Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಪ್ರತಿ ತಿಂಗಳು ಏರಿಕೆಯಾಗಲಿದೆ...

ಇನ್ನು ಪ್ರತಿ ತಿಂಗಳು ಏರಿಕೆಯಾಗಲಿದೆ ಎಲ್‌ಪಿಜಿ ಬೆಲೆ

ಸಬ್ಸಿಡಿಸಹಿತ ಸಿಲಿಂಡರ್ ವ್ಯವಸ್ಥೆ ಶೀಘ್ರ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ31 July 2017 8:08 PM IST
share
ಇನ್ನು ಪ್ರತಿ ತಿಂಗಳು ಏರಿಕೆಯಾಗಲಿದೆ ಎಲ್‌ಪಿಜಿ ಬೆಲೆ

ಹೊಸದಿಲ್ಲಿ, ಜು.31: ಮುಂದಿನ ವರ್ಷದ ಮಾರ್ಚ್‌ನಿಂದ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ ವ್ಯವಸ್ಥೆಯನ್ನು ಅಂತ್ಯಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು ಈ ಹಿನ್ನೆಲೆಯಲ್ಲಿ ಇನ್ನು ಪ್ರತೀ ತಿಂಗಳು ಸಬ್ಸಿಡಿ ಸಹಿತ ಎಲ್‌ಪಿಜಿ ಬೆಲೆಯಲ್ಲಿ 4 ರೂ. ಏರಿಕೆ ಮಾಡಲಾಗುವುದು ಎಂದು ಕೇಂದ್ರದ ಪೆಟ್ರೋಲಿಯಂ ಮತ್ತು ಪ್ರಾಕೃತಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

  ಈ ಹಿಂದೆ, 14.2 ಕಿ.ಗ್ರಾಂ. ತೂಕದ ಸಿಲಿಂಡರ್‌ಗೆ ಪ್ರತೀ ತಿಂಗಳು 2 ರೂ. ಹೆಚ್ಚಿಸುವಂತೆ (ವ್ಯಾಟ್ ಹೊರತುಪಡಿಸಿ) ಇಂಡಿಯನ್ ಆಯಿಲ್(ಐಒಸಿ), ಭಾರತ್ ಪೆಟ್ರೋಲಿಯಂ(ಬಿಪಿಸಿಎಲ್) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ(ಹೆಚ್‌ಪಿಸಿಎಲ್) ಸಂಸ್ಥೆಗಳಿಗೆ ಸರಕಾರ ಸೂಚಿಸಿತ್ತು. ಇದೀಗ ಈ ಏರಿಕೆ ಪ್ರಮಾಣವನ್ನು ದ್ವಿಗುಣಗೊಳಿಸಿ ಸಬ್ಸಿಡಿಯನ್ನು ಶೂನ್ಯ ಪ್ರಮಾಣಕ್ಕೆ ಇಳಿಸಲು ಸೂಚಿಸಲಾಗಿದೆ ಎಂದು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ. ವರ್ಷವೊಂದಕ್ಕೆ ಪ್ರತೀ ಮನೆಗೆ ಸಬ್ಸಿಡಿ ದರದಲ್ಲಿ 12 ಎಲ್‌ಪಿಜಿ ಸಿಲಿಂಡರ್ ಪಡೆಯಲು ಅವಕಾಶವಿದೆ. ಇದಕ್ಕಿಂತ ಹೆಚ್ಚಿನ ಸಿಲಿಂಡರ್ ಅಗತ್ಯವಿದ್ದವರು ಮಾರುಕಟ್ಟೆ ದರ ನೀಡಿ ಪಡೆಯಬಹುದಾಗಿದೆ.

 14.2 ಕಿ.ಗ್ರಾಂ. ತೂಕದ ಸಿಲಿಂಡರ್‌ಗೆ ಪ್ರತೀ ತಿಂಗಳು 2 ರೂ. ಹೆಚ್ಚಿಸುವಂತೆ (ವ್ಯಾಟ್ ಹೊರತುಪಡಿಸಿ) 2016ರ ಜುಲೈ 1ರಂದು ಸಾರ್ವಜನಿಕ ಕ್ಷೇತ್ರದ ತೈಲ ಮಾರುಕಟ್ಟೆ ಸಂಸ್ಥೆಗಳಿಗೆ ಅಧಿಕಾರ ನೀಡಲಾಗಿದ್ದು ಆ ಬಳಿಕ ಇದುವರೆಗೆ 10 ಬಾರಿ ದರ ಏರಿಸಲಾಗಿದೆ. ಇದೀಗ 2017ರ ಮೇ 30ರಂದು ನೀಡಿದ ಆದೇಶದಲ್ಲಿ , ಸಬ್ಸಿಡಿ ಶೂನ್ಯಮಟ್ಟ ತಲುಪುವರೆಗೆ ಅಥವಾ ಮುಂದಿನ ವರ್ಷದ ಮಾರ್ಚ್‌ವರೆಗೆ (ಯಾವುದು ಮೊದಲೋ ಅದುವರೆಗೆ) ಪ್ರತೀ ತಿಂಗಳೂ 4 ರೂ. ದರ ಏರಿಸುವಂತೆ ಸರಕಾರ ತಿಳಿಸಿದೆ . ಈಗ ದಿಲ್ಲಿಯಲ್ಲಿ 14.2 ಕಿ.ಗ್ರಾಂ. ತೂಕದ ಸಬ್ಸಿಡಿಸಹಿತ ಸಿಲಿಂಡರ್‌ಗೆ 477.46 ರೂ. ದರವಿದೆ. ಕಳೆದ ವರ್ಷದ ಜೂನ್‌ನಲ್ಲಿ 419.18 ರೂ. ದರ ಇತ್ತು. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 564 ರೂ. ಆಗಿದೆ. ಇತರ ಸಬ್ಸಿಡಿ ಸಹಿತ ಸಿಲಿಂಡರ್‌ಗಳ (5 ಕಿ.ಗ್ರಾಂ. ತೂಕ ಇತ್ಯಾದಿ) ಬೆಲೆಯನ್ನೂ ಸರಿ ಪ್ರಮಾಣದಲ್ಲಿ ಏರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ದೇಶದಲ್ಲಿ ಸಬ್ಸಿಡಿ ಸಹಿತ ಸಿಲಿಂಡರ್ ಹೊಂದಿದ ಒಟ್ಟು 18.11 ಕೋಟಿ ಗ್ರಾಹಕರಿದ್ದಾರೆ. ಇವರಲ್ಲಿ ‘ಪ್ರಧಾನಮಂತ್ರಿ ಉಜ್ವಲ ಯೋಜನೆ’ಯಲ್ಲಿ ಉಚಿತ ಎಲ್‌ಪಿಜಿ ಸಂಪರ್ಕ ಪಡೆದ 2.5 ಕೋಟಿ ಬಡ ಮಹಿಳೆಯರೂ ಸೇರಿದ್ದಾರೆ. ಸಬ್ಸಿಡಿ ರಹಿತ ಎಲ್‌ಪಿಜಿ ಬಳಕೆದಾರರ ಸಂಖ್ಯೆ 2.66 ಕೋಟಿ ಎಂದು ಸರಕಾರದ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X