Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವ್ಯಾಪಂ: ಕಂಪ್ಯೂಟರ್ ಖರೀದಿ ದಾಖಲೆ...

ವ್ಯಾಪಂ: ಕಂಪ್ಯೂಟರ್ ಖರೀದಿ ದಾಖಲೆ ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ31 July 2017 6:43 PM IST
share
ವ್ಯಾಪಂ: ಕಂಪ್ಯೂಟರ್ ಖರೀದಿ ದಾಖಲೆ ನಾಪತ್ತೆ

ಹೊಸದಿಲ್ಲಿ, ಜು.31: ವ್ಯಾಪಂ ಎಂದೇ ಜನಪ್ರಿಯವಾಗಿರುವ ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ 2012-13ರಲ್ಲಿ 17.56 ಲಕ್ಷ ರೂ.ಮೊತ್ತದ ಕಂಪ್ಯೂಟರ್‌ಗಳನ್ನು ಖರೀದಿಸಿದ್ದು ಈ ಬಗ್ಗೆ ಯಾವುದೇ ದಾಖಲೆ ಲಭ್ಯವಿಲ್ಲ ಎಂಬ ವಿಷಯ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಲಾದ ಅರ್ಜಿಯಿಂದ ತಿಳಿದುಬಂದಿದೆ.

ಕಂಪ್ಯೂಟರ್ ಖರೀದಿಸಿದ ಬಗ್ಗೆ ಮೂಲ ದಾಖಲೆ, ಖರೀದಿಯ ನಿಯಮ ಅಥವಾ ಖರೀದಿಗೆ ಸಂಬಂಧಿಸಿದ ದಾಸ್ತಾನು ರಿಜಿಸ್ಟರ್‌ಗಳನ್ನು ಮಂಡಳಿ ಒದಗಿಸಿಲ್ಲ ಎಂದು ಲೆಕ್ಕಪತ್ರ ಪರಿಶೋಧಕರ ವರದಿಯಲ್ಲಿ ತಿಳಿಸಲಾಗಿದೆ.

 ಕಂಪ್ಯೂಟರ್ ಖರೀದಿಯ ದಾಖಲೆ ಅತಿಮುಖ್ಯವಾಗಿದೆ. ಡಿಜಿಟಲ್ ದಾಖಲೆ ಮತ್ತು ಕಂಪ್ಯೂಟರ್‌ಗಳಿಂದ ಪಡೆಯುವ ಎಕ್ಸೆಲ್ ಹಾಳೆಗಳು ಅಪರಾಧ ಪ್ರಕರಣದ ಸಂದರ್ಭ ಪ್ರಮುಖ ಸಾಕ್ಷಿಗಳಾಗುತ್ತವೆ ಎಂದು ಆರ್‌ಟಿಐ ಅಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ಅಜಯ್ ದುಬೆ ಹೇಳಿದ್ದಾರೆ.

 ಮಂಡಳಿ ನಡೆಸು ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ಈ ಹಗರಣದಲ್ಲಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಹಾಗೂ ಉದ್ಯಮಿಗಳು ಒಳಗೊಂಡಿದ್ದು ಹಲವಾರು ವರ್ಷಗಳಿಂದ ನಡೆಯುತ್ತಿತ್ತು. ಆದರೆ 2013ರಲ್ಲಿ ಬೆಳಕಿಗೆ ಬಂದಿದೆ. ಆ ಬಳಿಕ ಹಗರಣಕ್ಕೆ ಸಂಬಂಧಿಸಿದ 45ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

 ಮಂಡಳಿ 2012ರಲ್ಲಿ ಕಾನ್‌ಸ್ಟೇಬಲ್ ಆಯ್ಕೆಗೆ ನಡೆಸಿದ ನೇಮಕಾತಿ ಪರೀಕ್ಷೆ ಸಂದರ್ಭ ಅಭ್ಯರ್ಥಿಗಳಿಂದ ಸಂಗ್ರಹಿಸಿದ್ದ 6.95 ಲಕ್ಷ ರೂಪಾಯಿ ಮೊತ್ತವನ್ನು ರಾಜ್ಯ ಸರಕಾರದ ಅನುಮತಿ ಪಡೆಯದೆ ಹಿಂದಿರುಗಿಸಿರುವ ಬಗ್ಗೆ ಲೆಕ್ಕಪತ್ರ ವರದಿಯಲ್ಲಿ ಪ್ರಶ್ನಿಸಲಾಗಿದೆ.

ವರದಿಯ ಪ್ರಕಾರ ಒಬಿಸಿ ಮತ್ತು ಮೀಸಲಾತಿ ರಹಿತ ವಿಭಾಗದ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ಇದ್ದರೆ, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 250 ರೂ.ಶುಲ್ಕ ಇದೆ. 471 ಒಬಿಸಿ, 689 ಮೀಸಲಾತಿ ರಹಿತ ಮತ್ತು 314 ಎಸ್‌ಸಿ ಮತ್ತು 148 ಎಸ್‌ಟಿ ಅಭ್ಯರ್ಥಿಗಳಿಂದ ಶುಲ್ಕ ಸಂಗ್ರಹಿಸಲಾಗಿದೆ. ಆದರೆ 2012-13ರಲ್ಲಿ ಎಷ್ಟು ಪರೀಕ್ಷೆ ನಡೆಸಲಾಗಿದೆ, ಪ್ರತಿಯೊಂದು ವಿಭಾಗದಿಂದ ಎಷ್ಟು ಅಭ್ಯರ್ಥಿಗಳು ಪಾಲ್ಗೊಂಡಿದ್ದರು ಹಾಗೂ 2012-13ರಲ್ಲಿ ಪರೀಕ್ಷೆ ಮೂಲಕ ಸಂಗ್ರಹಿಸಲಾದ ಆದಾಯ ಎಷ್ಟು ಎಂಬ ಮಾಹಿತಿ ಒದಗಿಸಲು ಮಂಡಳಿ ವಿಫಲವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

     2009ರಲ್ಲಿ ನಕಲಿ ಅಭ್ಯರ್ಥಿಗಳಾಗಿ (ಮತ್ತೊಬ್ಬರ ಹೆಸರಲ್ಲಿ ಪರೀಕ್ಷೆ ಬರೆಯುವುದು) ಮೆಡಿಕಲ್ ಪ್ರವೇಶ ಪರೀಕ್ಷೆ ಬರೆದಿದ್ದ 20 ಮಂದಿಯನ್ನು 2013ರಲ್ಲಿ ಬಂಧಿಸುವುದರೊಂದಿಗೆ ‘ವ್ಯಾಪಂ’ ಹಗರಣ ಬೆಳಕಿಗೆ ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X