Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1966ರ ಏರ್‌ಇಂಡಿಯಾ ಅಪಘಾತದಲ್ಲಿ ಸಿಐಎ...

1966ರ ಏರ್‌ಇಂಡಿಯಾ ಅಪಘಾತದಲ್ಲಿ ಸಿಐಎ ಕೈವಾಡ..?

ಭೀಕರ ಅವಘಡದಲ್ಲಿ ಬಲಿಯಾಗಿದ್ದರು ಹೋಮಿ ಭಾಭಾ

ವಾರ್ತಾಭಾರತಿವಾರ್ತಾಭಾರತಿ30 July 2017 8:48 PM IST
share
1966ರ ಏರ್‌ಇಂಡಿಯಾ ಅಪಘಾತದಲ್ಲಿ ಸಿಐಎ ಕೈವಾಡ..?

ಮುಂಬೈ, ಜು.30: 1966ರಲ್ಲಿ ಸಂಭವಿಸಿದ ಏರ್‌ಇಂಡಿಯಾ ವಿಮಾನ ಅಪಘಾತದಲ್ಲಿ ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಅಪಘಾತದಲ್ಲಿ ಭಾರತದ ಪರಮಾಣು ಕಾರ್ಯಕ್ರಮದ ಮುಖ್ಯಸ್ಥ ರಾಗಿದ್ದ ಹೋಮಿ ಜಹಾಂಗಿರ್ ಭಾಭಾ ಮೃತಪಟ್ಟಿದ್ದರು. ಆಸ್ಟ್ರಿಯಾದ ವಿಯೆನ್ನದಲ್ಲಿ ನಡೆಯಲಿದ್ದ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಭಾಭಾ ಪ್ರಯಾಣಿಸುತ್ತಿದ್ದ ವಿಮಾನ ಸ್ವಿಝರ್‌ಲ್ಯಾಂಡಿನ ಪರ್ವತ ಪ್ರದೇಶದಲ್ಲಿ ಅಪಘಾತಕ್ಕೆ ಒಳಗಾಗಿತ್ತು. 

2008ರ ಜುಲೈ 11ರಂದು ಪತ್ರಕರ್ತ ಗ್ರೆಗರಿ ಡಗ್ಲಸ್ ಮತ್ತು ಸಿಐಎ ಅಧಿಕಾರಿ ರಾಬರ್ಟ್ ಕ್ರಾವ್ಲೆ ಮಧ್ಯೆ ನಡೆದಿದೆ ಎನ್ನಲಾದ ಸಂಭಾಷಣೆಯನ್ನು ಟಿಆರ್‌ಬಿನ್ಯೂಸ್.ಒಆರ್‌ಜಿ ಎಂಬ ಸುದ್ದಿಮಾಧ್ಯಮದಲ್ಲಿ ಮರುರೂಪಿಸಲಾಗಿದ್ದು ಈ ಸಂಭಾಷಣೆ ಗಮನಿಸಿದರೆ ಏರ್‌ಇಂಡಿಯಾ ಅಪಘಾತದಲ್ಲಿ ಸಿಐಎ ಕೈವಾಡ ಇದೆಯೇ ಎಂಬ ಶಂಕೆ ಬಲವಾಗುತ್ತದೆ. ಸಂಭಾಷಣೆ ಆರಂಭಿಸುವ ಸಿಐಎ ಅಧಿಕಾರಿ- ನಮಗೊಂದು ಸಮಸ್ಯೆ ಎದುರಾಗಿದೆ, ನಿನಗೆ ಗೊತ್ತಿರಬಹುದು.

1960ರ ವಿಷಯವಿದು. ಭಾರತವು ದುರಹಂಕಾರದಿಂದ ಅಣುಬಾಂಬ್ ತಯಾರಿಸಲು ಮುಂದಾಗಿತ್ತು. ಅವರಿಗೆ ರಶ್ಯದ ಬೆಂಬಲವಿತ್ತು- ಎಂದು ಹೇಳುತ್ತಾನೆ. ಮಾತು ಮುಂದುವರಿಸಿದ ಆತ, ಆ ವ್ಯಕ್ತಿ(ಹೋಮಿ ಭಾಭಾ) ತುಂಬಾ ಅಪಾಯಕಾರಿ. ನನ್ನ ಮಾತನ್ನು ನಂಬು. ಆದರೆ ದುರದೃಷ್ಟಕರ ರೀತಿಯಲ್ಲಿ ಆತ ಅಪಘಾತದಲ್ಲಿ ಮೃತಪಟ್ಟ. ವಿಯೆನ್ನ ಸಭೆಯಲ್ಲಿ ಆತ ಭಾಗವಹಿಸಿದ್ದರೆ ಮತ್ತಷ್ಟು ಸಮಸ್ಯೆಯಾಗುತ್ತಿತ್ತು. ಆದರೆ ಆತ ಪ್ರಯಾಣಿಸುತ್ತಿದ್ದ ಬೋಯಿಂಗ್ 707 ವಿಮಾನದ ಸರಕು ವಿಭಾಗದಲ್ಲಿಟ್ಟಿದ್ದ ಬಾಂಬ್ ಸ್ಫೋಟಗೊಂಡು ವಿಮಾನ ಅಪಘಾತಕ್ಕೀಡಾಯಿತು ಎಂದು ಹೇಳುತ್ತಾನೆ. ತನಗೆ ಮುಂದುವರಿಯಲು ಅನುಮತಿ ದೊರೆತರೆ, ಭಾರತವು 18 ತಿಂಗಳೊಳಗೆ ಪರಮಾಣು ಬಾಂಬ್ ನಿರ್ಮಿಸುವ ಸಾಮರ್ಥ್ಯ ಪಡೆಯಲಿದೆ ಎಂದು 1965ರ ಅಕ್ಟೋಬರ್‌ನಲ್ಲಿ ಆಕಾಶವಾಣಿಯಲ್ಲಿ ಮಾಡಿದ ಭಾಷಣದಲ್ಲಿ ಹೋಮಿ ಭಾಭಾ ಹೇಳಿದ್ದರು.

ಭಾರತವು ಬಲಿಷ್ಠ ರಾಷ್ಟ್ರವೆಂದು ಪರಿಗಣಿಸಲ್ಪಡಲು ಪರಮಾಣು ಶಕ್ತ ರಾಷ್ಟ್ರವಾಗಬೇಕು ಎಂದು ಮನಗಂಡಿದ್ದ ಭಾಭಾ, ಶಾಂತಿಯ ಉದ್ದೇಶಕ್ಕಾಗಿ ಭಾರತವು ಪರಮಾಣು ಕಾರ್ಯಕ್ರಮ ಆರಂಭಿಸಬೇಕು ಎಂದು ಆಶಿಸಿದ್ದರು. ಇದರ ಜೊತೆಗೆ ದೇಶದ ರಕ್ಷಣಾ ಸಾಮರ್ಥ್ಯ ಹೆಚ್ಚಿಸಲು ಪರಮಾಣು ಬಾಂಬ್ ಹೊಂದಿರಬೇಕು ಎಂಬ ರಹಸ್ಯ ಉದ್ದೇಶವನ್ನೂ ಹೋಮಿ ಭಾಭಾ ಹೊಂದಿದ್ದರು ಎಂದು ಗುರುತು ಬಹಿರಂಗಪಡಿಸಲು ಬಯಸದ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಭಾಭಾ ವಿಮಾನ ಅಪಘಾತದಲ್ಲಿ ಮೃತಪಟ್ಟರೂ, 1974ರ ಮೇ 18ರಂದು ಪೋಖರನ್‌ನಲ್ಲಿ ‘ನಗುವ ಬುದ್ಧ’ ಎಂಬ ಹೆಸರಲ್ಲಿ ಭಾರತವು ತನ್ನ ಪ್ರಪ್ರಥಮ ಅಣುಬಾಂಬ್ ಪರೀಕ್ಷೆ ನಡೆಸುವುದರೊಂದಿಗೆ ಭಾಭಾ ಅವರ ಕನಸು ನನಸಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X