Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ : ಮತ್ತೆ ಮುಂಗಾರು ಜೋರು : ಕೃಷಿ...

ಮಡಿಕೇರಿ : ಮತ್ತೆ ಮುಂಗಾರು ಜೋರು : ಕೃಷಿ ಚಟುವಟಿಕೆ ಚುರುಕು

ವಾರ್ತಾಭಾರತಿವಾರ್ತಾಭಾರತಿ5 Aug 2017 8:22 PM IST
share
ಮಡಿಕೇರಿ : ಮತ್ತೆ ಮುಂಗಾರು ಜೋರು : ಕೃಷಿ ಚಟುವಟಿಕೆ ಚುರುಕು

ಮಡಿಕೇರಿ, ಆ.5 :ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ, ತೊರೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕೃಷಿ ಚಟುವಟಿಕೆ ಗರಿಗೆದರಿದೆ.  

ಜಿಲ್ಲೆಯಲ್ಲಿ ಪ್ರಮುಖ ಕೃಷಿ ಬೆಳೆಗಳಾದ ಭತ್ತ, ಮುಸುಕಿನ ಜೋಳ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಜಿಲ್ಲೆಯಲ್ಲಿ 30,500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದ್ದು, ಈಗಾಲೇ 8,650 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಕಾರ್ಯವಾಗಿದೆ. 

ಮಡಿಕೇರಿ ತಾಲ್ಲೂಕಿನಲ್ಲಿ 6,500 ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 1,300 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಕಾರ್ಯವಾಗಿದೆ. ವಿರಾಜಪೇಟೆ ತಾಲ್ಲೂಕಿನಲ್ಲಿ 14 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡುವ ಗುರಿ ಹೊಂದಲಾಗಿದ್ದು, ಈಗಾಗಲೇ 4,228 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಕಾರ್ಯವಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 7,600 ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 3,130 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಕಾರ್ಯ ಪೂರ್ಣಗೊಂಡಿದೆ. ಹಾಗೆಯೇ 2400 ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಭತ್ತ ಬೆಳೆಯಲಾಗುತ್ತಿದ್ದು, ಕಾಲುವೆಗೆ ನೀರು ಹರಿಸಿದ ತಕ್ಷಣ ನೀರಾವರಿ ಭತ್ತ ಚಟುವಟಿಕೆ ಆರಂಭವಾಗಲಿದೆ. ಒಟ್ಟಾರೆ ಜಿಲ್ಲೆಯಲ್ಲಿ ಇದುವರೆಗೆ ಶೇ.28ರಷ್ಟು ಭತ್ತ ನಾಟಿ ಕಾರ್ಯವಾಗಿದೆ. 

ಪ್ರಸಕ್ತ ವರ್ಷದಲ್ಲಿ ನಾಟಿಯಂತ್ರ ಬಳಸಿ ಭತ್ತ ನಾಟಿ ಮಾಡುವುದಕ್ಕೆ ಕೃಷಿ ಇಲಾಖೆಯಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ. ಪ್ರತೀ ಹೆಕ್ಟೇರ್ ಪ್ರದೇಶಕ್ಕೆ (ಒಬ್ಬ ಕೃಷಿಕರಿಗೆ 2 ಹೆಕ್ಟೇರ್ ಮೀರದಂತೆ) 4 ಸಾವಿರ ರೂ. ಸಹಾಯಧನ ಕಲ್ಪಿಸಲಾಗುತ್ತದೆ.

ಮುಸುಕಿನ ಜೋಳ ಸಂಬಂಧಿಸಿದಂತೆ 4 ಸಾವಿರ ಹೆಕ್ಟೇರ್ ಗುರಿಯಲ್ಲಿ 3,590 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯವಾಗಿದ್ದು, ಶೇ.90ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ.

ಜಿಲ್ಲೆಯಲ್ಲಿ ಕೃಷಿ ಕಾರ್ಮಿಕರ ಕೊರತೆ ನೀಗಿಸಲು ಕೃಷಿ ಇಲಾಖೆ ವತಿಯಿಂದ ಸಹಾಯಧನದಡಿ ವಿವಿಧ ಯಂತ್ರೋಪಕರಣ ನೀಡುವ ಸೌಲಭ್ಯವಿದ್ದು, ಸಣ್ಣ ಟ್ರ್ಯಾಕ್ಟರ್, ಪವರ್ ಟಿಲ್ಲರ್, ನಾಟಿಯಂತ್ರ, ಕಟಾವು ಯಂತ್ರ, ನೀರು ಹಾಯಿಸಲು ಡೀಸೆಲ್ ಪಂಪುಸೆಟ್, ತುಂತುರು ನೀರಾವರಿ ಘಟಕಗಳು, ಪವರ್ ಪ್ಲೇಯರ್ಸ್‍ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಸೌಲಭ್ಯವಿದೆ.

ಲಘು ಪೋಷಕಾಂಶ, ಎರೆಹುಳು ಗೊಬ್ಬರ ಕಾರ್ಯಕ್ಕಾಗಿ ತೊಟ್ಟಿ ನಿರ್ಮಾಣ, ಹಸಿರೆಲೆ ಗೊಬ್ಬರ, ಡೋಲಾಮೈಟ್ ನ್ನು ಸಹಾಯಧನದಡಿ ಕೃಷಿ ಇಲಾಖೆಯಿಂದ ನೀಡಲಾಗುತ್ತದೆ.

ಕೃಷಿ ಹೊಂಡ ಕಾರ್ಯಕ್ಕೂ ಸಹ ಅವಕಾಶವಿದೆ. ರೈತರು ತಮ್ಮ ಹೊಲದ ಮಣ್ಣಿನ ರಸಸಾರ ಹೆಚ್ಚಿಸಲು ಮುಂದಾಗಬೇಕಿದೆ. ಆ ದಿಸೆಯಲ್ಲಿ ಮಣ್ಣನ್ನು ಉಚಿತವಾಗಿ ಪರೀಕ್ಷೆ ಮಾಡಿ ಮಾಹಿತಿ ನೀಡಲಾಗುತ್ತದೆ. ಈ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೃಷಿ ತಾಂತ್ರಿಕ ಅಧಿಕಾರಿ ರಮೇಶ್ ಅವರು ಮಾಹಿತಿ ನೀಡಿದ್ದಾರೆ.

ಕೃಷಿ ಪ್ರಶಸ್ತಿ ಮತ್ತು ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ:

ಪ್ರತೀ ವರ್ಷದಂತೆ 2017-18ನೇ ಸಾಲಿನಲ್ಲಿಯು ಕೃಷಿ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 10 ಹಾಗೂ ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನವಾಗಿದೆ. 

ಕೃಷಿ ಪಂಡಿತ ಪ್ರಶಸ್ತಿಗೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಪ್ರವೇಶ ಶುಲ್ಕ ಸಾಮಾನ್ಯ ರೈತರಿಗೆ 100 ರೂ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರಿಗೆ 25 ರೂ ಪಾವತಿಸಬೇಕಿದೆ.

ಈ ಹಿಂದೆ ಕೃಷಿ ಪ್ರಶಸ್ತಿ ಪಡೆಯದ ರೈತರು ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ. ಭರ್ತಿಮಾಡಿದ ಅರ್ಜಿಯನ್ನು ಪಹಣಿ ಪತ್ರದೊಂದಿಗೆ ನಿಗದಿತ ದಿನಾಂಕದೊಳಗೆ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿsಸುವಂತೆ ಜಂಟಿ ಕೃಷಿ ನಿರ್ದೇಶಕರಾದ ಕೆ.ರಾಮಪ್ಪ ಅವರು ಕೋರಿದ್ದಾರೆ.

ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಗೆ 15 ಸಾವಿರ(ಪ್ರಥಮ), 10 ಸಾವಿರ (ದ್ವ್ವಿತೀಯ) ಮತ್ತು 5 ಸಾವಿರ (ತೃತೀಯ), ಜಿಲ್ಲಾ ಮಟ್ಟದ ಕೃಷಿ ಪ್ರಶಸ್ತಿಗೆ ಸಂಬಂಧಿಸಿದಂತೆ ಪ್ರಥಮ ಬಹುಮಾನ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ. ಒಳಗೊಂಡಿದೆ. ರಾಜ್ಯ ಕೃಷಿ ಪ್ರಶಸ್ತಿ ಸಂಬಂಧಿಸಿದಂತೆ 50 ಸಾವಿರ ರೂ.(ಪ್ರಥಮ), 25 ಸಾವಿರ ರೂ.(ದ್ವಿತೀಯ), 15 ಸಾವಿರ ರೂ.(ತೃತೀಯ). ಒಂದು ಬಾರಿ ಬಹುಮಾನ ಪಡೆದವರು ಮೂರು ವರ್ಷದವರೆಗೆ ಅದೇ ವಿಭಾಗವಾರು ಪ್ರಶಸ್ತಿಗೆ ಅರ್ಜಿ ಸಲ್ಲಿಸುವಂತಿಲ್ಲ. 

ಕೃಷಿ ಪಂಡಿತ ಪ್ರಶಸ್ತಿಗೆ ಸಂಬಂಧಿಸಿದಂತೆ ಪ್ರಥಮ ಬಹುಮಾನ ಒಂದು ಲಕ್ಷ ರೂ., ದ್ವಿತೀಯ ಬಹುಮಾನ 75 ಸಾವಿರ ರೂ., ತೃತೀಯ ಬಹುಮಾನ 50 ಸಾವಿರ ರೂ. ನೀಡಲಾಗುತ್ತದೆ. ಮೊದಲ ಮೂರು ಪ್ರಶಸ್ತಿ ಪಡೆದ ನಂತರ ಶೇ.65 ಕ್ಕೂ ಹೆಚ್ಚು ಅಂಕ ಪಡೆದವರಿಗೆ ಉದಯೋನ್ಮುಖ ಪ್ರಶಸ್ತಿ ನೀಡಲಾಗುತ್ತಿದ್ದು, ಇದಕ್ಕೆ 25 ಸಾವಿರ ರೂ. ನಗದು ಬಹುಮಾನ ನೀಡಲಾಗುತ್ತದೆ ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X