Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಕೃತಿ ವಿಕೋಪ ನಿರ್ವಹಣೆಗೆ ಸಮರ್ಪಕ...

ಪ್ರಕೃತಿ ವಿಕೋಪ ನಿರ್ವಹಣೆಗೆ ಸಮರ್ಪಕ ಸಿದ್ಧತೆ ಅಗತ್ಯ: ಡಾ. ಕೆ. ಹರೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ31 July 2017 6:33 PM IST
share
ಪ್ರಕೃತಿ ವಿಕೋಪ ನಿರ್ವಹಣೆಗೆ ಸಮರ್ಪಕ ಸಿದ್ಧತೆ ಅಗತ್ಯ: ಡಾ. ಕೆ. ಹರೀಶ್ ಕುಮಾರ್

ಚಾಮರಾಜನಗರ, ಜು.31: ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ಎದುರಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಂಡು ಸನ್ನದ್ಧರಾಗಿರಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಕೃತಿ ವಿಕೋಪ ಅಥವ ಮಾನವ ನಿರ್ಮಿತ ವಿಕೋಪವಿರಲಿ ಮುನ್ನೆಚ್ಚರಿಕೆ ಕ್ರಮಗಳು ಅತಿ ಅಗತ್ಯ. ಇದಕ್ಕಾಗಿಯೇ ಜಿಲ್ಲಾಡಳಿತದ ವತಿಯಿಂದ ಪ್ರಕೃತಿ ವಿಕೋಪ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕಾಲಕಾಲಕ್ಕೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಾಗುತ್ತಿದೆ. ವಿಪತ್ತು ನಿರ್ವಹಣಾ ಕೇಂದ್ರಕ್ಕೆ 24*7 ಮಾದರಿಯಲ್ಲಿ ಸಿಬ್ಬಂದಿ ನಿಯೋಜಿಸಿ ಸಮರ್ಪಕವಾಗಿ ಮಾಹಿತಿ ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಅತಿವೃಷ್ಟಿ ಇಲ್ಲವೆ ಅನಾವೃಷ್ಟಿ ಸಂದರ್ಭದಲ್ಲಿ ಹಾನಿ ಸಂಭವಿಸಿದ ಕುರಿತು ವರದಿಗಳು ತ್ವರಿತವಾಗಿ ಬರಬೇಕಿದೆ. ಇದರಿಂದ ಶೀಘ್ರವಾಗಿ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅತ್ಯಂತ ಚುರುಕಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಸಂದರ್ಭಕ್ಕೆ ಅನುಸಾರವಾಗಿ ಸ್ಪಂದಿಸಬೇಕಿದೆ ಎಂದು ಹರೀಶ್ ಕುಮಾರ್ ತಿಳಿಸಿದರು.

ಪ್ರಕೃತಿ ವಿಕೋಪದಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅರಣ್ಯ, ಹೆದ್ದಾರಿ, ವಿದ್ಯುತ್ ಸಂಪರ್ಕ ಸೇರಿದಂತೆ ಇನ್ನಿತರ ಹಲವು ಕ್ಷೇತ್ರಗಳಲ್ಲಿ ತೊಂದರೆಗಳು ಉಂಟಾಗಬಹುದು. ಹೀಗಾಗಿ ನಿರ್ಧಿಷ್ಟ ಇಲಾಖೆಗೆ ಮಾತ್ರ ಪ್ರಕೃತಿ ವಿಕೋಪ ನಿರ್ವಹಣೆ ಸಾಧ್ಯವಾಗುವುದಿಲ್ಲ. ಎಲ್ಲ ಇಲಾಖೆಗಳೂ ಒಂದಿಲ್ಲೊಂದು ಕಾರಣದಿಂದ ಒಟ್ಟಾಗಿ ಪ್ರಕೃತಿ ವಿಕೋಪದಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸಲು ಅಗತ್ಯ ವ್ಯವಸ್ಥೆಗೆ ಸಿದ್ಧರಾಗಲೇಬೇಕಿದೆ ಎಂದರು.

ಪ್ರಸ್ತುತ ಇರುವ ತುರ್ತು ನಿರ್ವಹಣಾ ಕೇಂದ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಗತ್ಯ ಸಲಕರಣೆಗಳು ಬೇಕಿದ್ದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಬೇಕು. ಪೂರ್ಣ ಪ್ರಮಾಣದ ಸಲಕರಣೆ ಪಟ್ಟಿಯನ್ನು ಅಂತಿಮಗೊಳಿಸಿ ಸಲ್ಲಿಸಿದರೆ ಎಲ್ಲ ಅಂಶಗಳನ್ನು ಒಳಗೊಂಡ ಪ್ರಸ್ತಾವನೆವೊಂದನ್ನು ಸಲ್ಲಿಸಬಹುದು. ಇದಕ್ಕಾಗಿ ಅಧಿಕಾರಿಗಳು ಕೂಡಲೇ ಪ್ರತ್ಯೇಕ ಸಭೆ ನಡೆಸಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ, ಪ್ರಕೃತಿ ವಿಕೋಪ ನಿರ್ವಹಣೆಗೆ ಅಗ್ನಿಶಾಮಕ, ಗೃಹರಕ್ಷಕ ದಳ ಇಲಾಖೆಗಳ ಪಾತ್ರವೂ ಸಹ ಅತ್ಯಂತ ಅವಶ್ಯಕವಾಗಿದೆ. ಆರೋಗ್ಯ ಪೂರಕ ಕಾರ್ಯಾಗಾರವನ್ನು ನಡೆಸಿ ಸಿಬ್ಬಂದಿಗೆ ಮಾರ್ಗದರ್ಶನ ಮಾಡಬೇಕಾಗುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ಅಗ್ನಿಶಾಮಕ ಅಧಿಕಾರಿ ನವೀನ್, ಗೃಹರಕ್ಷಕ ದಳದ ಜಿಲ್ಲಾ ಸಮಾಧೇಷ್ಠರಾದ ಬಸವರಾಜು, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X