Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಗಾಂಧಿ ಕಾರಿನ ಮೇಲೆ ದಾಳಿ

ರಾಹುಲ್ ಗಾಂಧಿ ಕಾರಿನ ಮೇಲೆ ದಾಳಿ

ಬಿಜೆಪಿ ಗೂಂಡಾಗಳಿಂದ ಕೃತ್ಯ: ಕಾಂಗ್ರೆಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Aug 2017 8:10 PM IST
share
ರಾಹುಲ್ ಗಾಂಧಿ ಕಾರಿನ ಮೇಲೆ ದಾಳಿ

ಅಹ್ಮದಾಬಾದ್, ಆ. 4: ಉತ್ತರ ಗುಜರಾತ್‌ನ ನೆರೆಪೀಡಿತ ಬನಸ್ಕಂತ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿ ಹಿಂದಿರುಗುತ್ತಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಆದರೆ, ರಾಹುಲ್ ಗಾಂಧಿ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

ರಾಹುಲ್ ಗಾಂಧಿ ಉತ್ತರ ಗುಜರಾತ್‌ನ ನೆರಪೀಡಿತ ಪ್ರದೇಶಗಳ ಒಂದು ದಿನದ ಭೇಟಿಗೆ ಶುಕ್ರವಾರ ಆಗಮಿಸಿದ್ದರು. ಅವರು ಬನಸ್ಕಾಂತ ಜಿಲ್ಲೆಯ ಧಾನೇರಾದ ಲಾಲ್‌ಚೌಕ್‌ಗೆ ಆಗಮಿಸಿದರು. ಆದರೆ, ಅಲ್ಲಿ ಜಮಾಯಿಸಿದ ಜನರು ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದರು ಹಾಗೂ ಪ್ರಧಾನಿ ಮೋದಿ ಪರವಾಗಿ ಘೋಷಣೆಗಳನ್ನು ಕೂಗಿದರು. ಆದರೂ ರಾಹುಲ್ ಗಾಂಧಿ ಲಾಲ್‌ಚೌಕ್ ದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಆದರೆ, ಸಾರ್ವಜನಿಕರು ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭ ಪೊಲೀಸರು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದರು.

 ಅಲ್ಲಿಂದ ರಾಹುಲ್ ಗಾಂಧಿ ಅವರು ತೆರಳಿದಾಗ ಅವರ ಕಾರು ಹಾಗೂ ಬೆಂಗಾವಲು ವಾಹನದ ಮೇಲೆ ಸಾರ್ವಜನಿಕರು ನೀರಿನ ಬಾಟಲಿಗಳನ್ನು ಎಸೆದರು. ಅಲ್ಲಿಂದ ಮುಂದುವರಿದು ಅವರು ಧಾನೇರಾ ಹೆಲಿಪ್ಯಾಡ್‌ನತ್ತ ಕಾರಿನಲ್ಲಿ ತೆರಳುತ್ತಿದ್ದಾಗ ಸಾರ್ವಜನಿಕರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಅವರ ಕಾರಿನ ಕಿಟಕಿಯ ಗಾಜು ಪುಡಿಯಾಗಿದೆ.

 ಧಾನೇರಾದಲ್ಲಿರುವ ಹೆಲಿಪ್ಯಾಡ್‌ಗೆ ರಾಹುಲ್ ಗಾಂಧಿ ಅವರು ಸಂಚರಿಸುತ್ತಿದ್ದಾಗ ಅವರ ಕಾರಿನ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದರು. ಇದರಿಂದ ಅವರ ಕಾರಿನ ಗಾಜುಗಳ ಪುಡಿಯಾಗಿವೆ. ಈ ಘಟನೆಗೆ ಸಂಬಂಧಿಸಿ ನಾವು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಬಾನಸ್ಕಾಂತನ ಪೊಲೀಸ್ ಅಧೀಕ್ಷಕ ನೀರಜ್ ಬಡ್ಗುಜಾರ್ ತಿಳಿಸಿದ್ದಾರೆ.

ಬಿಜಿಪಿ ಗೂಂಡಾಗಳ ಕೃತ್ಯ: ಸಿಂಘ್ವಿ

ರಾಹುಲ್ ಗಾಂಧಿ ಅವರ ಮೇಲೆ ನಡೆದ ದಾಳಿಯ ಹಿಂದೆ ಬಿಜೆಪಿಯ ಗೂಂಡಾಗಳು ಇದ್ದಾರೆ. ದಾಳಿಯಿಂದ ಹಲವು ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ. ಕಿಟಕಿ ಗಾಜುಗಳು ಪುಡಿಯಾಗಿವೆ. ಭದ್ರತಾ ಸಿಬಂದಿಗಳಿಗೆ ಗಾಯಗಳಾಗಿವೆ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ. ಗುಜರಾತ್, ಲಾಲ್‌ಚೌಕ್, ಧಾನೇರಾ, ಬನಸ್ಕಾಂತ್‌ನಲ್ಲಿ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ. ಇದು ಅಸಹ್ಯ ಹಾಗೂ ಅವಮಾನಕರ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸೂರಜ್‌ವಾಲಾ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಗೂಂಡಾಗಳ ಸಂಘಟಿತ ದಾಳಿಯಿಂದ ರಾಹುಲ್ ಗಾಂಧಿ ಅವರ ಕಾರಿನ ಕಿಟಕಿ ಗಾಜು ಪುಡಿಯಾಗಿದೆ. ಭದ್ರತಾ ಸಿಬಂದಿಗಳು ಗಾಯಗೊಂಡಿದ್ದಾರೆ. ಸತ್ಯವನ್ನು ವೌನವಾಗಿರಿಸಲು ಸಾಧ್ಯವಿಲ್ಲ ಎಂಬುದನ್ನು ಬಿಜೆಪಿ ಅರಿತುಕೊಳ್ಳಲಿ.

ಗುಲಾಂ ನಬಿ ಆಜಾದ್

ಬಿಜೆಪಿಯ ಹಿಂಸಾಚಾರದ ಸಂಸ್ಕೃತಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ವಿಧಾನ ಸಭೆ ಚುನಾವಣೆ ಮುನ್ನ ಗುಜರಾದ್‌ನಲ್ಲಿ ಭೀತಿಯ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಬಿಜೆಪಿ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದೆ.

ಗುಜರಾತ್ ಉಪ ಮುಖ್ಯಮಂತ್ರಿ ನಿತೀನ್ ಭಾ ಪಟೇಲ್

ನಾವು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಆದರೆ, ಕಾಂಗ್ರೆಸ್ ಶಾಸಕರು ಬೆಂಗಳೂರು ರೆಸಾರ್ಟ್‌ನಲ್ಲಿ ಇದ್ದಾರೆ. ಅದಕ್ಕಾಗಿ ಈ ಪ್ರತಿಭಟನೆ ನಡೆದಿರಬಹುದು. ಎಲ್ಲ ನಾಯಕರಿಗೆ ಹೇಳುವಂತೆ ರಾಹುಲ್ ಗಾಂಧಿ ಅವರಿಗೆ ಕೂಡ ಬುಲೆಟ್ ಪ್ರೂಪ್ ಕಾರಲ್ಲಿ ಪ್ರಯಾಣಿಸುವಂತೆ ರಾಜ್ಯ ಸರಕಾರ ತಿಳಿಸಿತ್ತು. ಆದರೆ, ಅರು ಸಾಮಾನ್ಯ ಕಾರಿನಲ್ಲಿ ಪ್ರಯಾಣಿಸಲು ಬಯಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X