Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯೋಜನೆಗಳ ಯಶಸ್ಸಿಗೆ ಸಮುದಾಯದ...

ಯೋಜನೆಗಳ ಯಶಸ್ಸಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ: ಡಾ.ಎನ್.ಕೃಷ್ಣಮೂರ್ತಿ

ವಾರ್ತಾಭಾರತಿವಾರ್ತಾಭಾರತಿ1 Aug 2017 7:25 PM IST
share

ಬೆಂಗಳೂರು, ಆ.1: ಸರಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯವೆಂದು ಕರ್ನಾಟಕ ರಾಜ್ಯ ಆಹಾರ ನಿಗಮದ ಅಧ್ಯಕ್ಷ ಡಾ.ಎನ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಹಾಯ ಸಿಂಗಲ್ ವಿಂಡೋ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮ, ರೇಡಿಯೋ ಆಕ್ಟೀವ್ 90.4 ಹಾಗೂಸೆಂಟರ್ ಫಾರ್ ಆಡ್ವಕೆಸಿ ಅಂಡ್ ರೀಸರ್ಚ್ ಸಹಯೋಗದಲ್ಲಿ ಜೈನ್ ಯುನಿವರ್ಸಿಸಿಟಿಯಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಸಮಾಲೋಚನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಆಹಾರ ನಿಗಮವು ಆಹಾರ ಭದ್ರತಾ ಕಾಯಿದೆಯನ್ವಯ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೇಶದಲ್ಲಿ ಯಾವೊಬ್ಬ ಪ್ರಜೆಯು ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಈ ಕಾಯ್ದೆಯು ಅಸ್ತಿತ್ವಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಬಡ ಕುಟುಂಬದ ಹಸಿವನ್ನು ನೀಗಿಸುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ ಹಲೀಮಾ ಮಾತನಾಡಿ, ಸಮಗ್ರ ಶಿಶು ಅಭಿವೃದ್ದಿ ಸೇವೆಗಳಲ್ಲಿ ನ್ಯೂನತೆಯನ್ನು ಸರಿಪಡಿಸಲು ಸಮುದಾಯದ ಭಾಗವಹಿಸುವಿಕೆ ಬಹಳ ಮುಖ್ಯವಾಗಿದೆ. ಅಂಗನವಾಡಿ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜಾರಿಯಾಗುವ ನಿಟ್ಟಿನಲ್ಲಿ ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಸಹಾಯ ಸಿಂಗಲ್ ವಿಂಡೋದ ಸದಸ್ಯೆ ಗಾಯತ್ರಿ ಮಾತನಾಡಿ, ಸರಕಾರದ ಕಾರ್ಯಕ್ರಮಗಳು ಫಲಾನುಭವಿಗಳಿಗೆ ತಲುಪಲು ಇಲಾಖೆಗಳು ನೇರವಾಗಿ ಸಮುದಾಯದೊಂದಿಗೆ ಜೊತೆಗೂಡಬೇಕು. ಈ ನಿಟ್ಟಿನಲ್ಲಿ ಸಹಾಯ ಸಿಂಗಲ್ ವಿಂಡೋ ಸಂಸ್ಥೆಯು ಇಲಾಖೆ ಮತ್ತು ಸಮುದಾಯದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುತ್ತಿದೆ. ಇಲಾಖೆ ನಮ್ಮನ್ನು ಗುರುತಿಸಿ ಕಾರ್ಯಕ್ರಮಗಳನ್ನು ತಲುಪಲು ನಮ್ಮ ನೆರವನ್ನು ಪಡೆಯಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಹಾಯ ಸಿಂಗಲ್ ವಿಂಡೋದಡಿ ಕಾರ್ಯನಿರ್ವಹಿಸುವ 15 ವಾರ್ಡ್‌ಗಳಿಂದ ಸುಮಾರು 150 ಕಾರ್ಯಕರ್ತರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X