Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡೋಕಾ ಲಾ ತನ್ನದೆಂದು ಹೇಳಲು ಚೀನಾದಿಂದ...

ಡೋಕಾ ಲಾ ತನ್ನದೆಂದು ಹೇಳಲು ಚೀನಾದಿಂದ 2006ರ ರಾಜತಾಂತ್ರಿಕ ದಾಖಲೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ2 Aug 2017 7:08 PM IST
share
ಡೋಕಾ ಲಾ ತನ್ನದೆಂದು ಹೇಳಲು ಚೀನಾದಿಂದ 2006ರ ರಾಜತಾಂತ್ರಿಕ ದಾಖಲೆ ಬಿಡುಗಡೆ

ಬೀಜಿಂಗ್, ಆ. 2: ಡೋಕಾ ಲದಲ್ಲಿ ಭಾರತೀಯ ಪಡೆಗಳು ಚೀನಿ ಪ್ರದೇಶದೊಳಗೆ ಅತಿಕ್ರಮಣ ನಡೆಸಿವೆ ಎಂಬ ತನ್ನ ಆರೋಪವನ್ನು ಸಾಬೀತುಪಡಿಸಲು ಚೀನಾ ಬುಧವಾರ 2006ರ ರಾಜತಾಂತ್ರಿಕ ದಾಖಲೆಯೊಂದನ್ನು ಉಲ್ಲೇಖಿಸಿದೆ.

 2006 ಮೇ 10ರಂದು ಗಡಿ ವಿವಾದದ ಬಗ್ಗೆ ಚರ್ಚಿಸಲು ಭಾರತ ಮತ್ತು ಚೀನಾಗಳ ವಿಶೇಷ ಪ್ರತಿನಿಧಿಗಳ ನಡುವೆ ನಡೆದ ಸಭೆಯಲ್ಲಿ ಭಾರತ ತಂಡವು ದಾಖಲೆ (ನಾನ್ ಪೇಪರ್)ಯೊಂದನ್ನು ನೀಡಿತ್ತು. ಗ್ರೇಟ್ ಬ್ರಿಟನ್ ಮತ್ತು ಚೀನಾ 1890ರಲ್ಲಿ ಸಹಿ ಹಾಕಿದ ಒಪ್ಪಂದದಂತೆ ಸಿಕ್ಕಿಂ ವಲಯದಲ್ಲಿನ ಗಡಿ ಹೊಂದಾಣಿಕೆಗೆ ಉಭಯ ತಂಡಗಳು ಒಪ್ಪಿವೆ ಎಂಬುದಾಗಿ ಆ ದಾಖಲೆಯು ಹೇಳುತ್ತದೆ ಎಂದು ಚೀನಾ ಹೇಳಿಕೊಂಡಿದೆ.

 ‘‘ಸಿಕ್ಕಿಂ ವಲಯದಲ್ಲಿನ ಗಡಿ ಹೊಂದಾಣಿಕೆಗೆ ಉಭಯ ಬಣಗಳು ಒಪ್ಪಿವೆ’’ ಎಂದು ಭಾರತ ಸಲ್ಲಿಸಿದ ದಾಖಲೆಯನ್ನು ಉಲ್ಲೇಖಿಸಿ ಚೀನಾ ವಿದೇಶ ಸಚಿವಾಲಯ ಹೇಳಿದೆ.

ಅದೇ ವೇಳೆ, ಸಿಕ್ಕಿಂ ಮತ್ತು ಟಿಬೆಟ್‌ಗೆ ಸಂಬಂಧಿಸಿದಂತೆ ಗ್ರೇಟ್ ಬ್ರಿಟನ್ ಮತ್ತು ಚೀನಾಗಳ ನಡುವೆ ಏರ್ಪಟ್ಟಿರುವ 1890ರ ಒಪ್ಪಂದದ ಬದಲಿಗೆ ನೂತನ ಗಡಿ ಒಪ್ಪಂದವೊಂದಕ್ಕೆ ಹೊಸದಿಲ್ಲಿ ಮತ್ತು ಬೀಜಿಂಗ್ ಸಹಿ ಹಾಕಬೇಕು ಎಂಬ ಪ್ರಸ್ತಾಪವೊಂದನ್ನು ಚೀನಾ ಮೊದಲ ಬಾರಿ ಮುಂದಿಟ್ಟಿದೆ.

‘ನಾನ್ ಪೇಪರ್’ ಅನೌಪಚಾರಿಕ ದಾಖಲೆಯಾಗಿದ್ದು, ಅದರಲ್ಲಿ ಮಹತ್ವದ ವಿಷಯಗಳು ಸಾಮಾನ್ಯವಾಗಿ ಇರುವುದಿಲ್ಲ. ರಾಜತಾಂತ್ರಿಕ ಸಂಧಾನಗಳ ವೇಳೆ ಅವುಗಳನ್ನು ಬಳಸಿಕೊಳ್ಳಲಾಗುತ್ತದೆ. ಮಾತುಕತೆಗಳಲ್ಲಿ ತೊಡಗಿರುವ ಯಾವುದೇ ಬಣವು ಸಾಮಾನ್ಯವಾಗಿ ಅದರಲ್ಲಿರುವ ವಿಷಯಗಳನ್ನು ಅಧಿಕೃತವಾಗಿ ಬಹಿರಂಗಗೊಳಿಸುವುದಿಲ್ಲ.

ಆದಾಗ್ಯೂ, ಭಾರತ, ಚೀನಾ ಮತ್ತು ಎಲ್ಲ ಮೂರನೆ ದೇಶಗಳ ನಡುವಿನ ತ್ರಿ-ಸಂಧಿ ಒಪ್ಪಂದವನ್ನು ಸಂಬಂಧಿತ ದೇಶಗಳೊಂದಿಗೆ ಸಮಾಲೋಚನೆ ನಡೆಸಿ ಅಂತಿಮಗೊಳಿಸಲಾಗುವುದು ಎಂಬ ನಿರ್ಧಾರಕ್ಕೆ ಉಭಯ ದೇಶಗಳು 2012ರಲ್ಲಿ ಬಂದಿವೆ ಎಂಬುದಾಗಿ ಭಾರತದ ವಿದೇಶ ಸಚಿವಾಲಯ ಜೂನ್ 30ರಂದು ಹೊರಡಿಸಿದ ಹೇಳಿಕೆಯ ಬಗ್ಗೆ 15 ಪುಟಗಳ ಚೀನಾ ಹೇಳಿಕೆಯಲ್ಲಿ ಯಾವುದೇ ಉಲ್ಲೇಖವಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X