Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಣವ್ ದಾ... ನೀವು ನನಗೆ ತಂದೆ ಸಮಾನ:...

ಪ್ರಣವ್ ದಾ... ನೀವು ನನಗೆ ತಂದೆ ಸಮಾನ: ಮಾಜಿ ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ ಮೋದಿ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ3 Aug 2017 11:01 PM IST
share
ಪ್ರಣವ್ ದಾ... ನೀವು ನನಗೆ ತಂದೆ ಸಮಾನ: ಮಾಜಿ ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ ಮೋದಿ ಶ್ಲಾಘನೆ

ಹೊಸದಿಲ್ಲಿ, ಆ.3: ಪ್ರಣಬ್ ದಾ.. ನಮ್ಮ ರಾಜಕೀಯ ಪ್ರಯಾಣ ಪ್ರತ್ಯೇಕ ರಾಜಕೀಯ ಪಕ್ಷಗಳಿಂದ ಆರಂಭಗೊಂಡಿದೆ. ನಮ್ಮ ಸಿದ್ಧಾಂತಗಳು ಪ್ರತ್ಯೇಕವಾಗಿವೆ. ಆದರೂ ನಿಮ್ಮ ವಿವೇಕ ಮತ್ತು ಮೇಧಾವಿತನದ ಮೇಳೈಸುವಿಕೆಯಿಂದ ನಾವು ಜೊತೆಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು. ನೀವು ಎಂದಿಗೂ ನನಗೆ ತಂದೆ ಸಮಾನರು ಹಾಗೂ ಮಾರ್ಗದರ್ಶಿಯಾಗಿದ್ದೀರಿ...

ಇದು ರಾಷ್ಟ್ರಪತಿಯಾಗಿ ಪ್ರಣಬ್ ಮುಖರ್ಜಿ ಅಂತಿಮ ದಿನದ ಕಾರ್ಯನಿರ್ವಹಿಸಿದ ಸಂದರ್ಭ ಪ್ರಧಾನಿ ಮೋದಿ ಕಳುಹಿಸಿಕೊಟ್ಟ ಪತ್ರದ ಸಾರಾಂಶ. ವಿಭಿನ್ನ ರಾಜಕೀಯ ಸಿದ್ಧಾಂತದ ಹಿನ್ನೆಲೆಯುಳ್ಳ ಇಬ್ಬರು ಮುಖಂಡರು ಹೊಂದಿದ್ದ ಗಾಢವಾದ ಅನುಬಂಧವನ್ನು ಈ ಪತ್ರ ಬಿಂಬಿಸುತ್ತದೆ. ಪತ್ರವನ್ನು ಪ್ರಣವ್ ಮುಖರ್ಜಿ ಇಂದು(ಗುರುವಾರ) ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

  ಮೂರು ವರ್ಷದ ಹಿಂದೆ ದಿಲ್ಲಿಗೆ ಬಂದಾಗ ನಾನು ಹೊರಗಿನವನಾಗಿದ್ದೆ. ನನ್ನೆದುರು ಇದ್ದ ಕೆಲಸಗಳು ಸವಾಲಿನದ್ದಾಗಿತ್ತು. ಈ ಸಂದರ್ಭದಲ್ಲಿ ತಂದೆಯ ಸ್ಥಾನದಲ್ಲಿ ನಿಂತು ನೀವು ನನಗೆ ಮಾರ್ಗದರ್ಶನ ನೀಡಿದಿರಿ. ನಿಮ್ಮ ವಿವೇಕ, ಮಾರ್ಗದರ್ಶನ ಮತ್ತು ವಾತ್ಸಲ್ಯದ ಭಾವನೆ ನನ್ನಲ್ಲಿ ಆತ್ಮವಿಶ್ವಾಸ ಮತ್ತು ಶಕ್ತಿ ತುಂಬಿದೆ ಎಂದು ಮೋದಿ ಪತ್ರದಲ್ಲಿ ತಿಳಿಸಿದ್ದಾರೆ.

  ವಿವಿಧ ವಿಷಯಗಳಲ್ಲಿ ಪ್ರಣವ್ ಮುಖರ್ಜಿ ಹೊಂದಿದ ಆಳವಾದ ಪರಿಜ್ಞಾನ ವೈಯಕ್ತಿಕವಾಗಿ ತನಗೆ ಮತ್ತು ಸರಕಾರಕ್ಕೆ ನೆರವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದ ಮೋದಿ, ತಾನು ಪಡೆದಿದ್ದನ್ನು ಸಮಾಜಕ್ಕೆ ಸ್ವಾರ್ಥರಹಿತವಾಗಿ ಮರಳಿಸಲು ರಾಜಕೀಯ ಕ್ಷೇತ್ರವು ಪ್ರಣವ್ ಮುಖರ್ಜಿಯವರಿಗೆ ಒಂದು ಸರಳ ಸಾಧನವಾಗಿತ್ತು ಎಂದು ಹೇಳುವ ಮೂಲಕ ಅವರಿಗೆ ಗೌರವ ಸಲ್ಲಿಸಿದ್ದಾರೆ.

  ಕರ್ತವ್ಯದ ಸಂದರ್ಭ ಪ್ರವಾಸದಲ್ಲಿದ್ದಾಗ ‘ನಿಮ್ಮ ಆರೋಗ್ಯದ ಕಡೆಗೆ ಗಮನ ನೀಡುವಿರೆಂದು ಆಶಿಸುತ್ತೇನೆ’ ಎಂದು ನಿಮ್ಮಿಂದ ಬರುವ ಒಂದು ದೂರವಾಣಿ ಕರೆ ನನ್ನಲ್ಲಿ ಹೊಸ ಉತ್ಸಾಹ, ಹುರುಪನ್ನು ತುಂಬಿಸುತ್ತಿತ್ತು ಎಂದು ಮೋದಿ ಪತ್ರದಲ್ಲಿ ಬರೆದಿದ್ದಾರೆ.

     ನಿಮ್ಮ ನಿಷ್ಪಕ್ಷಪಾತ ಗುಣ ನಿಮ್ಮನ್ನು ಸಂವಿಧಾನದ ಉನ್ನತ ಹುದ್ದೆಯತ್ತ ಸಾಗಿಸಿತು . ನಿಮ್ಮ ರಾಜಕೀಯ ಪಯಣದ ಹಾಗೂ ರಾಷ್ಟ್ರಪತಿ ಅವಧಿಯಲ್ಲಿ ನೀವು ರಾಷ್ಟ್ರದ ಅಭ್ಯುದಯಕ್ಕೆ ಪ್ರಥಮ ಆದ್ಯತೆ ನೀಡಿದ್ದೀರಿ. ಓರ್ವ ವಿನಯಶೀಲ ಸಾರ್ವಜನಿಕ ಸೇವಕರಾದ ರಾಷ್ಟ್ರಪತಿ ಮತ್ತು ಅಸಾಧಾರಣ ನಾಯಕನಾಗಿ ಭಾರತ ನಿಮ್ಮನ್ನು ಎಂದಿಗೂ ಸ್ಮರಿಸಿಕೊಳ್ಳುತ್ತದೆ ಎಂದು ಪ್ರಧಾನಿ ಪತ್ರದಲ್ಲಿ ಶ್ಲಾಘಿಸಿದ್ದಾರೆ. ಎಲ್ಲರನ್ನೂ ಜೊತೆಗೆ ಕರೆದೊಯ್ಯಬೇಕು ಎನ್ನುವ ನಿಮ್ಮ ಪ್ರಜಾಪ್ರಭುತ್ವದ ದೂರದೃಷ್ಠಿ ತನಗೆ ಹಾಗೂ ಇತರರಿಗೆ ನಿರಂತರವಾಗಿ ಶಕ್ತಿ ತುಂಬಲಿದೆ ಎಂದು ಮೋದಿ ತಿಳಿಸಿದ್ದಾರೆ.

  ಮೋದಿ ಪತ್ರದಲ್ಲಿ ಬರೆದ ಈ ಶಬ್ದಗಳು ತನ್ನ ಹೃದಯವನ್ನು ಸ್ಪರ್ಶಿಸಿವೆ ಎಂದು ಪ್ರಣವ್ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X