Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ, ಗ್ರಾಮೀಣ ಕ್ರೀಡೆಯ ಮೂಲಕ ಗ್ರಾಮೀಣ...

ಕೃಷಿ, ಗ್ರಾಮೀಣ ಕ್ರೀಡೆಯ ಮೂಲಕ ಗ್ರಾಮೀಣ ಬದುಕಿಗೆ ಅರ್ಥ ಕಲ್ಪಿಸಿ: ಶಾಸಕ ಕೆ.ಜಿ.ಬೋಪಯ್ಯ

5ನೇ ರಾಜ್ಯ ಮಟ್ಟದ ನಿಸರ್ಗ ಜೇಸಿ ಕೆಸರು ಗದ್ದೆ ಕ್ರೀಡಾಕೂಟ-2017

ವಾರ್ತಾಭಾರತಿವಾರ್ತಾಭಾರತಿ30 July 2017 6:54 PM IST
share
ಕೃಷಿ, ಗ್ರಾಮೀಣ ಕ್ರೀಡೆಯ ಮೂಲಕ ಗ್ರಾಮೀಣ ಬದುಕಿಗೆ ಅರ್ಥ ಕಲ್ಪಿಸಿ: ಶಾಸಕ ಕೆ.ಜಿ.ಬೋಪಯ್ಯ

ಮಡಿಕೇರಿ, ಜು.30: ಕೊಡಗಿನಲ್ಲಿ ಕೃಷಿ ಚಟುವಟಿಕೆಗಳ ಜೀವಂತಿಕೆ ಕಾಪಾಡಿಕೊಳ್ಳುವ ಹಿನ್ನಲೆಯಲ್ಲಿ ಪೂರ್ವಜರ ಕಲ್ಪನೆಯಲ್ಲಿ ಹುಟ್ಟಿಕೊಂಡ ಗ್ರಾಮೀಣ ಕ್ರೀಡಾಕೂಟಗಳು ಜಿಲ್ಲೆಯ ಪಾರಂಪರಿಕತೆಯನ್ನು ಉಳಿಸಿಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಕೊಡಗಿನ ಭತ್ತದ ಕೃಷಿಗೆ ಪೂರಕವಾಗಿರುವ ಗ್ರಾಮೀಣ ಕ್ರೀಡೆಗಳು ನಡೆಯುವುದರಿಂದ ಕೃಷಿಯ ಉಳಿವು ಸಾಧ್ಯವಿದೆ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ಜಿ. ಬೋಪಯ್ಯ ಅವರು ಅಭಿಪ್ರಾಯಪಟ್ಟರು.

ಜೆ.ಸಿ.ಐ. ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ವಿರಾಜಪೇಟೆ-ಗೋಣಿಕೊಪ್ಪಲು ಮುಖ್ಯ ರಸ್ತೆ ಬದಿಯಲ್ಲಿರುವ ನಿವೃತ್ತ ಮೇ.ಜ. ಕೆ.ಪಿ.ನಂಜಪ್ಪ ಅವರ ಭತ್ತದ ಗದ್ದೆಯಲ್ಲಿ ಭಾನುವಾರ ನಡೆದ 5ನೇ ರಾಜ್ಯ ಮಟ್ಟದ ನಿಸರ್ಗ ಜೇಸಿ ಕೆಸರು ಗದ್ದೆ ಕ್ರೀಡಾಕೂಟ-2017ನ್ನು ಗಿಡವೊಂದಕ್ಕೆ ನೀರೆಯುವುದರ ಮೂಲಕ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ಕೃಷಿ ಪ್ರಧಾನವಾದ ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ತನ್ನದೇ ಆದ ಮಹೋನ್ನತ ಸ್ಥಾನವಿದೆ. ಕ್ರೀಡೆಯ ಮೂಲಕ ಭಾರತದ ಭೂಪಟದಲ್ಲಿ ಗುರುತಿಸಿಕೊಂಡಿರುವ ಕೊಡಗು ದೇಶದ ಕ್ರೀಡಾ ಕ್ಷೇತ್ರಕ್ಕೆ ನಿರಂತರವಾಗಿ ಅಪಾರವಾದ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಈ ಎಲ್ಲಾ ಕೊಡುಗೆಗಳ ಹಿಂದೆ ಕೊಡಗಿನ ಗ್ರಾಮೀಣ ಕ್ರೀಡಾ ಕೂಟಗಳ ಪಾತ್ರ ಉಲ್ಲೇಖನೀಯವಾದದ್ದು ಎಂದು ಅವರು ಹೇಳಿದರು.

ಕೃಷಿ ಮತ್ತು ಗ್ರಾಮೀಣ ಕ್ರೀಡೆಗೆ ಅವಿನಾಭಾವ ಸಂಬಂಧವಿದೆ. ಇವುಗಳೆರಡರ ಪೈಕಿ ಯಾವುದಾದರೊಂದು ನಶಿಸಿದರೆ ಕೃಷಿ ಮತ್ತು ಗ್ರಾಮೀಣ ಕ್ರೀಡೆ ಎರಡೂ ಕೂಡ ಅವನತಿಯ ಹಾದಿ ಹಿಡಿಯುತ್ತದೆ. ಆದ್ದರಿಂದ ಕೃಷಿಗೆ ಯುವ ಪೀಳಿಗೆ ಮೊದಲ ಆದ್ಯತೆ ನೀಡುವಂತಾಗಬೇಕು. ಜೊತೆಗೆ ಗ್ರಾಮೀಣ ಕ್ರೀಡೆಗಳ ಜೀವಂತಿಕೆಯೂ ಕಾಪಾಡುವಂತಾಗಬೇಕು. ಈ ಎರಡು ಮಹತ್ತರವಾದ ಜವಾಬ್ದಾರಿಯ ಗಂಭೀರತೆಯನ್ನು ಕೊಡಗಿನ ಪ್ರಸಕ್ತ ತಲೆಮಾರು ತಿಳಿದುಕೊಳ್ಳುವಂತವರಾಗಬೇಕು ಎಂದು ಕಿವಿಮಾತು ಹೇಳಿದ ಕೆ.ಜಿ. ಬೋಪಯ್ಯ ಆಧುನಿಕ ಯುಗದಲ್ಲಿ ಬೇರೆಲ್ಲಾ ಕ್ರೀಡೆಗಳು ಉನ್ನತ್ತಿಗೆ ಏರುವಂತೆ ಗ್ರಾಮೀಣ ಕ್ರೀಡೆಗಳು ಸಹ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಅಭಿವೃದ್ದಿಗೊಳ್ಳಬೇಕು. ಈಗಾದಲ್ಲಿ ಮಾತ್ರ ಕೊಡಗು ಕ್ರೀಡೆಯ ತವರೂರು ಎಂದು ಕರೆಸಿಕೊಳ್ಳುವಲ್ಲಿ ಅರ್ಥವಿದೆ ಎಂದು ಒತ್ತಿ ಹೇಳಿದರು.

ವೇದಿಕೆಯಲ್ಲಿ ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮುಕೊಂಡ ವಿಜು ಸುಬ್ರಮಣಿ, ಜಿ.ಪಂ. ಕೆ.ಡಿ.ಪಿ. ಸದಸ್ಯರಾದ ಕೆ.ಎಂ.ಸರ ಚಂಗಪ್ಪ, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಎಸ್. ಸುರೇಶ್ ಬೆಂಗಳೂರಿನ ಉದ್ಯಮಿ ಕರ್ತಮಾಡ ದಿಲೀಪ್ ಪೂಣಚ್ಚ, ಗದ್ದೆ ಮಾಲೀಕರಾದ ಕುಪ್ಪಂಡ ಅಯ್ಯಪ್ಪ, ಬಿಟ್ಟಂಗಾಲ ಗ್ರಾ.ಪಂ. ಸದಸ್ಯ ಬೊಪ್ಪಂಡ ವಸಂತ್, ಪಾಲಿಬೆಟ್ಟ ಗ್ರಾ.ಪಂ. ಸದಸ್ಯ ದೀಪಕ್, ಬಿಟ್ಟಂಗಾಲದ ಚೊಟ್ಟೆಮಂಡ ಬಿಪಿನ್, ಪೊನ್ನಂಪೇಟೆ ನಿಸರ್ಗ ಜೇಸಿಸ್‌ನ ನಿಕಟ ಪೂರ್ವ ಅಧ್ಯಕ್ಷ ಬಿ.ಈ. ಕಿರಣ್, ಪೂರ್ವಾಧ್ಯಕ್ಷ ಮುಕ್ಕಾಟಿರ ಸಂದೀಪ್ ಮೊದಲಾದವರು ಹಾಜರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೊನ್ನಂಪೇಟೆ ನಿಸರ್ಗ ಜೇಸಿಸ್‌ನ ಅಧ್ಯಕ್ಷರಾದ ಎ.ಎಸ್. ಟಾಟು ಮೊಣ್ಣಪ್ಪ ವಹಿಸಿದ್ದರು.

ಬಹುಮಾನ ವಿಜೇತರು

ಜೆ.ಸಿ.ಐ. ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ವಿರಾಜಪೇಟೆ-ಗೋಣಿಕೊಪ್ಪಲು ಮುಖ್ಯ ರಸ್ತೆ ಬದಿಯಲ್ಲಿರುವ ನಿವೃತ್ತ ಮೇ.ಜ. ಕೆ.ಪಿ.ನಂಜಪ್ಪ ಅವರ ಭತ್ತದ ಗದ್ದೆಯಲ್ಲಿ ಭಾನುವಾರ ನಡೆದ 5ನೇ ರಾಜ್ಯ ಮಟ್ಟದ ನಿಸರ್ಗ ಜೇಸಿ ಕೆಸರು ಗದ್ದೆ ಕ್ರೀಡಾಕೂಟ- 2017ರ ಭಾಗವಾಗಿ ನಡೆದ ಓಟದ ಸ್ಪರ್ದೆಯಲ್ಲಿ ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಿಂದ ನೂರಕ್ಕೂ ಮೀರಿದ ಸ್ಪರ್ಧಾಳುಗಳು ಭಾಗವಹಿಸಿ ಕ್ರೀಡಾ ಪ್ರೇಮ ಮೆರೆದರು.

ಕ್ರೀಡಾಕೂಟದ ಪುರುಷರ ವಿಭಾಗದ ಮುಕ್ತ ಓಟದ ಸ್ಪರ್ಧೆಯಲ್ಲಿ ಕುಂಜಿಲದ ಮಜೀದ್ ಪ್ರಥಮ, ಚೇಲಾವರದ ಗಗನ್ ದ್ವಿತೀಯ ಮತ್ತು ಗೋಣಿಕೊಪ್ಪಲಿನ ಅರುಣ್ ತೃತೀಯ ಬಹುಮಾನ ಪಡೆದರು.

ಮಹಿಳೆಯರ ವಿಭಾಗದ ಮುಕ್ತ ಓಟದ ಸ್ಪರ್ಧೆಯಲ್ಲಿ ಬಿ.ಶೆಟ್ಟಿಗೇರಿಯ ಲಸಿತಾ ಗಣಪತಿ ಪ್ರಥಮ, ಬಿಟ್ಟಂಗಾಲದ ಎಸ್.ಹೆಚ್. ಸುಪ್ರಿಯಾ ದ್ವಿತೀಯ ಹಾಗೂ ಬಿ.ವಿ. ನವ್ಯಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.

1ನೇ ತರಗತಿಯಿಂದ 5ನೇ ತರಗತಿವರೆಗಿನ ಸಬ್ ಜೂನಿಯರ್ ಬಾಲಕರ ಓಟದ ಸ್ಪರ್ಧೆಯಲ್ಲಿ ಹಾತೂರು ಜಿ.ಎಂ.ಪಿ. ಶಾಲೆಯ ಮನೋಜ್ ಪ್ರಥಮ, ಹೆಗ್ಗಳ ಜಿ.ಎಂ.ಪಿ. ಶಾಲೆಯ ಕೌಶಿಕ್ ದ್ವಿತೀಯ, ಅರುವತ್ತೋಕ್ಲು ಸರ್ವದೈವತಾ ಶಾಲೆಯ ಅರವಿನ್ ಮಾಚಯ್ಯ ತೃತೀಯ, ಬಾಲಕಿಯರ ವಿಭಾಗದಲ್ಲಿ ವಿರಾಜಪೇಟೆ ಪ್ರಗತಿ ಶಾಲೆಯ ಮಾನ್ಯ ಮುತ್ತಮ್ಮ ಪ್ರಥಮ, ಗೋಣಿಕೊಪ್ಪಲು ಲಯನ್ಸ್ ಶಾಲೆಯ ನಿಶಿರಾ ಮೊಣ್ಣಪ್ಪ ದ್ವಿತೀಯ ಬಹುಮಾನ ಗಿಟ್ಟಿಸಿಕೊಂಡರು.

 6ನೇ ತರಗತಿಯಿಂದ 9ನೇ ತರಗತಿವರೆಗಿನ ಜೂನಿಯರ್ ಬಾಲಕರ ವಿಭಾಗದಲ್ಲಿ ಗೋಣಿಕೊಪ್ಪಲು ಸಂತ ಥೋಮಸ್ ಶಾಲೆಯ ಜಿಜಿತ್ ಪ್ರಥಮ, ಹಾತೂರು ಪ್ರೌಢಶಾಲೆಯ ಗಿರೀಶ್ ದ್ವಿತೀಯ ಮತ್ತು ಅರಮೇರಿ ಎಸ್.ಎಂ.ಎಸ್. ಶಾಲೆಯ ಅಭಿಷೇಕ್ ಮುತ್ತಣ್ಣ ತೃತೀಯ, ಬಾಲಕೀಯರ ವಿಭಾಗದಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ಗಾನವಿ ಬೋಪಣ್ಣ ಪ್ರಥಮ, ವಿರಾಜಪೇಟೆ ಕಾವೇರಿ ಶಾಲೆಯ ಗಾಯನ ಬೋಪಣ್ಣ ದ್ವಿತೀಯ, ಗೋಣಿಕೊಪ್ಪಲು ಲಯನ್ಸ್ ಶಾಲೆಯ ಕ್ಷೀರಾ ಮೊಣ್ಣಪ್ಪ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

10ರಿಂದ ದ್ವಿತೀಯ ಪಿ.ಯು.ಸಿ.ವರೆಗಿನ ಸೀನಿಯರ್ ಬಾಲಕರ ವಿಭಾಗದಲ್ಲಿ ಮೂರ್ನಾಡು ಪಧವಿ ಪೂರ್ವ ಕಾಲೇಜಿನ ಶಫೀಕ್ ಪ್ರಥಮ, ಹಾತೂರು ಪ್ರೌಢಶಾಲೆಯ ಶರತ್ ದ್ವಿತೀಯ, ಮೂರ್ನಾಡು ಪಧವಿ ಪೂರ್ವ ಕಾಲೇಜಿನ ಸುಹೈಬ್ ತೃತೀಯ, ಬಾಲಕಿಯರ ವಿಭಾಗದಲ್ಲಿ ವಿರಾಜಪೇಟೆ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳಾದ ಎನ್.ಎನ್. ನಿಕಿತಾ ಪ್ರಥಮ, ಪ್ರಿಯಾ ದ್ವಿತೀಯ ಮತ್ತು ಟಿ. ಎಸ್. ಮೇಘನಾ ತೃತೀಯ ಬಹುಮಾನ ಪಡೆದುಕೊಂಡರು.

ವಿಜೇತರಿಗೆ ವೇದಿಕೆಯಲ್ಲಿ ತಾ.ಪಂ. ಸದಸ್ಯೆ ಆಶಾ ಜೇಮ್ಸ್, ಮಳೆನೀರು ಕೊಯ್ಲು ತಜ್ಞ ಅಜ್ಜಿಕುಟ್ಟಿರ ಸೂರಜ್, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಎಸ್. ಸುರೇಶ್, ಅಖಿಲ ಭಾರತ ವೀರಶೈವ ಮಹಾಸಭಾ ವಿರಾಜಪೇಟೆ ತಾಲೂಕು ಘಟಕ ಅಧ್ಯಕ್ಷ ಕೆ.ಎನ್. ಸಂದೀಪ್ ಸೇರಿದಂತೆ ಪ್ರಮುಖರು ಬಹುಮಾನ ವಿತರಿಸಿ ಶುಭ ಹಾರೈಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X