Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ.15ರಂದು ಕಲ್ಮಾಡಿ ಸ್ಟೆಲ್ಲಾ ಮಾರೀಸ್...

ಆ.15ರಂದು ಕಲ್ಮಾಡಿ ಸ್ಟೆಲ್ಲಾ ಮಾರೀಸ್ ಚರ್ಚ್‌ನಲ್ಲಿ ವಾರ್ಷಿಕ ಹಬ್ಬ

ವಾರ್ತಾಭಾರತಿವಾರ್ತಾಭಾರತಿ2 Aug 2017 10:28 PM IST
share

ಉಡುಪಿ, ಆ.2: ಕಲ್ಮಾಡಿಯ ಸ್ಟೆಲ್ಲಾ ಮಾರೀಸ್ ಚರ್ಚ್‌ನಲ್ಲಿ ಪ್ರತಿಷ್ಠಾಪನೆ ಗೊಂಡಿರುವ ಆರೋಗ್ಯಮಾತೆಯ ಪ್ರತಿಷ್ಠಾಪನಾ ಹಬ್ಬವು ಆ.15ರಂದು ನಡೆಯಲಿದೆ ಎಂದು ಚರ್ಚ್‌ನ ಧರ್ಮಗುರುಗಳಾದ ವಂ.ಆಲ್ಬನ್ ಡಿಸೋಜ ತಿಳಿಸಿದ್ದಾರೆ.

ಇಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉತ್ಸವದಲ್ಲಿ ಜಾತಿ-ಮತ-ಧರ್ಮದ ಭೇದವಿಲ್ಲದೇ ಎಲ್ಲರೂ ಭಾಗವಹಿಸಲಿದ್ದು, ಎಲ್ಲಾ ಧರ್ಮದ ಜನರನ್ನು ಪ್ರೀತಿ ಹಾಗೂ ಐಕ್ಯತೆಯಿಂದ ಬೆಸೆಯುವ ಪುಣ್ಯಕ್ಷೇತ್ರಗಳಲ್ಲಿ ಇದೂ ಒಂದಾಗಿದೆ ಎಂದರು.

ಆ.6ರಿಂದ 14ರವರೆಗೆ ಪ್ರತಿದಿನ ಸಂಜೆ 4:00 ಗಂಟೆಗೆ ನೊವೆನಾ ಬಲಿಪೂಜೆ ಹಾಗೂ ಪವಿತ್ರ ತೈಲ ಲೇಪನವಿರುತ್ತದೆ. ಈ ದಿನಗಳಲ್ಲಿ ರೋಗಿಗಳಿಗೆ, ವೃದ್ಧರಿಗೆ, ಮಕ್ಕಳಿಗೆ, ಯುವಕರಿಗೆ ಹಾಗೂ ಭಕ್ತರ ಕೋರಿಕೆಗಳ ಈಡೇರಿಕೆಗೆ ವಿಶೇಷ ಪ್ರಾರ್ಥನೆ ನಡೆಯಲಿದೆ. ಆ.13ರಂದು ಅಪರಾಹ್ನ 2:30ಕ್ಕೆ ಆರೋಗ್ಯ ಮಾತೆ ಮರಿಯಮ್ಮ ತಾಯಿಯ ಮೂರ್ತಿಯನ್ನು ಆದಿಉಡುಪಿ ಜಂಕ್ಷನ್‌ನಿಂದ ಮೆರವಣಿಗೆಯಲ್ಲಿ ಸ್ಟೆಲ್ಲಾ ಮಾರೀಸ್ ಚರ್ಚ್‌ಗೆ ತರಲಾಗುವುದು ಎಂದರು.

ಆ.15ರಂದು ಪುಣ್ಯಕ್ಷೇತ್ರದ ಹಬ್ಬ ನಡೆಯಲಿದೆ. ಆ ದಿನ ಬೆಳಗ್ಗೆ 7:00ಕ್ಕೆ ಕೊಂಕಣಿ ಭಾಷೆ, ಸಂಜೆ 4:00ಕ್ಕೆ ಕನ್ನಡ ಹಾಗೂ 6:00ಕ್ಕೆ ಆಂಗ್ಲ ಭಾಷೆಗಳಲ್ಲಿ ಬಲಿಪೂಜೆ ನಡೆಯಲಿದೆ. ಹಬ್ಬದ ಸಾಂಪ್ರದಾಯಿಕ ಪೂಜೆ ಆ.15ರಂದು ಬೆಳಗ್ಗೆ 10:30ಕ್ಕೆ ಉಡುಪಿ ಧರ್ಮಪ್ರಾಂತದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೊರಿಂದ ನಡೆಯಲಿದೆ. ಬಳಿಕ ಎಲ್ಲರಿಗೂ ಅನ್ನಸಂತರ್ಪಣೆ ನಡೆಯಲಿದೆ.

ಇದೀಗ ವಿನೂತನ ವಿನ್ಯಾಸದಲ್ಲಿ ಬೋಟ್ ಮಾದರಿಯಲ್ಲಿ ನೂತನ ಚರ್ಚ್‌ನ ನಿರ್ಮಾಣ ಕಾರ್ಯ ಐದು ಕೋಟಿ ರೂ.ವೆಚ್ಚದಲ್ಲಿ ನಡೆಯುತ್ತಿದೆ. ಇತ್ತೀಚೆಗೆ ಚರ್ಚ್‌ನ ಮೇಲ್ಬಾಗದಲ್ಲಿ ಅತೀದೊಡ್ಡ ಶಿಲುಬೆಯನ್ನು ಪ್ರತಿಷ್ಠಾಪಿಸಲಾಗಿದೆ. ಈ ನೂತನ ಚರ್ಚ್‌ನ ಉದ್ಘಾಟನೆ 2018ರ ಜ.6ರಂದು ನಡೆಯಲಿದೆ. ಇದರಲ್ಲಿ ಒಂದು ಸಾವಿರ ಮಂದಿಗೆ ಒಮ್ಮೆಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ವಂ. ಆಲ್ಬನ್ ಡಿಸೋಜ ನುಡಿದರು.

ಸುದ್ದಿಗೋಷ್ಠಿಯಲ್ಲಿ ಚರ್ಚ್‌ನ ಮಾಜಿ ಉಪಾಧ್ಯಕ್ಷೆ ಪ್ಲಾವಿಯಾ ಮಥಾಯಸ್, ಚರ್ಚ್‌ನ ಉಪಾಧ್ಯಕ್ಷ ಸಂಜಯ್ ಮೆಲ್ವಿನ್ ಅಂದ್ರಾದೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X