Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾವೇರಿ ಅಚ್ಚುಕಟ್ಟಿನ ಪ್ರದೇಶ ಕೃಷಿಗೆ...

ಕಾವೇರಿ ಅಚ್ಚುಕಟ್ಟಿನ ಪ್ರದೇಶ ಕೃಷಿಗೆ ನೀರು: ಆ.14 ರಂದು ಸರ್ವಪಕ್ಷ ಸಭೆ

ವಾರ್ತಾಭಾರತಿವಾರ್ತಾಭಾರತಿ4 Aug 2017 10:09 PM IST
share
ಕಾವೇರಿ ಅಚ್ಚುಕಟ್ಟಿನ ಪ್ರದೇಶ ಕೃಷಿಗೆ ನೀರು: ಆ.14 ರಂದು ಸರ್ವಪಕ್ಷ ಸಭೆ

ಬೆಂಗಳೂರು, ಆ.4: ಕುಡಿಯಲು ಮತ್ತು ಜಾನುವಾರುಗಳಿಗಾಗಿ ಮಾತ್ರ ನಾಳೆಯಿಂದ ಹೇಮಾವತಿ ಮೇಲ್ದಂಡೆ ನಾಲೆಗೆ ನೀರು ಹರಿಸಲು ಸರಕಾರ ತೀರ್ಮಾನಿಸಿದೆ. ಕಾವೇರಿ ಅಚ್ಚುಕಟ್ಟಿನ ಪ್ರದೇಶದ ಕೃಷಿಗೆ ನೀರು ಹರಿಸುವ ಸಂಬಂಧ ಆ.14ರಂದು ಸರ್ವ ಪಕ್ಷ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನೀರಾವರಿ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಕಾವೇರಿ ಅಚ್ಚುಕಟ್ಟಿನ ನೀರಾವರಿ ಇಲಾಖೆಯ ಅಧಿಕಾರಿಗಳು, ಶಾಸಕರು, ಉಸ್ತುವಾರಿ ಸಚಿವರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

96 ಕಿ.ಮೀ ಇರುವ ಹೇಮಾವತಿ ಮೇಲ್ದಂಡೆಯ ಎಲ್ಲ ಕೆರೆ ಕೊಳ್ಳಗಳಿಗೆ ಶನಿವಾರ ಸಂಜೆಯಿಂದ ಪ್ರತಿ ದಿನ ಒಂದು ಟಿಎಂಸಿಯಂತೆ 10 ದಿನಗಳ ಕಾಲ 10 ಟಿಎಂಸಿ ನೀರು ಹರಿಸಲಾಗುವುದು. ಆದರೆ ಮೇಲ್ದಂಡೆಯ ಉಪ ಕಾಲುವೆಗಳಿಗೆ ನೀರು ಹರಿಸಲಾಗುವುದಿಲ್ಲ. ಇದಕ್ಕೆ ರೈತರು ಸಹಕರಿಸಬೇಕು ಎಂದು ಸರಕಾರ ಮನವಿ ಮಾಡಿದೆ.

ಸಭೆ ಬಳಿಕ ನೀರಾವರಿ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಕಾವೇರಿ ಕಣಿವೆಯ ನಾಲ್ಕು ಜಲಾಶಯಗಳಲ್ಲಿ 43 ಟಿಎಂಸಿ ನೀರು ಮಾತ್ರ ಇದೆ. ಹೀಗಿರುವ ನೀರಿನಲ್ಲಿ 32 ಟಿಎಂಸಿ ನೀರು ಬೆಂಗಳೂರು, ಮೈಸೂರು ನಗರ ಸೇರಿದಂತೆ ಇತರೆ ಪುರಸಭೆಗಳಿಗೆ ಕುಡಿಯಲು ಹರಿಸಬೇಕಿದೆ ಎಂದು ತಿಳಿಸಿದರು.

ಕಾವೇರಿ ಕಣಿವೆಯ ನಾಲ್ಕು ಜಲಾಶಯಗಳಲ್ಲಿ ಇರುವ ನೀರಿನ ಪ್ರಮಾಣ 40 ವರ್ಷಗಳಲ್ಲಿ ಅತ್ಯಂತ ಕಡಿಮೆ. ಆಗಸ್ಟ್ ತಿಂಗಳ ವೇಳೆಗೆ 120 ಟಿಎಂಸಿ ನೀರು ಲಭ್ಯವಿರುತ್ತಿತ್ತು. ಈ ನೀರಿನ ಪ್ರಮಾಣದಲ್ಲಿ 90 ಟಿಎಂಸಿಯಷ್ಟು ಕೃಷಿಗೆ ಹರಿಸಲಾಗುತ್ತಿತ್ತು. ವಾಡಿಕೆಗಿಂತ ಈ ಬಾರಿ ಕಾವೇರಿ ಕಣಿವೆಯ ಪ್ರದೇಶದಲ್ಲಿ ಶೇ.53ರಷ್ಟು ಮಳೆ ಕೊರತೆಯಿರುವುದರಿಂದ ಕೃಷಿಗೆ ನೀರು ಹರಿಸುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಐದು ದಿನಗಳೊಳಗೆ ಮಳೆ ಬರುವ ನಿರೀಕ್ಷೆಯಿದೆ. ಕಾದು ನೋಡೋಣ ಎಂದು ಹೇಳಿದರು.

ಕಾವೇರಿ ನ್ಯಾಯಾಧೀಕರಣದಂತೆ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಈ ವೇಳೆಗೆ 19 ಟಿಎಂಸಿ ನೀರು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ರಾಜ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 10 ಟಿಎಂಸಿ ನೀರನ್ನು ಮಾತ್ರ ಹರಿಸಲಾಗಿದೆ ಎಂದು ತಿಳಿಸಿದರು.
ಮಳೆ ವಿಳಂಬದಿಂದಾಗಿ ಹೇಮಾವತಿ ಮೇಲ್ದಂಡೆ ಪ್ರದೇಶದಲ್ಲಿ ಇನ್ನೂ ಭತ್ತ ಮತ್ತು ಕಬ್ಬು ಬೇಸಾಯ ಮಾಡಿಲ್ಲ. ಹೀಗಾಗಿ ಕುಡಿಯಲು ಮತ್ತು ಜಾನುವಾರುಗಳಿಗಾಗಿ ನೀರು ಬಿಡುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ರೈತ ಮುಖಂಡರು, ರೈತರು ಸರಕಾರಕ್ಕೆ ಪತ್ರ ಬರೆದಿದ್ದರು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಟಿ.ಬಿ.ಜಯಚಂದ್ರ, ಡಾ.ಎಚ್.ಸಿ.ಮಹದೇವಪ್ಪ, ಎ.ಮಂಜು, ಯು.ಟಿ.ಖಾದರ್, ಎಂ.ಆರ್.ಸೀತಾರಾಮ್, ಕೃಷ್ಣ ಬೈರೇಗೌಡ, ಆಂಜನೇಯ ಸೇರಿದಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X