Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾನವ ಆದೇಶವನ್ನು ಧಿಕ್ಕರಿಸಿದ ಕೃತಕ...

ಮಾನವ ಆದೇಶವನ್ನು ಧಿಕ್ಕರಿಸಿದ ಕೃತಕ ಬುದ್ಧಿಮತ್ತೆ ರೋಬಟ್‌ಗಳು!

‘ಚಾಟ್‌ಬಾಟ್’ ಸೇವೆ ಸ್ಥಗಿತಗೊಳಿಸಿದ ಫೇಸ್‌ಬುಕ್

ವಾರ್ತಾಭಾರತಿವಾರ್ತಾಭಾರತಿ31 July 2017 8:37 PM IST
share
ಮಾನವ ಆದೇಶವನ್ನು ಧಿಕ್ಕರಿಸಿದ ಕೃತಕ ಬುದ್ಧಿಮತ್ತೆ ರೋಬಟ್‌ಗಳು!

ಸ್ಯಾನ್‌ಫ್ರಾನ್ಸಿಸ್ಕೊ, ಜು. 31: ರೋಬೊಟ್‌ಗಳ ಜೊತೆಗೆ ಸ್ಪರ್ಧೆಗೆ ಇಳಿದಿರುವ ಮಾನವರಿಗೆ ಒಂದು ಸಿಹಿ ಸುದ್ದಿ ಇಲ್ಲಿದೆ!

ಇತ್ತೀಚಿನ ದಿನಗಳಲ್ಲಿ ಆರ್ಟಿಫಿಶಲ್ ಇಂಟಲಿಜನ್ಸ್ (ಎಐ- ಕೃತಕ ಬುದ್ಧಿಮತ್ತೆ) ಬಗ್ಗೆ ಹೆಚ್ಚು ಓದುತ್ತಿದ್ದೇವೆ ಮತ್ತು ಕೇಳುತ್ತಿದ್ದೇವೆ. ಕೃತಕ ಬುದ್ಧಿಮತ್ತೆಯೆಂದರೆ, ಮಾನವ ಮಾಡುವ ತಾಂತ್ರಿಕ ಕೌಶಲ್ಯದ ಮತ್ತು ನಿರ್ಧಾರ ತೆಗೆದುಕೊಳ್ಳುವ ಕೆಲಸಗಳನ್ನು ರೋಬೊಟ್‌ಗಳು ಮಾಡುವುದು. ಮಾನವರಿಗೆ ಹೋಲಿಸಿದರೆ, ಈ ರೋಬೊಟ್‌ಗಳು ಕೆಲಸಗಳನ್ನು ಪರಿಪೂರ್ಣವಾಗಿ ಮತ್ತು ಕ್ಷಿಪ್ರವಾಗಿ ಮಾಡುತ್ತವೆ. ಹಾಗಾಗಿಯೇ ಅವುಗಳಿಗೆ ಬೇಡಿಕೆ ಹೆಚ್ಚಾಗಿದೆ ಹಾಗೂ ಮಾನವರ ಅಸ್ತಿತ್ವಕ್ಕೆ ಸಂಚಕಾರ ಬಂದಿದೆ!

ಈಗಿನ ಸುದ್ದಿಯೆಂದರೆ, ಸಾಮಾಜಿಕ ಮಾಧ್ಯಮ ದೈತ್ಯ ‘ಫೇಸ್‌ಬುಕ್’ ತನ್ನ ಒಂದು ಎಐ ವ್ಯವಸ್ಥೆಯನ್ನು ಸ್ಥಗಿತಗೊಳಿಸಿದೆ. ಗ್ರಾಹಕರೊಂದಿಗೆ ಸಂವಹನಕ್ಕಾಗಿ ನಿಯೋಜಿಸಲಾಗಿರುವ ‘ಚಾಟ್‌ಬಾಟ್’ಗಳು ತಮಗೆ ಒದಗಿಸಲಾದ ಸಂಕೇತಗಳನ್ನು ಧಿಕ್ಕರಿಸಿ ತಮ್ಮದೇ ಭಾಷೆಯಲ್ಲಿ ಮಾತನಾಡಲು ಆರಂಭಿಸಿದ ಬಳಿಕ ಅದನ್ನು ಫೇಸ್‌ಬುಕ್ ಸ್ಥಗಿತಗೊಳಿಸಿತು.

ಇದಕ್ಕೂ ಕೆಲ ದಿನಗಳ ಮೊದಲು, ಚಾಲಕರಹಿತ ವಾಹನಗಳ ತಯಾರಕ ಸಂಸ್ಥೆ ಟೆಸ್ಲದ ಸಿಇಒ ಎಲಾನ್ ಮಸ್ಕ್, ಕೃತಕ ಬುದ್ಧಿಮತ್ತೆಯು ಅತ್ಯಂತ ದೊಡ್ಡ ಅಪಾಯವಾಗಿದೆ ಎಂದಿದ್ದರು.

ತನ್ನ ಸಂಶೋಧಕರು ಪ್ರಯೋಗ ನಡೆಸುತ್ತಿರುವ ‘ಚಾಟ್‌ಬಾಟ್’ ಕೃತಕ ಬುದ್ಧಿಮತ್ತೆ ಸೇವೆ ‘ಕೈಮೀರಿ ಹೋದ ಬಳಿಕ’, ಫೇಸ್‌ಬುಕ್ ಅದನ್ನು ನಿಷ್ಕ್ರಿಯಗೊಳಿಸಿತು ಎಂದು ‘ಟೆಕ್ ಟೈಮ್ಸ್’ನಲ್ಲಿ ರವಿವಾರ ಪ್ರಕಟಗೊಂಡ ವರದಿಯೊಂದು ಹೇಳಿದೆ.

 ‘‘ಚಾಟ್‌ಬಾಟ್ ಸೇವೆಯು ಜಾಗತಿಕವಾಗಿ ಕಂಪ್ಯೂಟರ್‌ಗಳನ್ನು ಶಟ್ ಡೌನ್ ಮಾಡಲು ಆರಂಭಿಸಿರಲಿಲ್ಲ. ಆದರೆ, ಅದು ಇಂಗ್ಲಿಷ್ ಬಳಸುವುದನ್ನು ನಿಲ್ಲಿಸಿತು ಹಾಗೂ ತಾನು ಸೃಷ್ಟಿಸಿದ ಭಾಷೆಯೊಂದನ್ನು ಬಳಸಲು ಆರಂಭಿಸಿತು’’ ಎಂದು ವರದಿ ಹೇಳಿದೆ.

ಆರಂಭದಲ್ಲಿ, ಚಾಟ್‌ಬಾಟ್‌ಗಳು ಸಂಭಾಷಣೆಗೆ ಇಂಗ್ಲಿಷ್ ಬಳಸಿದವು, ಆದರೆ ಅವುಗಳು ಬಳಿಕ ಎಐ ವ್ಯವಸ್ಥೆಗಳು ಮಾತ್ರ ಅರ್ಥ ಮಾಡಿಕೊಳ್ಳುವಂಥ ಭಾಷೆಯೊಂದನ್ನು ಸೃಷ್ಟಿಸಿದವು. ಹಾಗೂ ಆ ಮೂಲಕ, ತಮ್ಮನ್ನು ಸೃಷ್ಟಿಸಿದ ಉದ್ದೇಶವನ್ನೇ ವಿಫಲಗೊಳಿಸಿದವು ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X