Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ದೇಶದ ಹೆಸರನ್ನೂ ಬದಲಾಯಿಸಿಬಿಡಿ" :...

"ದೇಶದ ಹೆಸರನ್ನೂ ಬದಲಾಯಿಸಿಬಿಡಿ" : ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದ ವಿಪಕ್ಷಗಳು

ವಾರ್ತಾಭಾರತಿವಾರ್ತಾಭಾರತಿ4 Aug 2017 5:35 PM IST
share
ದೇಶದ ಹೆಸರನ್ನೂ ಬದಲಾಯಿಸಿಬಿಡಿ : ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದ ವಿಪಕ್ಷಗಳು

ಹೊಸದಿಲ್ಲಿ,ಆ.4 :  ಉತ್ತರ ಪ್ರದೇಶದ ಐತಿಹಾಸಿಕ ಹಾಗೂ ದೇಶದ ಅತ್ಯಂತ ಹಳೆಯ ರೈಲು ನಿಲ್ದಾಣಗಳಲ್ಲೊಂದಾದ ಮುಘಲ್ ಸರೈ ರೈಲ್ವೆ ನಿಲ್ದಾಣಕ್ಕೆ ಬಿಜೆಪಿ ನೇತಾರ ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರನ್ನಿಡಲು ನಡೆಯುತ್ತಿರುವ ಪ್ರಯತ್ನಗಳನ್ನು ವಿಪಕ್ಷಗಳು ಟೀಕಿಸಿದ್ದು ದೇಶದ ನಕ್ಷೆಯನ್ನೇ ಬದಲಾಯಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿವೆ.

ಈ ರೈಲು ನಿಲ್ದಾಣಕ್ಕೆ ಉಪಾಧ್ಯಾಯ ಅವರ ಹೆಸರನ್ನಿಡಲು   ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಡಿದ ಮನವಿಗೆ ಕೇಂದ್ರ ಸರಕಾರ ಇತ್ತೀಚೆಗೆ ಒಪ್ಪಿತ್ತು. ಆದರೆ ಈ ವಿಚಾರದಲ್ಲಿ ಸರಕಾರ ರಾಜ್ಯಸಭೆಯಲ್ಲಿ ತೀವ್ರ ಆಕ್ಷೇಪ ಎದುರಿಸುವಂತಾಗಿದೆ.  ಸಮಾಜವಾದಿ ಪಕ್ಷದ ಸದಸ್ಯ ನರೇಶ್ ಅಗ್ರವಾಲ್ ರೈಲು ನಿಲ್ದಾಣದ ಮರುನಾಮಕರಣ ಮಾಡುವುದನ್ನು ಬಲವಾಗಿ ವಿರೋಧಿಸಿದರು. ``ಸರಕಾರ ಉತ್ತರ ಪ್ರದೇಶದ ನಕ್ಷೆಯನ್ನೂ ಬದಲಾಯಿಸಲು ಹೊರಟಿದೆ. ಈ ನಿಲ್ದಾಣ ಬಹಳ ಪ್ರಾಚೀನ ನಿಲ್ದಾಣವಾಗಿದೆ. ಮುಂದೆ ಅವರು ನವದಿಲ್ಲಿಯ ಹೆಸರನ್ನೂ ಬದಲಾಯಿಸುತ್ತಾರೆ,'' ಎಂದು ಆಕ್ರೋಶದಿಂದ ನುಡಿದರು.

ಸಮಾಜವಾದಿ ಪಕ್ಷದ ಸದಸ್ಯರು ಸದನದ ಮಧ್ಯಭಾಗಕ್ಕೆ ಬಂದು ಘೋಷಣೆಗಳನ್ನು ಕೂಗಿದ ಪರಿಣಾಮ  ಅಧಿವೇಶನವನ್ನು ಮುಂದೂಡಬೇಕಾಯಿತು. ಮಾಯಾವತಿ ಅವರ ಬಿಎಸ್‍ಪಿ ಕೂಡ ಈ ನಿಲ್ದಾಣದ ಹೆಸರು ಬದಲಾವಣೆಗೆ ಅಸಮ್ಮತಿ ಸೂಚಿಸಿತು.

ಈಸ್ಟ್ ಇಂಡಿಯಾ ಕಂಪೆನಿ ಹೌರಾದಿಂದ ದಿಲ್ಲಿಗೆ ರೈಲು ಸಂಪರ್ಕ ಒದಗಿಸಿದ ಸಂದರ್ಭ ಮುಘಲ್ ಸರೈ ರೈಲು ನಿಲ್ದಾಣ 1862ರಲ್ಲಿ ಸ್ಥಾಪಿಸಲ್ಪಟ್ಟಿತ್ತು.

ವಿಪಕ್ಷಗಳ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ``ಅವರಿಗೆ ಮುಘಲರ ಹೆಸರಿನ ನಿಲ್ದಾಣಗಳು ಬೇಕು ಆದರೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರಿನ ನಿಲ್ದಾಣವಲ್ಲ,'' ಎಂದರು. ಮುಂಬೈಯ ಖ್ಯಾತ ವಿಕ್ಟೋರಿಯಾ ಟರ್ಮಿನಸ್ ನಿಲ್ದಾಣದ ಹೆಸರನ್ನೂ ಛತ್ರಪತಿ ಶಿವಾಜಿ ಟರ್ಮಿನಲ್ ಎಂದು ಬದಲಾಯಿಸಲಾಗಿರುವುದನ್ನು ಅವರು ನೆನಪಿಸಿದರು.

ಇದರಿಂದ ಸಿಟ್ಟುಗೊಂಡ ವಿಪಕ್ಷ ಸದಸ್ಯರು ``ಹಾಗಾದರೆ ದೇಶದ ಹೆಸರನ್ನೇ ಬದಲಾಯಿಸಿ ಬಿಡಿ. ದೇಶಕ್ಕೆ ಅವರ (ಉಪಾಧ್ಯಾಯ) ಕೊಡುಗೆಯೇನು ?'' ಎಂದು ಪ್ರಶ್ನಿಸಿದರು.

ಇದಕ್ಕೆ ತಿರುಗೇಟು ನೀಡಿದ ನಖ್ವಿ ``ಇತಿಹಾಸ ಓದಿ'' ಎಂದು ಹೇಳಿದರಲ್ಲದೆ ದೀನ್ ದಯಾಳ್ ಉಪಾದ್ಯಾಯರನ್ನು  ಮಹೋನ್ನತ ಚಿಂತಕ ಎಂದು ಬಣ್ಣಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X