Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಒತ್ತು...

ಸರಕಾರ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಒತ್ತು ನೀಡಲಿ: ಟಿ.ಎಂ.ಶಿವಶಂಕರ್ ಸಲಹೆ

‘ಬಾಯಾರಿದ ಬೆಂಗಳೂರು ಹಾಗೂ ನೀರಿನ ಬರಕ್ಕೆ ಪರಿಹಾರ’ ಕುರಿತ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ31 July 2017 6:59 PM IST
share

ಬೆಂಗಳೂರು,ಜು. 31: ನದಿ ಜೋಡಣೆಯಂತಹ ಬೃಹತ್ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬದಲು ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಒತ್ತು ನೀಡಬೇಕು ಎಂದು ಭೂಜಲ ವಿಜ್ಞಾನಿ ಟಿ.ಎಂ.ಶಿವಶಂಕರ್ ಸರಕಾರಕ್ಕೆ ಸಲಹೆ ನೀಡಿದ್ದಾರೆ.

ಸೋಮವಾರ ಬಸವೇಶ್ವರನಗರ ಹಿರಿಯ ನಾಗರೀಕರ ವೇದಿಕೆಯು ನಗರದಲ್ಲಿ ಆಯೋಜಿಸಿದ್ದ ‘ಬಾಯಾರಿದ ಬೆಂಗಳೂರು ಹಾಗೂ ನೀರಿನ ಬರಕ್ಕೆ ಪರಿಹಾರ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

 ಬೆಂಗಳೂರು ನಗರದಲ್ಲಿ ಪ್ರತಿವರ್ಷ 900 ಮೀ.ಮೀ. ಮಳೆ ಸುರಿಯುತ್ತಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ವ್ಯವಸ್ಥಿತ ಮಳೆ ನೀರು ಕೊಯ್ಲುನಿಂದ ನಗರದ ಜನರು 25 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದು. ಆದರೆ ನಗರಕ್ಕೆ 19 ಟಿಎಂಸಿ ಅಡಿ ನೀರನ್ನು ಕಾವೇರಿ ನದಿಯಿಂದ ತರಲು ಕೋಟ್ಯಂತರ ರೂ. ವ್ಯಯಿಸಲಾಗುತ್ತಿದೆೆ ಎಂದರು. ಸರಕಾರದ ಅಂಕಿ ಅಂಶಗಳ ಪ್ರಕಾರ ನಗರದ ಜನಸಂಖ್ಯೆ ಪ್ರತಿವರ್ಷ ಶೇ.16 ರಷ್ಟು ಹೆಚ್ಚುತ್ತಿದೆ. ನಗರದಲ್ಲಿರುವ ಜನಸಂಖ್ಯೆಗೆ ತಲಾ 200 ಲೀ. ನೀರು ನೀಡಬೇಕು. ಆದರೆ, ಇಂದು ಕೇವಲ 50 ಲೀ. ನೀರನ್ನು ಮಾತ್ರ ಪೂರೈಕೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಲಮಂಡಳಿ ನಗರಕ್ಕೆ ಕುಡಿಯಲು ಪೂರೈಸುವ ನೀರಿನಲ್ಲಿ ಶೇ.10 ಜನ ಮಾತ್ರ ಕುಡಿಯಲು ಬಳಸುತ್ತಿದ್ದಾರೆ. ಪೂರೈಕೆಯಾಗುವ ನೀರಿನಲ್ಲಿ ಶೇ.55 ರಷ್ಟನ್ನು ಉದ್ಯಾನಗಳ ನಿರ್ವಹಣೆಗೆ, ಶೇ.28 ಮನೆ ಬಳಕೆಗೆ, ಶೇ.12 ರಷ್ಟು ಮಾರಾಟಕ್ಕೆ ಶೇ.2 ಕೈಗಾರಿಕೆಗಳಿಗೆ ಬಳಕೆಯಾಗುತ್ತಿದೆ ಎಂದು ತಿಳಿಸಿದರು. ಕೊಳವೆ ಮಾರ್ಗದಲ್ಲಿನ ದೋಷದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ವ್ಯರ್ಥವಾಗುತ್ತಿದೆ. ನಲ್ಲಿಗಳಲ್ಲಿ ಹನಿಹನಿ ನೀರು ಸೋರಿಕೆಯಿಂದಲೇ ಪ್ರತಿದಿನ 58 ಸಾವಿರ ಲೀಟರ್ ನೀರು ಪೋಲಾಗುತ್ತಿದೆ. ನೀರಿನ ಮಹತ್ವ ಮತ್ತು ನೀರನ್ನು ಮಿತವಾಗಿ ಬಳಸುವ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು.

ನಗರದಲ್ಲಿ ಮಳೆನೀರು ಕೊಯ್ಲು, ಅಂತರ್ಜಲ ಹೆಚ್ಚಳಕ್ಕೆ ಇಂಗುಗುಂಡಿಗಳ ನಿರ್ಮಾಣ ಮತ್ತು ತ್ಯಾಜ್ಯ ನೀರಿನ ಮರುಬಳಕೆಗೆ ಸರಕಾರ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X