೈಲಿಗೆ ಹತ್ತುವ ಭರದಲ್ಲಿ ಪ್ರಯಾಣಿಕ ನೀರಿನ ನಲ್ಲಿ ನಿಲ್ಲಿಸುವುದನ್ನು ಮರೆತು ಹೋಗುತ್ತಾನೆ. ನೀರು ಪೋಲಾಗುತ್ತಾ ಹೋಗುವ ಈ ಸರಳ ಸನ್ನಿವೇಶವನ್ನು ವಿದ್ಯಾರ್ಥಿಗಳು ಮಾತೇ ಇಲ್ಲದೆ ಕೇವಲ ಅಭಿನಯದ ಮೂಲಕ ಪ್ರಸ್ತುತ ಪಡಿಸಿದ್ದು, ನಿಲ್ದಾಣದಲ್ಲಿದ್ದ ಬಹುತೇಕ ಪ್ರಯಾಣಿಕರಿಗೆ ಮಾರ್ಮಿಕವಾಗಿ ತಟ್ಟಿತು.

ನಂತರ ಪರಿಸರ ಜಾಗೃತಿಯ ಬಗ್ಗೆ ರೂಪಕ ಪ್ರಸ್ತುತ ಪಡಿಸಿದ ವಿದ್ಯಾರ್ಥಿಗಳು ಕಾಡಿನಲ್ಲಿ ಮರವೊಂದರ ಪಕ್ಕ ವ್ಯಕ್ತಿಯೋರ್ವ ನಾಲ್ಕು ಸಸಿಗಳನ್ನು ನೆಟ್ಟು ಪೋಷಿಸುತ್ತಿರುತ್ತಾನೆ. ಆದರೆ ಮರಗಳ್ಳರು ಆ ಮರವನ್ನು ಕಡಿಯುತ್ತಾರೆ. ಇದರಿಂದ ಆಗುವ ಅನಾಹುತಗಳನ್ನು ರೂಪಕದಲ್ಲಿ ಎಳೆ-ಎಳೆಯಾಗಿ ಬಿಡಿಸಿಟ್ಟರು.
 ಬಸ್ ನಿಲ್ದಾಣಕ್ಕೆ ವಿದ್ಯಾರ್ಥಿಯೊಬ್ಬಳು ಶಾಲೆಗೆ ಹೋಗಲು ಬರುತ್ತಾಳೆ. ಅಲ್ಲಿ ಇಬ್ಬರು ವಿದ್ಯಾರ್ಥಿಗಳು ಅವಳನ್ನು ಕೆಣಕುತ್ತಾರೆ. ಮರುದಿನ ಕೆಣಕುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತದೆ. ಅಂತಿಮವಾಗಿ ರೋಸಿ ಹೋದ ವಿದ್ಯಾರ್ಥಿನಿ ತನ್ನ ಇತರೆ ಸಹಪಾಠಿಗಳೊಂದಿಗೆ ಕೆಣಕುತ್ತಿದ್ದ ವಿದ್ಯಾರ್ಥಿಗಳ ಮೇಲೆ ಮುಗಿಬಿದ್ದು ಪಾಠ ಕಲಿಸುವ ರೂಪಕ ಕೂಡ ನೋಡುಗರ ಗಮನ ಸೆಳೆಯಿತು.
 
  ಹೀಗೆ ಕೇವಲ 1 ಗಂಟೆ ಸಮಯದಲ್ಲಿ ಪ್ರಜ್ಞಾ ಶಾಲೆಯ ವಿದ್ಯಾರ್ಥಿಗಳು ನಾಲ್ಕು ವಿಭಿನ್ನ ಬಗೆಯ ರೂಪಕಗಳನ್ನು ಅಭಿನಯಿಸಿದ್ದು ಸಾರಿಗೆ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರಿಗೆ ಮತ್ತು ಇತರೆ ನಾಗರೀಕರಿಗೆ ಸಂತೋಷ ತಂದುಕೊಟ್ಟಿತ್ತು.  ಕಳೆದ ವರ್ಷ ಈ ಶಾಲೆಯ ವಿದ್ಯಾರ್ಥಿಗಳು ತಾಲೂಕಿನ ಜಿ. ತಿಮ್ಮಾಪುರ ಗ್ರಾಮದಲ್ಲಿ ಕೃಷಿ ಚಟುವಟಿಕೆ ಬಗ್ಗೆ ಅರಿವು ಪಡೆದುಕೊಳ್ಳುವ ಮತ್ತು ಸ್ವತಃ ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಂಡು ರೈತಾಪಿ ಜನರ ಕಷ್ಟಗಳನ್ನು ಕಣ್ಣಾರೆ ಕಂಡಿದ್ದರು.

ಒಟ್ಟಾರೆ ಈ ಬಾರಿ ಶಾಲೆಯ ವಿದ್ಯಾರ್ಥಿಗಳ ರೂಪಕಗಳ ಅಭಿನಯದ ಈ ಮೊದಲ ಪ್ರಯತ್ನ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಿಯಾಶೀಲತೆಯ ಪ್ರಯೋಗಗಳು ಹೊರಹೊಮ್ಮಲಿ ಎನ್ನುವುದು ಪೋಷಕರು ಮತ್ತು ನಾಗರೀಕರ ಅಭಿಪ್ರಾಯ.
 ಈ ಸಮಯದಲ್ಲಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಎನ್.ಪಿ. ಮಂಜುನಾಥಪ್ರಸನ್ನ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X