ಕಾವ್ಯಾ ಮನೆಗೆ ಸಚಿವ ರಮಾನಾಥ ರೈ ಭೇಟಿ

ಮಂಗಳೂರು, ಜು. 30: ಅಸಹಜವಾಗಿ ಸಾವಿಗೀಡಾದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಮನೆಗೆ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ರವಿವಾರ ಭೇಟಿ ನೀಡಿದರು.
ಕಾವ್ಯಾ ಹೆತ್ತವರನ್ನು ಸಚಿವರು ಸಂತೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈ ಪ್ರಕರಣದಲ್ಲಿ ಕೆಲವೊಂದು ಸಂಶಯಗಳು ಕಾವ್ಯಾರ ಮನೆಯವರಲ್ಲಿದೆ. ಇದರ ಸತ್ಯಾಸತ್ಯತೆಗಳು ಹೊರಗೆ ಬರಬೇಕೆಂದು ಅವರು ಅಪೇಕ್ಷಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಪ್ರಾಮಾಣಿಕವಾಗಿ ತನಿಖೆ ನಡೆಸಲಿದೆ ಎಂದು ಹೇಳಿದರು.
ಕಾವ್ಯಾ ಉತ್ತಮ ಕ್ರೀಡಾಪಟು ಆಗಿದ್ದು, ಈ ನಿಟ್ಟಿನಲ್ಲಿ ಅವಳ ಕುಟುಂಬಕ್ಕೆ ರಾಜ್ಯ ಸರಕಾರ ಗರಿಷ್ಠ ನೆರವು ನೀಡಲಿದೆ ಎಂದು ಸಚಿವ ರಮಾನಾಥ ರೈ ತಿಳಿಸಿದರು.
ಸಚಿವರೊಂದಿಗೆ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Next Story





