Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಲಿತರ ಕುಂದು ಕೊರತೆ ಸಭೆಯಲ್ಲಿ ಹೊರನಡೆದ...

ದಲಿತರ ಕುಂದು ಕೊರತೆ ಸಭೆಯಲ್ಲಿ ಹೊರನಡೆದ ಜಿಲ್ಲಾಧಿಕಾರಿ ವರ್ಗಾವಣೆ ಪಡೆದುಕೊಳ್ಳಲಿ : ದಲಿತ ಮುಖಂಡರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Aug 2017 7:18 PM IST
share
ದಲಿತರ ಕುಂದು ಕೊರತೆ ಸಭೆಯಲ್ಲಿ ಹೊರನಡೆದ ಜಿಲ್ಲಾಧಿಕಾರಿ ವರ್ಗಾವಣೆ ಪಡೆದುಕೊಳ್ಳಲಿ : ದಲಿತ ಮುಖಂಡರ ಆಗ್ರಹ

ಬಂಟ್ವಾಳ, ಆ. 2: ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಬುಡಕಟ್ಟು ಜನಾಂಗಗಳ ತ್ರೈಮಾಸಿಕ ಸಭೆಯಲ್ಲಿ ದಲಿತರ ಕುಂದು ಕೊರತೆಯನ್ನು ಆಲಿಸದೆ ಬಹಿಷ್ಕರಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಜಗದೀಶ್ ಅವರ ವರ್ತನೆಗೆ ಗರಂ ಆಗಿರುವ ದಲಿತ ಮುಖಂಡರು ಇಂತಹ ಜಿಲ್ಲಾಧಿಕಾರಿ ಸ್ವಯಂ ಪ್ರೇರಿತರಾಗಿ ಜಿಲ್ಲೆಯಿಂದ ವರ್ಗಾವಣೆ ಪಡೆದುಕೊಳ್ಳಬೇಕು, ಇಲ್ಲವೆ ಸರಕಾರ ಇಲ್ಲಿಂದ ಎತ್ತಂಗಡಿಗೊಳಿಸುವಂತೆ ಆಗ್ರಹಿಸಿದ್ದಾರೆ.

ದ.ಕ. ಜಿಲ್ಲಾ ಅಂಬೇಡ್ಕರ್ ಫಾರಂ ಫಾರ್ ಸೋಸಿಯಲ್ ಜಸ್ಟೀಸ್ ಅಧ್ಯಕ್ಷ ಬಾನುಚಂದ್ರ ಕೃಷ್ಣಾಪುರ ಹಾಗೂ ಬಂಟ್ವಾಳ ನವಚೇತನ ಸೇವಾ ಟ್ರಸ್ಟ್‍ನ ಅಧ್ಯಕ್ಷ ರಾಜಾ ಪಲ್ಲಮಜಲು ಅವರು ಬುಧವಾರ ಸಂಜೆ ಬಿ.ಸಿ.ರೋಡ್ ಪ್ರೆಸ್‍ಕ್ಲಬ್‍ನಲ್ಲಿ ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬುಧವಾರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಪ.ಜಾ., ಪಂಗಡದ ಹಾಗೂ ಬುಡಕಟ್ಟು ಜಾನಾಂಗಗಳ ಸಭೆಯಲ್ಲಿ ಜಿಲ್ಲಾಧಿಕಾರಿ ನಡೆದುಕೊಂಡ ವರ್ತನೆ ತಮಗೆ ನೋವು ತಂದಿದೆ ಎಂದರು.

ಜವಾಬ್ದಾರಿಯುತ ಸ್ಥಾನದಲ್ಲಿದ್ದು ನಮ್ಮ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ನೀಡಬೇಕಾದ ಜಿಲ್ಲಾಧಿಕಾರಿಯವರೇ ಸಭೆಯಲ್ಲಿ ದಲಿತ ಮುಖಂಡರು ಮಾಡಿದ ಪ್ರಸ್ತಾಪವನ್ನು ಧಿಕ್ಕರಿಸಿ ಸಭೆಯನ್ನೇ ಬಹಿಷ್ಕರಿಸಿ ಹೊರ ನಡೆದಿರುವುದು ದಲಿತರಿಗೆ ಮಾಡಿದ ಅವಮಾನವಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರು ಕೂಡಾ ದಲಿತ ಮುಖಂಡರನ್ನು ದಬಾಯಿಸಿ ಬಾಯಿ ಮುಚ್ಚಿಸಿದ್ದಾರೆ. ಸಭೆಯಲ್ಲಿ ನಡೆದ ಎಲ್ಲ ಘಟನಾವಳಿಗೆ ಇವರಿಬ್ಬರು ನೇರ ಹೊಣೆ ಎಂದು ಆರೋಪಿಸಿದರು.

ಕಳೆದ ಹಲವು ಸಮಯದಿಂದ ಜಿಲ್ಲೆಯಲ್ಲಿ ಡಿಸಿ ಮನ್ನಾ ಜಾಗವನ್ನು ದಲಿತರಿಗೆ ಹಂಚಿಕೆ ಮಾಡುವಂತೆ ಪ್ರತೀ ತ್ರೈಮಾಸಿಕ ಸಭೆಗಳಲ್ಲಿ ಪ್ರಸ್ತಾಪಿಸುತ್ತಾ ಬರಲಾಗಿದೆ. ಆದರೆ ಈ ಬಗ್ಗೆ ಜಿಲ್ಲಾಡಳಿತ ಇದುವರೆಗೂ ಯಾವುದೇ ಕ್ರಮ ಕೈಗೊಲ್ಲದೆ ಇದನ್ನು ಸರಕಾರಕ್ಕೆ ಬರೆಯಲಾಗಿದೆ ಎಂದು ಹೇಳುತ್ತಲೇ ಬರಲಾಗುತ್ತಿದೆ. ಬುಧವಾರದ ತ್ರೈಮಾಸಿಕ ಸಭೆಯಲ್ಲೂ ಈ ಬಗ್ಗೆ ಮತ್ತೆ ಪ್ರಸ್ತಾಪಿಸಲಾಗಿತ್ತು. ಇದಕ್ಕೆ ಜಿಲ್ಲಾಧಿಕಾರಿ ಈ ಸಂಬಂಧವಾಗಿ ಸರಕಾರದಿಂದ ನಮಗೆ ಯಾವುದೇ ಸ್ಪಷ್ಟ ನಿರ್ದೇಶನ ಇಲ್ಲ ಎಂದು ಹೇಳಿ ಜಾರಿಕೊಳ್ಳಲು ಯತ್ನಿಸಿದಾಗ ಇದನ್ನು ಆಕ್ಷೇಪಿಸಲಾಯಿತು. ಈ ಸಂದರ್ಭದಲ್ಲಿ ಹಠಾತನೆ ಸಭೆಯನ್ನು ಬಹಿಷ್ಕರಿಸಿ ಜಿಲ್ಲಾಧಿಕಾರಿ ಹೊರ ನಡೆದಿದ್ದಾರೆ ಎಂದು ಆರೋಪಿಸಿದರು.

ಗೋಮಾಲ, ಪರಂಬೋಕು, ಕುಂಕಿ ಜಾಗವನ್ನು ಅಕ್ರಮ ಸಕ್ರಮದಡಿಯಲ್ಲಿ ಉಳ್ಳವರಿಗೆ ಮಿತಿಗಿಂತ ಜಾಸ್ತಿ ಹಂಚಿಕೆ ಮಾಡಲಾಗುತ್ತಿರುವ ಉದಾಹರಣೆ ತಾಲೂಕಿನಲ್ಲಿ ಸಾಕಷ್ಟು ಇದೆ. ಆದರೆ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾ ಜಮೀನು ದಲಿತರಿಗೆ ಹಂಚಿಕೆ ಮಾಡಲು ಜನಪ್ರತಿನಿಧಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಇದುವರೆಗೂ ಸಾಧ್ಯವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಅವರು, ಸಭೆಯಲ್ಲಿ ಯಾವುದೇ ಸಮಸ್ಯೆಗಳನ್ನು ಪ್ರಸ್ತಾಪಿಸಿದಾಗ ಜಿಲ್ಲಾಧಿಕಾರಿ ನಮಗೆ ಮಾತನಾಡಲು ಅವಕಾಶ ಕಲ್ಪಿಸದೆ ಕೈ ಸನ್ನೆ ಮಾಡಿ ಕುಳಿತುಕೊಳ್ಳಲು ಸೂಚನೆ ನೀಡುತ್ತಾರೆ ಎಂದು ಆಪಾದಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಜಗದೀಶ್ ಅವರ ಈ ವರ್ತನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗುವುದು. ಸಾಮಾಜಿಕ ನ್ಯಾಯವನ್ನು ಒದಗಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಾದ್ಯವಾಗದ ಜಿಲ್ಲಾಧಿಕಾರಿ ಈ ಜಿಲ್ಲೆಗೆ ಅರ್ಹರಲ್ಲ. ಅವರನ್ನು ಈ ಕೂಡಲೇ ಜಿಲ್ಲೆಯಿಂದ ವರ್ಗಾಹಿಸಬೇಕು. ಇಲ್ಲದಿದ್ದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಕಾನೂನು ಬದ್ಧವಾದ ಹೋರಾಟ ನಡೆಸಿಯಾದರೂ ಅವರನ್ನು ಇಲ್ಲಿಂದ ವರ್ಗಾವಣೆ ಆಗುವಂತೆ ಮಾಡಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಳೆ ಅಲೆಮಾರಿಗಳ ಹಿತರಕ್ಷಣಾ ಸಮಿತಿ ಸದಸ್ಯ ಜನಾರ್ದನ ಬೋಳಂತ್ತೂರು, ದ.ಕ. ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಜಯಾ ವಿ. ಸಂಪೋಲಿ, ಬಂಟ್ವಾಳ ತಾಲೂಕು ನಲಿಕೆಯವರ ಯುವ ವೇದಿಕೆ ಅಧ್ಯಕ್ಷ ರಾಘವೇಂದ್ರ ಸುರುಳಿ ಮೂಲೆ, ದಲಿತ ನಾಗರಿಕ ಹಿತ ರಕ್ಷಣಾ ಯುವ ವೇದಿಕೆಯ ಅಧ್ಯಕ್ಷ ಸತೀಶ್ ಅರಳ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯ ಶೇಖರ ಕಡ್ತಲಬೆಟ್ಟು ಅವರು ಉಪಸ್ಥಿತರಿದ್ದರು.

ಶಿವಪ್ಪ ಕೊಲೆ ಪ್ರತಿಧ್ವನಿ

ಸದ್ಯ ಮುಚ್ಚಿ ಹೋಗಿರುವ 2001ರಲ್ಲಿ ಮಾರ್ಚ್ 11ರಂದು ಕಾವಳಕಟ್ಟೆಯಲ್ಲಿ ನಡೆದ ದಲಿತ ಮುಖಂಡ ಶಿವಪ್ಪ ಬಂಗೇರ ಕೊಲೆ ಪ್ರಕರಣ ಬುಧವಾರ ನಡೆದ ಸಭೆಯಲ್ಲೂ ಮತ್ತೆ ಪ್ರಸ್ತಾಪಿಸಲಾಗಿತ್ತಾದರೂ ಎಸ್ಪಿಯವರಿಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಬಾನುಚಂದ್ರ ಕೃಷ್ಣಾಪುರ ಆರೋಪಿಸಿದ್ದಾರೆ.

ಪ್ರಕರಣಗಳು ಯಾವ ಹಂತದಲ್ಲಿ ಇದೆ ಎಂಬ ಬಗ್ಗೆ ಎಸ್ಪಿಯವರಿಗೆ ಮಾಹಿತಿ ಇರಬೆಕಾಗಿದ್ದು ಆದರೆ ಈಗಾಗಲೇ 'ಸಿ' ವರದಿ ಸಲ್ಲಿಸಲಾಗಿರುವ ಶಿವಪ್ಪ ಬಂಗೇರ ಕೊಲೆ ಪ್ರಕರಣದಲ್ಲಿ ಈವರೆಗೂ ಆರೋಪಿಗಳ ಪತ್ತೆಯಾಗಿಲ್ಲ. ಈ ಪ್ರಕರಣದ ಬಗ್ಗೆ ಪುನರ್ ಪರಿಶೀಲನೆ ನಡೆಸುವುದಾಗಿ ಎಸ್ಪಿಯವರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X