Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್‌ಡಿಪಿಐನಿಂದ ರಾಷ್ಟ್ರೀಯ ಅಭಿಯಾನ

ಎಸ್‌ಡಿಪಿಐನಿಂದ ರಾಷ್ಟ್ರೀಯ ಅಭಿಯಾನ

‘ಹಿಂಸಾ ಹತ್ಯೆಯನ್ನು ಪ್ರತಿರೋಧಿಸೋಣ’

ವಾರ್ತಾಭಾರತಿವಾರ್ತಾಭಾರತಿ31 July 2017 5:52 PM IST
share
ಎಸ್‌ಡಿಪಿಐನಿಂದ ರಾಷ್ಟ್ರೀಯ ಅಭಿಯಾನ

ಬೆಂಗಳೂರು, ಜು.31: ಗೋ ರಕ್ಷಕರ ಗುಂಪುಗಳ ಹಿಂಸಾ ಹತ್ಯೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ‘ಭಾರತದ ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೋಧಿಸೋಣ’ ಎಂಬ ಶೀರ್ಷಿಕೆಯಡಿ ಆ.1 ರಿಂದ 25 ರವರೆಗೆ ರಾಷ್ಟ್ರಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾರ್ಟಿಯ ಕಾರ್ಯದರ್ಶಿ ಅಕ್ರಮ್ ಹಸನ್, ದೇಶದಲ್ಲಿ ಗೋ ರಕ್ಷಣೆ ಹೆಸರಿನಲ್ಲಿ ಗೋ ರಕ್ಷಕರು ನಿರ್ಮಾಣ ಮಾಡಿರುವ ಅರಾಜಕತೆಯನ್ನು ಪ್ರತಿರೋಧಿಸಲು ಹಾಗೂ ಭಯದ ವಾತಾವರಣದಿಂದ ಜನರನ್ನು ಹೊರತರುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಹೇಳಿದರು.

ದೇಶದಲ್ಲಿ ನೂರಾರು ಅಲ್ಪಸಂಖ್ಯಾತ ಹಾಗೂ ದಲಿತ ಕುಟುಂಬಗಳು ಕೋಮುವಾದಿಗಳ ದಾಳಿಯಿಂದ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿವೆ. ಸಂಘ ಪರಿವಾರ ಹಾಗೂ ಬಿಜೆಪಿ ಬೆಂಬಲಿತ ಗೋ ರಕ್ಷಕರು ನಡೆಸಿರುವ ಹಿಂಸಾ ಕೃತ್ಯಗಳಿಂದ ಇದುವರೆಗೂ 29 ಮಂದಿ ಅಮಾಯಕ ಜೀವಗಳು ಬಲಿಯಾಗಿದ್ದು, ನೂರಾರು ಜನರು ಗಾಯಗೊಂಡು ದಯನಿಯ ಸ್ಥಿತಿ ತಲುಪಿದ್ದಾರೆ. ದೇಶದಾದ್ಯಂತ ಹಲವಾರು ಗೋ ರಕ್ಷಕರ ಹೆಸರಿನ ದಾಳಿಗಳು ವರದಿಯಾಗುತ್ತಿದ್ದರೂ ಸರಕಾರ ವೌನ ವಹಿಸಿರುವುದು ಖಂಡನೀಯ ಎಂದು ತಿಳಿಸಿದರು.

ಅಮಾಯಕ ಮುಸ್ಲಿಂ ಸಮುದಾಯವನ್ನು ಗುರಿಯಾಸಿಕೊಂಡಿರುವ ಸಂಘ ಪರಿವಾರ ಮತ್ತು ಗೋ ರಕ್ಷಕರು ಅನಗತ್ಯವಾಗಿ ಮುಸ್ಲಿಂಮರ ಮೇಲೆ ಗುಂಪು ದಾಳಿ ನಡೆಸಿ, ಭೀಪ್ ಹೆಸರಿನಲ್ಲಿ ಅವರ ಮೇಲೆ ಹಲ್ಲೆ ಮಾಡುತ್ತಿರುವ ಕೃತ್ಯಗಳು ಹೆಚ್ಚಾಗುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಗೋ ರಕ್ಷಕರ ಮೇಲೆ ಕ್ರಮ ಕೈಗೊಳ್ಳುವುದರ ಬದಲಿಗೆ ಜಾರಿಕೆಯ ಹೇಳಿಕೆ ನೀಡುತ್ತಿದ್ದಾರೆ. ಮುಸ್ಲಿಂ ಸಮುದಾಯದ ಹಿತ ಕಾಪಾಡಲು ಅಥವಾ ದೇಶದಲ್ಲಿ ಹೆಚ್ಚಾಗುತ್ತಿರುವ ಗೋ ರಕ್ಷಕರ ಹಿಂಸಾ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಪ್ರಧಾನಿ ಮೋದಿಗೆ ಮನಸ್ಸಿಲ್ಲವೆಂದು ಅವರು ಆರೋಪಿಸಿದರು.

ಈ ನಿಟ್ಟಿನಲ್ಲಿ ಎಸ್‌ಡಿಪಿಐ ವತಿಯಿಂದ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ಗುಂಪು ಹಿಂಸಾ ಹತ್ಯೆಯ ವಿರುದ್ಧ ಜನರನ್ನು ಜಾಗೃತಿಗೊಳಿಸಿ ಸಂಘಟಿಸುವ ಮತ್ತು ಪ್ರತಿರೋಧಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಸ್ನೇಹ ಕೂಟ, ವಿಚಾರ ಸಂಕಿರಣ, ರ್ಯಾಲಿ, ಸಾರ್ವಜನಿಕ ಸಭೆಗಳು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಆನ್‌ಲೈನ್ ಮೂಲಕ ದೂರು ಸಲ್ಲಿಕೆ, ಪೋಸ್ಟರ್ ಅಭಿಯಾನ, ಕರಪತ್ರ ವಿತರಣೆ ಮಾಡಲಾಗುತ್ತದೆ.

ಇಂದು ರಾಜಸ್ಥಾನದ ಜೈಪುರದಲ್ಲಿ ಉದ್ಘಾಟನೆಯಾಗಲಿರುವ ಅಭಿಯಾನ ರಾಷ್ಟ್ರದ ಎಲ್ಲ ರಾಜ್ಯಗಳಲ್ಲಿ ಏಕಕಾಲದಲ್ಲಿ ಆರಂಭವಾಗಿ, ಆ.25 ರಂದು ಹಿಂಸಾ ಹತ್ಯೆಗಳು ವಿರೋಧಿಸಿ ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಹಾಗೂ ಅವರ ನೋವಿನಲ್ಲಿ ನಾವು ಭಾಗಿದಾರರು ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ‘ಮನೆಯಿಂದ ಹೊರಬನ್ನಿ’ ಎಂಬ ಸೂಚನ ಫಲಕ ಪ್ರದರ್ಶಿಸಿ ಕಪ್ಪುಪಟ್ಟಿ ಧರಿಸಿ ರ್ಯಾಲಿ ಮಾಡಲಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X