Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರ ಕೈಗಾರಿಕ ಪ್ರದೇಶದ ರಸ್ತೆಗಳ...

ನಗರ ಕೈಗಾರಿಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಐದು ಕೋಟಿ ರೂ.ಅನುದಾನ: ಸಚಿವ ಜಾರ್ಜ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ31 July 2017 7:01 PM IST
share
ನಗರ ಕೈಗಾರಿಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಐದು ಕೋಟಿ ರೂ.ಅನುದಾನ: ಸಚಿವ ಜಾರ್ಜ್ ಭರವಸೆ

ಬೆಂಗಳೂರು, ಜು. 31: ಬಿಬಿಎಂಪಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಐದು ಕೋಟಿ ರೂ. ವಿಶೇಷ ಅನುದಾನ ನೀಡಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಕಾಸಿಯಾ ಆಯೋಜಿಸಿದ್ದ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೈಗಾರಿಕಾ ಪ್ರದೇಶಗಳ ಸಮಸ್ಯೆಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಗರದಲ್ಲಿ ಮೂಲ ಸೌಕರ್ಯ ಒದಗಿಸಲು ಸರಕಾರ ಎಂಟು ಸಾವಿರಕ್ಕೂ ಹೆಚ್ಚು ಅನುದಾನ ಮಿಸಲಿಟ್ಟಿದೆ. ಈ ಅನುದಾನ ಬಳಸಿಕೊಂಡು ಹಂತ ಹಂತವಾಗಿ ಬೆಂಗಳೂರಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮೀಸಲಿಟ್ಟಿರುವ ಅನುದಾನದಲ್ಲಿ ಪೀಣ್ಯ, ರಾಜಾಜಿನಗರ ಸೇರಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೈಗಾರಿಕ ಪ್ರದೇಶಗಳಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಐದು ಕೋಟಿ ರೂ. ನೀಡಲಾಗುವುದು ಎಂದರು.

ನಗರದ ವ್ಯಾಪ್ತಿಯಲ್ಲಿರುವ ಸಣ್ಣ ಕೈಗಾರಿಕೆಗಳಿಗೆ ಪೂರಕವಾಗುವಂತ ಅನೇಕ ಯೋಜನೆಗಳನ್ನು ರಾಜ್ಯ ಸರಕಾರ ರೂಪಿಸಿದೆ. ಆದರೂ ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದೆ. ಮುಂದಿನ ದಿನದಲ್ಲಿ ರಾಜಧಾನಿಯಲ್ಲಿರುವ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯವಿರುವ ಮೂಲ ಸೌಲಭ್ಯ ಒದಗಿಸಲು, ಶಾಸಕರ ಹಾಗೂ ಬಿಬಿಎಂಪಿ ಮೇಯರ್ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೈತರ ರೀತಿ ಸಣ್ಣ ಕೈಗಾರಿಕೆಗಳು ದೇಶದ ಬೆನ್ನೆಲುಬು. ಮಾರುಕಟ್ಟೆ ನಿಭಾಯಿಸುವಲ್ಲಿ ವಿಫಲವಾಗುತ್ತಿರುವುದರಿಂದ ಕೃಷಿಕರಿಗೆ ಹಾಗೂ ಸಣ್ಣ ಕೈಗಾರಿಕೋದ್ಯಮಿಗಳಿಗೆ ಲಾಭ ಕೈ ತಪ್ಪುತ್ತಿದೆ. ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ನೀಡಲು ರಾಜ್ಯದ ಸಣ್ಣ ಕೈಗಾರಿಕೆಗಳು ಇನ್ನಷ್ಟು ದಕ್ಷತೆಯನ್ನು ಕಾಪಾಡಿಕೊಳ್ಳಬೇಕಿದೆ ಎಂದರು.

ಕಾಸಿಯಾ ಅಧ್ಯಕ್ಷ ಆರ್. ಹನುಮಂತೇಗೌಡ ಮಾತನಾಡಿ, ಕೈಗಾರಿಕೋದ್ಯಮಿಗಳು ಕಟ್ಟುವ ತೆರಿಗೆಯ ಶೇ.40ರಷ್ಟನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಬಳಸಬೇಕು. ಜಲಮಂಡಳಿ ವಿಧಿಸಿರುವ ಷರತ್ತುಗಳನ್ನು ಸರಳಗೊಳಿಸಬೇಕು ಹಾಗೂ ಬೆಂಗಳೂರು ಕೈಗಾರಿಕಾ ಪ್ರದೇಶದಲ್ಲಿ ಮೂಲ ಸೌಲಭ್ಯ ಒದಗಿಸಲು ನೂರು ಕೋಟಿ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.
ಸಂವಾದದಲ್ಲಿ ಶಾಸಕ ಎಸ್.ಟಿ ಸೋಮಶೇಖರ್, ಕಾಸಿಯಾ ಉಪಾಧ್ಯಕ್ಷ ಬಸವರಾಜ್ ಜವಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X