Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾಲೂಕು ಪತ್ರಕರ್ತರ ಸಂಘದಿಂದ ಕಡೂರು...

ತಾಲೂಕು ಪತ್ರಕರ್ತರ ಸಂಘದಿಂದ ಕಡೂರು ಪುರಸಭೆಯಲ್ಲಿ ಸಂವಾದ ಕಾರ್ಯಕ್ರಮ

ಜನರಿಂದ ಹರಿದು ಬಂದ ಪಟ್ಟಣದ ಜ್ವಲಂತ ಸಮಸ್ಯೆಗಳ ಮಹಾಪೂರ

ವಾರ್ತಾಭಾರತಿವಾರ್ತಾಭಾರತಿ4 Aug 2017 6:18 PM IST
share
ತಾಲೂಕು ಪತ್ರಕರ್ತರ ಸಂಘದಿಂದ ಕಡೂರು ಪುರಸಭೆಯಲ್ಲಿ ಸಂವಾದ ಕಾರ್ಯಕ್ರಮ

ಕಡೂರು, ಆ. 4: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ತಾಲೂಕು ಪತ್ರಕರ್ತರ ಸಂಘ ಶುಕ್ರವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಕಡೂರು ಪಟ್ಟಣದ ಜ್ವಲಂತ ಸಮಸ್ಯೆಗಳ ಮಹಾಪೂರವೇ ಹರಿದು ಬಂದವು.

ಪಟ್ಟಣದ ಜನತೆ ಭದ್ರಾ ಕುಡಿಯುವ ನೀರಿನ ಯೋಜನೆ ಇನ್ನೂ ಅನುಷ್ಟಾನವಾಗಿಲ್ಲ. ಕೆ.ಎಲ್.ವಿ. ವೃತ್ತಕ್ಕೆ ಕೆ.ಎಂ.ಕೆ. ವೃತ್ತ ಎಂದು ನಾಮಕರಣ ಮಾಡಿರುವ ಬಗ್ಗೆ ಟ್ರೇಡ್ ಲೈಸೆನ್ಸ್ ಪಡೆಯದೆ ವ್ಯವಹಾರ ನಡೆಸುತ್ತಿರುವ ಬಗ್ಗೆ, ಕಂದಾಯ ಬಾಕಿ ವಸೂಲಾಗಿಲ್ಲ. ಪಟ್ಟಣ ಬಯಲು ಶೌಚ ಮುಕ್ತವಾಗಿಲ್ಲ ಹೀಗೆ ಹತ್ತು ಹಲವು ಪ್ರಶ್ನೆಗಳ ಸುರಿಮಳೆಯಾಯಿತು.

ಪುರಸಭಾ ಮಾಜಿ ಅಧ್ಯಕ್ಷ ಭಂಢಾರಿ ಶ್ರೀನಿವಾಸ್ ಮಾತನಾಡಿ, ಭದ್ರಾ ಕುಡಿಯುವ ನೀರಿನ ಯೋಜನೆಯೊಂದು ಅನುಷ್ಟಾನವಾಗದಿದ್ದರೆ ಕುಡಿಯುವ ನೀರಿಗಾಗಿ ಏನು ಮಾಡಬೇಕಾಗಿತ್ತು ಎಂಬುದನ್ನು ಊಹಿಸಲು ಅಸಾದ್ಯ. ಆದರೆ ಕಡೂರು ಪಟ್ಟಣದ ಹಲವೆಡೆ ಈ ಅಮೂಲ್ಯವಾದ ನೀರನ್ನು ಪೋಲು ಮಾಡಲಾಗುತ್ತಿದೆ. ಇದೇ ನೀರಿನಿಂದ 2/3 ಹಳ್ಳಿಗಳ ನೀರಿನ ಸಮಸ್ಯೆ ಬಗೆಹರಿಸಬಹುದು. ಈ ನೀರು ಪೋಲಾಗುವುದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.

ಪುರಸಭೆಯ ಆರೋಗ್ಯಾಧಿಕಾರಿ ಹರೀಶ್ ಮಾತನಾಡಿ, ಭದ್ರಾ ಯೋಜನೆಯ ಅನುಷ್ಟಾನವಾಗಿದ್ದು, ಯೋಜನೆ ಇನ್ನೂ ಪುರಸಭೆಗೆ ಹಸ್ತಾಂತರವಾಗಿಲ್ಲ. ಇನ್ನು ಕುಡಿಯುವ ನೀರು ಅನಗತ್ಯವಾಗಿ ವ್ಯತ್ಯವಾಗುವುದನ್ನು ತಪ್ಪಿಸಲು ಯೋಜನೆಯ ಪೂರ್ಣ ಮಾರ್ಗದಲ್ಲಿ 8 ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.
 
ಕೆ.ಟಿ. ಲವಕುಮಾರ್ ಮಾತನಾಡಿ, ಕಡೂರು ಪಟ್ಟಣದಲ್ಲಿ ಬಹು ಹಿಂದಿನಿಂದಲೂ ಇದ್ದ ಕೆ.ಎಲ್. ವಿಶ್ವನಾಥ ವೃತ್ತಕ್ಕೆ ಏಕಾಏಕಿ ಕೆ.ಎಂ.ಕೆ. ವೃತ್ತ ಎಂದು ಹೆಸರಿಡಲಾಗಿದ್ದು. ಇದಕ್ಕೆ ಸಂಬಂಧಿಸಿದವರ ಅನುಮತಿ ಪಡೆಯಲಾಗಿಲ್ಲ. ಈ ಸಮಸ್ಯೆಯನ್ನು ಸರಿಪಡಿಸಿ ಎಂದು ಮನವಿ ಮಾಡಿದರು.  ಹಿರಿಯ ಸಮಾಜ ಸೇವಕ ಜಿ.ವಿ. ಮಂಜುನಾಥಸ್ವಾಮಿ ಮಾತನಾಡಿ ಕಡೂರು ಪಟ್ಟಣ ಬಯಲು ಶೌಚ ಮುಕ್ತವಾಗಿಲ್ಲ. ಅದಕ್ಕೇನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರೆ, ಕೋಟೆ ನಿವಾಸಿ ಸುರೇಶ್ ಅವರು ಕಡೂರು ಪಟ್ಟಣದಲ್ಲಿ 9 ಸ್ಮಶಾನಗಳು ಒತ್ತುವರಿಯಾಗಿದ್ದು ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.

ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಎ.ಜೆ.ಪ್ರಕಾಶ್ ಮೂರ್ತಿ ವಹಿಸಿದ್ದರು.  ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಎಂ.ರಾಜಶೇಖರ್, ಕಾರ್ಯದರ್ಶಿ ಬ್ಯಾಲದಾಳು ಕುಮಾರ್, ರಾಜ್ಯ ಸಮಿತಿ ಸದಸ್ಯ ತಿಪ್ಪೇರುದ್ರಪ್ಪ, ಪತ್ರಕರ್ತರಾದ ಹಿರೇನಲ್ಲೂರು ಶಿವು, ಕೆ.ಎನ್.ಕೃಷ್ಣಮೂರ್ತಿ, ಎಂ.ಎನ್.ಜಗದೀಶ್, ಬಾಲುಮಚ್ಚೇರಿ, ಬಾಲಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X