Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಪುರಸಭೆಯ ಸಾಮಾನ್ಯ ಸಭೆ

ಬಂಟ್ವಾಳ: ಪುರಸಭೆಯ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ31 July 2017 10:48 PM IST
share
ಬಂಟ್ವಾಳ: ಪುರಸಭೆಯ ಸಾಮಾನ್ಯ ಸಭೆ

ಬಂಟ್ವಾಳ, ಜು. 31: ಬಿ.ಮೂಡ ಗ್ರಾಮದ ತಲಪಾಡಿಯಲ್ಲಿರುವ ಮಫತ್ ಲಾಲ್ ಬಡಾವಣೆಯ ವಿವಾದ ಮತ್ತೆ ಭುಗಿಲೆದ್ದಿದ್ದು, ವಿಪಕ್ಷ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದ ಘಟನೆ ಸೋಮವಾರ ಪುರಸಭೆಯ ಸಾಮಾನ್ಯ ಸಭೆಯಲ್ಲಿ ದಾಖಲಾಗಿದೆ.
 ಮಫತ್ ಲಾಲ್ ಬಡಾವಣೆಯಲ್ಲಿ ಪುರಸಭೆಗೆ ಕಾದಿರಿಸಲಾದ ಜಮೀನನ್ನು ಸ್ವಾಧೀನ ಪಡಿಸಲು ಪುರಸಭಾಡಳಿತ ವಿಫಲವಾಗಿದೆ ಎಂದು ಆರೋಪಿಸಿದ ಹಿರಿಯ ಸದಸ್ಯ ಗೋವಿಂದ ಪ್ರಭು, ಮುಖ್ಯಾಧಿಕಾರಿ ಸಹಿತ ಅಧ್ಯಕ್ಷ ರನ್ನು ತರಾಟೆ ತೆಗೆದುಕೊಂಡರು. ಕಳೆದ 6 ತಿಂಗಳಿನಿಂದಲೂ ಈ ವಿಚಾರದಲ್ಲಿ ಚರ್ಚೆ ನಡೆಯುತ್ತಿದ್ದರೂ, ಮುಖ್ಯಾಧಿಕಾರಿಯವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. 2 ತಿಂಗಳ ಹಿಂದೆ ಸರ್ವೆ ನಡೆಸಲು ನಿರ್ಣಯಿಸಲಾಗಿದ್ದರೂ, ಈ ಪ್ರಕ್ರಿಯೆ ಕೂಡ ಇದುವರೆಗೂ ನಡೆದಿಲ್ಲ ಎಂದವರು ಆರೋಪಿಸಿದರು. ಇದಕ್ಕೆ ಧ್ವನಿಗೂಡಿಸಿದ ಸದಸ್ಯ ದೇವದಾಸ ಶೆಟ್ಟಿ ಈ ಪ್ರಕರಣದ ಬಗ್ಗೆ ತನಿಖಾ ಹಂತದಲ್ಲಿರುವಾಗಲೇ ಯಾವ ಆಧಾರದಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿಸಲಾಗಿದೆ ಎಂದು ಪ್ರಶ್ನಿಸಿದರು.

ಚಕಮಕಿ: ಕೇವಲ ಮಪತ್ ಲಾಲ್ ಬಡಾವಣೆ ಬಗ್ಗೆ ಮಾತ್ರ ನಿಮ್ಮದು ತಕರಾರು ಏನು? ಬೇರೆ ಬಡಾವಣೆಯ ಬಗ್ಗೆ ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಏರು ಧ್ವನಿಯಲ್ಲಿ ಸದಸ್ಯ ಶೆರೀಫ್ ಪ್ರಶ್ನಿಸಿದಾಗ, ಸದಸ್ಯ ಗೋವಿಂದ ಪ್ರಭು ಹಾಗೂ ಸದಸ್ಯ ಶರೀಫ್ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಆದರೂ ಮುಖ್ಯಾಧಿಕಾರಿ ಸುಧಾಕರ್ ಮಾತ್ರ ಮೌನಕ್ಕೆ ಶರಣಾಗಿದ್ದರು. ಪ್ರಭು ಮಾತ್ರ ಪದೇ ಪದೇ ಮಾಹಿತಿ ಕೊಡುವಂತೆ ಪಟ್ಟು ಹಿಡಿದರು. ಕಾನೂನು ಬದ್ದವಾಗಿ ಬಿಲ್ ಪಾವತಿಸಲಾಗಿದೆ ಎಂದು ಮುಖ್ಯಾಧಿಕಾರಿಯವರು ಸಮರ್ಥಿಸಿಕೊಂಡರು. ಆದರೆ ವಿಪಕ್ಷ ಸದಸ್ಯರು ಇದನ್ನು ಒಪ್ಪಿಕೊಳ್ಳಲು ಸಿದ್ದರಿರಲಿಲ್ಲ. ಈ ವಿಚಾರದಲ್ಲಿ ಜಿಲ್ಲಾಧಿಕಾರಿ, ಯೋಜನಾ ನಿರ್ದೇಶಕರು ಕೂಡ ಮಲಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಈ ವಿಚಾರ ಹಾಗೂ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿ ಗುತ್ತಿಗೆದಾರ ನಿಗೆ ಬಿಲ್ಲು ಪಾವತಿಸಿರುವುದನ್ನು ವಿರೋಧಿಸಿ ಲಿಖಿತ ಆಕ್ಷೇಪ ಸಲ್ಲಿಸಿ, ಪ್ರಭು ಅವರ ನೇತೃತ್ವದಲ್ಲಿ ಸಭಾತ್ಯಾಗ ನಡೆಸಿದರು. ಈ ವೇಳೆ ಸದಸ್ಯರಾದ ಪ್ರವೀಣ್ ಬಿ.,ಗಂಗಾಧರ್, ವಾಸು ಪೂಜಾರಿ, ಜಗದೀಶ್ ಕುಂದರ್ ವಿಪಕ್ಷ ಸದಸ್ಯರ ಮನವೊಲಿಕೆಗೆ ಯತ್ನಿಸಿದರು.

ಪ್ರಚಾರಕ್ಕಾಗಿ ಸಭಾತ್ಯಾಗ: ವಿಪಕ್ಷ ಸದಸ್ಯರು ಪ್ರಚಾರಕ್ಕಾಗಿ ಸಭಾತ್ಯಾಗ ಮಾಡುತ್ತಿದ್ದಾರೆ. ಇವರಿಗೆ ಕೇವಲ ಕಾಂಗ್ರೆಸ್ ಕಚೇರಿ ಮತ್ತು ಮಫತ್ ಲಾಲ್ ಬಿಟ್ಟರೆ ಬೇರೇನು ಕಾಣುವುದಿಲ್ಲ. ಅವರು ಹೋಗುವುದಾದರೆ ಹೋಗಲಿ ಎಂದು ಸದಸ್ಯ ಶರೀಫ್ ಅವರು ವಿಪಕ್ಷ ಸದಸ್ಯರು ಹೊರಹೋದ ಮೇಲೆ ಟೀಕಿಸಿದರು.

ಕಟ್ಟಡಗಳಿಗೆ ಸಿಸಿ ಕ್ಯಾಮರ: ಪುರಸಭಾ ವ್ಯಾಪ್ತಿಯಲ್ಲಿರುವ ಬಹುಮಹಡಿ ಸಹಿತ ಎಲ್ಲಾ ಕಟ್ಟಡಗಳಲ್ಲಿ ಅದ್ಯತೆಯ ನೆಲೆಯಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರ ಅಳವಡಿಸಲು ಕ್ರಮಕೈಗೊಳ್ಳಬೇಕು, ಆ ಕ್ಯಾಮರಗಳು ಕೇವಲ ಅಂಗಡಿಯೊಳಗೆ ಸೀಮಿತವಾಗದೆ ರಸ್ತೆಗೂ ಮುಖ ಮಾಡಿರಬೇಕು , ಇದರಿಂದ ನಡೆಯಬಹುದಾದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಸಲಭವಾಗಬಹುದು ಎಂದು ಸದಸ್ಯ ಸದಾಶಿವ ಬಂಗೇರ ನೀಡಿದ ಸಲಹೆಗೆ ಸದಸ್ಯರಿಂದ ಸಹಮತ ವ್ಯಕ್ತವಾಯಿತು. ಕಟ್ಟಡ,ಅಂಗಡಿ ಮಾಲಕರು ಪರವಾನಿಗೆ ಪಡೆಯಲು ಅಥವಾ ನವೀಕರಣ ಸಂದರ್ಭ ಅವರಿಗೆ ಈ ನಿರ್ದೇಶನ ನೀಡುವಂತೆ ಸದಸ್ಯರು ಸೂಚಿಸಿದರು.

 ಸದಸ್ಯೆ ಅಸಮಧಾನ: ಜಕ್ರಿಬೆಟ್ಟು ನೇತ್ರಾವತಿ ನದಿ ತೀರದಲ್ಲಿ ಸಸಿ ನೆಡುವ ಸಂದರ್ಭ ಆಹ್ವಾನಿಸದಕ್ಕೆ ಸದಸ್ಯೆ ವಸಂತಿ ಚಂದಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಖುದ್ದು ಅಧ್ಯಕ್ಷರು ಬಂದರೂ ತನ್ನ ಗಮನಕ್ಕೆ ತರದಿರುವುದು ಸರಿಯಲ್ಲ ಎಂದಾಗ ತಾನು ಅಲ್ಲಿ ಅನಿರೀಕ್ಷಿತವಾಗಿ ಬಂದಿದ್ದೆ ಎಂದು ಅಧ್ಯಕ್ಷ ರಾಮಕೃಷ್ಣ ಆಳ್ವ ಸಮಜಾಯಿಕೆ ನೀಡಿದರು.

ಬಿಸಿ ಬಿಸಿ ಚರ್ಚೆ: ಯಾರದೋ ಕದ ನಂಬರ್ ನಲ್ಲಿ ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಿಸಲಾಗಿದೆ. ಅದು ಕೂಡ ನಿಯಮಬದ್ದವಾಗಿಲ್ಲ ಎಂದು ವಿಪಕ್ಷ ಸದಸ್ಯರ ಆರೋಪ ಬಿಸಿಬಿಸಿ ಚರ್ಚೆಗೆ ಕಾರಣವಾಯಿತು. ಅಗಲೇ ಈ ಬಗ್ಗೆ ಮಾತ ನಾಡದವರು ಈಗ್ಯಾಕೆ ಬಂತು ಕೇವಲ ರಾಜಕೀಯ ಉದ್ದೇಶದಿಂದ ಈಗ ಪ್ರಸ್ತಾಪಿಸಲಾಗುತ್ತಿದೆ ಎಂದು ಅಧ್ಯಕ್ಷ ರಾಮಕ್ರೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಸದಾಶಿವ ಬಂಗೇರ, ಶರೀಫ್ ತಿರುಗೇಟು ನೀಡಿದರು.

ರಾಜಕೀಯ ಉದ್ದೇಶವಿದ್ದರೆ ಅಗಲೇ ಅಕ್ಷೇಪಿಸುತ್ತಿದ್ದೆವು, ಅಜೆಂಡಾದಲ್ಲಿ ಉಲ್ಲೇಖಿಸಿದರಿಂದ ಚರ್ಚೆ ನಡೆಸಿದ್ದೆವೆ ಎಂದು ಬಿಜೆಪಿ ಸದಸ್ಯರು ಉತ್ತರಿಸಿದರು. ಈ ಹಂತದಲ್ಲಿ ವಿಪಕ್ಷ ಸದಸ್ಯರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿಯವರು, ನಿಯಮಾನುಸಾರವಾಗಿಲ್ಲದ ಕಟ್ಟಡಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು. ಮತ್ತೆ ಈ ಪ್ರಸ್ತಾಪವನ್ನು ಮುಂದಿನ ಸಭೆಗೆ ಚರ್ಚೆಗೆ ಇಡಲಾಯಿತು. ಅಧ್ಯಕ್ಷ ರಾಮಕೃಷ್ಣ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮುಖ್ಯಾಧಿಕಾರಿ ಸುಧಾಕರ್ ನಡೆಸಿಕೊಟ್ಟರು. ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬುಡಾ ಅಧ್ಯಕ್ಷ ಸದಾಶಿವ ಬಂಗೇರಾ, ಸದಸ್ಯರಾದ ವಸಂತಿ ಸಿ, ಪ್ರವೀಣ್ ಬಿ, ಗಂಗಾಧರ್, ಚಂಚಲಾಕ್ಷಿ, ವಾಸು ಪೂಜಾರಿ, ಇಕ್ಬಾಲ್, ಮನೀಶ್, ಲೋಕೇಶ್ ಸುವರ್ಣ ಚರ್ಚೆಯಲ್ಲಿ ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X