Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡೋಕಾ ಲಾ ದಲ್ಲಿ ಭಾರತದ ಸೈನಿಕರ ಸಂಖ್ಯೆ...

ಡೋಕಾ ಲಾ ದಲ್ಲಿ ಭಾರತದ ಸೈನಿಕರ ಸಂಖ್ಯೆ ಕಡಿಮೆಯಾಗಿಲ್ಲ: ಚೀನಾ ಹೇಳಿಕೆಗೆ ಭಾರತದ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ3 Aug 2017 6:47 PM IST
share
ಡೋಕಾ ಲಾ ದಲ್ಲಿ ಭಾರತದ ಸೈನಿಕರ ಸಂಖ್ಯೆ ಕಡಿಮೆಯಾಗಿಲ್ಲ: ಚೀನಾ ಹೇಳಿಕೆಗೆ ಭಾರತದ ಸ್ಪಷ್ಟನೆ

ಹೊಸದಿಲ್ಲಿ, ಆ.3: ಭಾರತೀಯ ಸೇನಾಪಡೆ ಡೋಕಾ ಲಾ ದಲ್ಲಿ ತನ್ನ ಸೈನಿಕರನ್ನು ಕ್ರಮೇಣ ಕಡಿಮೆಗೊಳಿಸುತ್ತಿದ್ದು 400ರಷ್ಟಿದ್ದ ಸೈನಿಕರ ಸಂಖ್ಯೆ ಇದೀಗ ಸುಮಾರು 40ಕ್ಕೆ ಸೀಮಿತಗೊಂಡಿದೆ ಎಂಬ ಚೀನಾದ ಹೇಳಿಕೆಯನ್ನು ನಿರಾಕರಿಸಿರುವ ಸರಕಾರ, ಅಲ್ಲಿ ಉಪಸ್ಥಿತರಿರುವ ಸೈನಿಕರ ಸಂಖ್ಯೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ತಿಳಿಸಿದೆ.

  ಡೋಕಾ ಲಾ ದಲ್ಲಿ ರಸ್ತೆ ನಿರ್ಮಿಸುವ ಕುರಿತು ಚೀನಾದ ಅಧಿಕಾರಿಗಳು ಭಾರತೀಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಎಂದು ದಿಲ್ಲಿಯಲ್ಲಿ ಚೀನಾದ ರಾಯಭಾರ ಕಚೇರಿ ಬಿಡುಗಡೆಗೊಳಿಸಿರುವ 15 ಪುಟಗಳ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಆದರೆ ಚೀನಾದ ಸೇನೆ ಯಾವುದೇ ಸೂಚನೆ ನೀಡದೆ ಜೂನ್ 16ರಂದು ಏಕಾಏಕಿ ರಸ್ತೆ ನಿರ್ಮಿಸಲು ಮುಂದಾಗಿದೆ ಎಂಬುದು ಭಾರತೀಯ ಅಧಿಕಾರಿಗಳ ಹೇಳಿಕೆಯಾಗಿದೆ).

    ಅಲ್ಲದೆ ಭಾರತೀಯ ಸೇನೆ ಸಿಕ್ಕಿಂನ ಡೋಕಾ ಲಾ ದಲ್ಲಿ ಗಡಿ ಉಲ್ಲಂಘಿಸಿದ್ದು ಭಾರತ ತಕ್ಷಣ ತನ್ನ ಸೇನೆಯನ್ನು ಹಿಂಪಡೆಯಬೇಕು ಮತ್ತು ಗಡಿ ಉಲ್ಲಂಘನೆ ಪ್ರಕರಣದ ಕುರಿತು ತನಿಖೆ ನಡೆಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.ಜೂನ್ 16ರಂದು ಚೀನಾದ ಪಡೆಗಳು ಡೋಂಗ್ ಲಾಂಗ್ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಕಾರ್ಯ ಆರಂಭಿಸಿದ್ದು ಜೂನ್ 18ರಂದು 270ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಭಾರತೀಯ ಯೋಧರು ಎರಡು ಬುಲ್ಡೋಝರ್ ಸಹಿತ ಸಿಕ್ಕಿಂ ಭಾಗದ ಡೋಕಾ ಲಾ ದಲ್ಲಿ ಗಡಿ ಉಲ್ಲಂಘಿಸಿ, ಚೀನಾದ ಭೂಪ್ರದೇಶದೊಳಗೆ ಸುಮಾರು 100 ಮೀಟರ್‌ನಷ್ಟು ಮುಂದೊತ್ತಿ ಬಂದಿವೆ. ಚೀನಾದ ರಸ್ತೆ ನಿರ್ಮಾಣ ಕಾಮಗಾರಿಗೆ ಭಾರತೀಯ ಯೋಧರು ಅಡ್ಡಿಪಡಿಸಿದ ಕಾರಣ ಈ ಪ್ರದೇಶದಲ್ಲಿ ಉದ್ವಿಗ್ನತೆ ನೆಲೆಸಿದೆ. ಅಲ್ಲದೆ, ಒಂದು ಹಂತದಲ್ಲಿ ಸುಮಾರು 400 ಭಾರತೀಯ ಯೋಧರು ಗಡಿ ಉಲ್ಲಂಘಿಸಿ 180 ಮೀಟರ್‌ನಷ್ಟು ಚೀನಾದ ಭೂಪ್ರದೇಶದೊಳಗೆ ಸಾಗಿ ಬಂದು ಅಲ್ಲಿ ಮೂರು ಟೆಂಟ್‌ಗಳನ್ನು ನಿರ್ಮಿಸಿದ್ದರು. ಜುಲೈ ಅಂತ್ಯದ ವೇಳೆ ಇಲ್ಲಿ ಇನ್ನೂ ಸುಮಾರು 40ರಷ್ಟು ಭಾರತೀಯ ಯೋಧರು ಹಾಗೂ ಒಂದು ಬುಲ್ಡೋಝರ್ ಇದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

   ಈ ಕುರಿತು ಸುದ್ದಿ ಸಂಸ್ಥೆಯ ಜೊತೆ ಮಾತನಾಡಿದ ಭಾರತದ ಅಧಿಕಾರಿಗಳು, ಡೋಕಾ ಲಾ ದಲ್ಲಿ ಈಗ ಸುಮಾರು 350 ಭಾರತೀಯ ಯೋಧರು ಹಾಗೂ 300ರಷ್ಟು ಚೀನಾ ಯೋಧರಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣ ಹಾಗೂ ಇದಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಭಾರತದ ನಿಲುವನ್ನು ನಮ್ಮ ಜೂನ್ 30ರ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಚೀನಾದ ಜೊತೆಗಿನ ನಮ್ಮ ದ್ವಿಪಕ್ಷೀಯ ಸಂಬಂಧ ಸುಗಮವಾಗಿ ಮುಂದುವರಿಯಲು ಭಾರತ-ಚೀನಾ ಗಡಿಪ್ರದೇಶದಲ್ಲಿ ನೆಮ್ಮದಿ ಮತ್ತು ಶಾಂತಿಯ ಪರಿಸ್ಥಿತಿ ನೆಲೆಸುವ ಅಗತ್ಯವಿದೆ ಎಂಬುದು ಭಾರತದ ಅಭಿಪ್ರಾಯವಾಗಿದೆ ಎಂದು ವಿದೇಶ ವ್ಯವಹಾರ ಇಲಾಖೆ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X