Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನಿವಾಸಿ ಭಾರತೀಯರಿಗೆ ‘ಪ್ರಾಕ್ಸಿ’...

ಅನಿವಾಸಿ ಭಾರತೀಯರಿಗೆ ‘ಪ್ರಾಕ್ಸಿ’ ಮತದಾನದ ಹಕ್ಕು ?

ವಾರ್ತಾಭಾರತಿವಾರ್ತಾಭಾರತಿ3 Aug 2017 8:45 PM IST
share
ಅನಿವಾಸಿ ಭಾರತೀಯರಿಗೆ ‘ಪ್ರಾಕ್ಸಿ’ ಮತದಾನದ ಹಕ್ಕು ?

ಹೊಸದಿಲ್ಲಿ, ಆ.3: ಅನಿವಾಸಿ ಭಾರತೀಯರಿಗೆ ‘ಪ್ರಾಕ್ಸಿ’ (ಪ್ರತಿನಿಧಿ) ಮತದಾನದ ಹಕ್ಕು ನೀಡಲು ಅನುಕೂಲವಾಗುವಂತೆ ಚುನಾವಣಾ ನಿಯಮದಲ್ಲಿ ಬದಲಾವಣೆ ತರುವ ಪ್ರಸ್ತಾವನೆಗೆ ಸರಕಾರ ಅನುಮೋದನೆ ನೀಡಿದೆ. ಈ ಪ್ರಸ್ತಾವಕ್ಕೆ ಸಂಸತ್ತಿನಲ್ಲಿ ಅಂಗೀಕಾರ ದೊರೆಯಬೇಕಿದೆ.

  ಈ ಹಕ್ಕು ಈಗ ಸೇನಾ ಸಿಬ್ಬಂದಿಗಳಿಗೆ ಇದೆ. ಇದರಂತೆ ಸೇನಾ ಸಿಬ್ಬಂದಿಗಳು ತಮ್ಮ ಬದಲು ಮತದಾನ ಮಾಡಲು ಸಂಬಂಧಿಕರನ್ನು ಖಾಯಂ ‘ಪ್ರತಿನಿಧಿ’ಗಳನ್ನಾಗಿ ಹೆಸರಿಸಲು ಅವಕಾಶವಿದೆ. ಇದೇ ರೀತಿ ಎನ್ನಾರೈಗಳಿಗೂ ಪ್ರಾಕ್ಸಿ ಮತದಾನದ ಅವಕಾಶ ನೀಡಲು ಕೇಂದ್ರ ಸರಕಾರ ಚಿಂತಿಸುತ್ತಿದೆ. ಆದರೆ ಇಲ್ಲಿರುವ ಷರತ್ತು ಎಂದರೆ- ಎಲ್ಲಾ ಚುನಾವಣೆಗಳಿಗೂ ಖಾಯಂ ಪ್ರತಿನಿಧಿಗಳನ್ನು ನೇಮಿಸಲು ಎನ್ನಾರೈಗಳಿಗೆ ಅವಕಾಶವಿರುವುದಿಲ್ಲ.

 ಪ್ರತಿಯೊಂದು ಚುನಾವಣೆ ಸಂದರ್ಭದಲ್ಲೂ ಎನ್ನಾರೈ ಮತದಾರರು ತಮ್ಮ ‘ಪ್ರತಿನಿಧಿ’ಯನ್ನು ಹೆಸರಿಸಬಹುದು. ಈ ಕುರಿತು ಸೂಕ್ತ ನೀತಿ ನಿಯಮಗಳನ್ನು ರಚಿಸಲಾಗುವುದು ಎಂದು ಸರಕಾರ ತಿಳಿಸಿದೆ. ಪ್ರಾಕ್ಸಿ ಮತದಾನದ ಅವಕಾಶದಿಂದ ವಿದೇಶದಲ್ಲಿ ಉದ್ಯೋಗ ನಿಮಿತ್ತ ನೆಲೆಸಿರುವ ಲಕ್ಷಾಂತರ ಮಂದಿ ಭಾರತೀಯರಿಗೆ (ಇವರಲ್ಲಿ ಕೇರಳೀಯರು ಬಹು ಸಂಖ್ಯೆಯಲ್ಲಿದ್ದಾರೆ) ತಮ್ಮ ಹಕ್ಕು ಚಲಾಯಿಸಲು ಅವಕಾಶ ನೀಡಿದಂತಾಗುತ್ತದೆ. ಈ ಮೊದಲು ಎನ್ನಾರೈಗಳಿಗೆ ಅಂಚೆ ಮತದಾನ ಹಕ್ಕು ನೀಡಲು ಚಿಂತಿಸಲಾಗಿತ್ತು. ಆದರೆ ವಿಶ್ವದಾದ್ಯಂತ ಇರುವ ಭಾರತೀಯರಿಗೆ ಈ ಪ್ರಕ್ರಿಯೆ ಅನ್ವಯಿಸಲು ಕಷ್ಟ ಎಂದರಿತ ಸರಕಾರ ಇದೀಗ ಪ್ರಾಕ್ಸಿ ಮತದಾನದ ಅವಕಾಶಕ್ಕೆ ನಿರ್ಧರಿಸಿದೆ. ಒಂದು ವರದಿಯ ಪ್ರಕಾರ ಸುಮಾರು 1 ಕೋಟಿ ಮಂದಿ ಭಾರತೀಯರು ವಿದೇಶದಲ್ಲಿ ನೆಲೆಸಿದ್ದು ಇವರಲ್ಲಿ ಸುಮಾರು 60 ಲಕ್ಷ ಮಂದಿ ಮತಹಾಕುವ ಹಕ್ಕು ಹೊಂದಿದ್ದಾರೆ.

  ಬಹುತೇಕ ಅನಿವಾಸಿ ಭಾರತೀಯರು ಬಿಜೆಪಿ ಪರ ಒಲವು ಹೊಂದಿದ್ದಾರೆ ಎನ್ನಲಾಗಿದ್ದು ಎನ್ನಾರೈಗಳಿಗೆ ಪ್ರಾಕ್ಸಿ ಮತದಾನದ ಅವಕಾಶ ಬಿಜೆಪಿಗೆ ಅನುಕೂಲವಾಗಲಿದೆ ಎಂದೂ ಹೇಳಲಾಗುತ್ತಿದೆ. ಆದರೆ ಎನ್ನಾರೈಗಳಿಗೆ ಪ್ರಾಕ್ಸಿ ಮತದಾನದ ಅವಕಾಶದ ಬಗ್ಗೆ ಕಾಂಗ್ರೆಸ್, ಬಿಎಸ್ಪಿ, ಸಿಪಿಐ ಪಕ್ಷಗಳು ವಿರೋಧ ಸೂಚಿಸಿವೆ. ಪ್ರಾಕ್ಸಿ ಮತದಾರರು ನೈಜ ಮತದಾರರ ಆಶಯದಂತೆಯೇ ಮತ ಚಲಾಯಿಸುತ್ತಾರೆ ಎಂಬುದಕ್ಕೆ ಖಾತರಿ ಏನಿದೆ. ಪ್ರಾಕ್ಸಿ ಮತದಾನವು ‘ಗುಪ್ತ ಮತದಾನ’ ಪ್ರಕ್ರಿಯೆಯ ಆಶಯಕ್ಕೆ ವಿರುದ್ಧವಾಗಿದೆ ಎಂಬುದು ಈ ಪಕ್ಷಗಳ ವಾದವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X