Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುಟ್ಟರಾಜುಗೆ ಸಂಸದ ಅಂದರೇನು ಅಂತಾನೆ...

ಪುಟ್ಟರಾಜುಗೆ ಸಂಸದ ಅಂದರೇನು ಅಂತಾನೆ ಗೊತ್ತಿಲ್ಲ:ಪುಟ್ಟಣ್ಣಯ್ಯ

ದ್ವೇಷ ರಾಜಕಾರಣ ಬಿಡುವಂತೆ ಸಲಹೆ

ವಾರ್ತಾಭಾರತಿವಾರ್ತಾಭಾರತಿ5 Aug 2017 8:39 PM IST
share

ಮಂಡ್ಯ, ಆ.5:  ಕಣದ ಪೂಜೆ, ಡೇರಿ ಉದ್ಘಾಟನೆ, ನೀರಿನ ಟ್ಯಾಂಕ್ ಪೂಜೆಗೆ ಹೋಗುತ್ತಾ ಶಿಷ್ಟಾಚಾರ ಮರೆತು ದ್ವೇಷದ ರಾಜಕಾರಣ ಮಾಡುವ ಸಂಸದ ಸಿ.ಎಸ್.ಪುಟ್ಟರಾಜುಗೆ ಎಂ.ಪಿ. ಅಂದರೇನು ಅಂತಾನೇ ಗೊತ್ತಿಲ್ಲ ಎಂದು ಶಾಸಕ, ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಟೀಕಿಸಿದ್ದಾರೆ.

ಶನಿವಾರ ಪಾಂಡವಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ತಾಲೂಕಿನ ಸಣಬ ಗ್ರಾಮದಲ್ಲಿ ಆ.2 ರಂದು ಅಂಬೇಡ್ಕರ್ ಭವನಕ್ಕೆ ಭೂಮಿ ಪೂಜೆ ಸಲ್ಲಿಸುವಾಗ ಜೆಡಿಎಸ್ ಕಾರ್ಯಕರ್ತ ಶಿವಣ್ಣ ಎಂಬುವ ಪೂಜೆಗೆ ಅಡ್ಡಿಪಡಿಸಿದ್ದಾರೆ. ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಪುಟ್ಟರಾಜು ತಮ್ಮ ಚೇಲಾಗಳ ಮೂಲಕ ಚೇಷ್ಠೆ, ಕುಚೇಷ್ಠೆಗೆ ಮುಂದಾಗಿರುವುದು ನಾಚಿಕೆಗೇಡು ಎಂದರು.

ದಲಿತರ ಸಬಲೀಕರಣಕ್ಕಾಗಿ ತಾಲೂಕಿನಲ್ಲಿ 34 ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಭವನಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿಸಿದ್ದೇನೆ. ಭವನಕ್ಕೆ ಕೇವಲ 6 ಲಕ್ಷ ಇದ್ದ ಅನುದಾನವನ್ನು 12 ಲಕ್ಷಕ್ಕೆ ಏರಿಸುವಲ್ಲಿ ಹೋರಾಟ ಮಾಡಿದ್ದೇನೆ. ಹೀಗಿದ್ದರೂ ಕೇವಲ ಚಿಲ್ಲರೆ ರಾಜಕಾರಣಕ್ಕಾಗಿ ಅಂಬೇಡ್ಕರ್ ಬಗ್ಗೆ ಜ್ಞಾನವಿಲ್ಲದ ದಲಿತ ಮುಖಂಡರನ್ನು ಮುಂದಿಟ್ಟುಕೊಂಡು ಅಂಬೇಡ್ಕರ್ ಭವನಕ್ಕೆ 20 ಲಕ್ಷ ರೂ.ಗಳನ್ನು ತನ್ನ ಅನುದಾನದಲ್ಲಿ ಕೊಡುತ್ತೇನೆ, ಪುಟ್ಟಣ್ಣಯ್ಯನಿಂದ ಪೂಜೆ ಮಾಡಿಸಬೇಡಿ ಎಂದು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಡ್ಡಿಪಡಿಸವುದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಹ್ಯಕರ ಹೇಳಿಕೆ ನೀಡುತ್ತಿರುವುದು ಅಸಭ್ಯವರ್ತನೆ ಎಂದು ಅವರು ಪುಟ್ಟರಾಜು ವಿರುದ್ಧ ಕಿಡಿಕಾರಿದರು.

ಸಂಸದರು ಕೆರೆತೊಣ್ಣೂರು ಆದರ್ಶ ಗ್ರಾಮಕ್ಕೆ ಪೂಜೆ ಮಾಡಿ ಎರಡೂವರೆ ವರ್ಷವಾಯ್ತು,  ಕ್ಯಾತನಹಳ್ಳಿ ವಿಶ್ವೇಶ್ವರಯ್ಯ ಪ್ರೌಢಶಾಲೆಗೆ ಶಾಲೆಗೆ 10 ಲಕ್ಷ ಕೊಡ್ತೀನಿ ಎಂದು ಹೇಳಿ 3 ವರ್ಷ ಆಯ್ತು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 40 ಲಕ್ಷ ಕೊಡ್ತೀನಿ ಅಂದ್ರು, ನಯಾಪೈಸೆ ಕೊಡಲಿಲ್ಲ. ರಾಮಮಂದಿರಕ್ಕೆ 15 ಲಕ್ಷ ಕೊಡ್ತೀನಿ ಅನ್ನೋದು, ಹೀಗೆ ಸುಳ್ಳು ಹೇಳಿಕೊಂಡೇ ಕಾಲ ತುಂಬಿಸಿಬಿಡುತ್ತಿದ್ದಾರೆ. ಅಲ್ಲದೇ ನಾನು ಮಾಡುವ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಪಡಿಸಿ ದ್ವೇಷದ ರಾಜಕಾರಣಕ್ಕೆ ಮುಂದಾಗಿರುವುದು ಸರಿಯಲ್ಲ. ಇದನ್ನು ಮತದಾರರು ಗಮನಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಜಿಪಂ ಸದಸ್ಯ ಅಶೋಕ, ಕ್ಷೇತ್ರದಲ್ಲಿ ಕೆಟ್ಟ ಸಂಸ್ಕøತಿಯನ್ನು ಹುಟ್ಟುಹಾಕುತ್ತಿದ್ದರೆ, ಹಿರೇಮರಳಿ ಶಾಲೆ ಸೈಕಲ್ ವಿತರಣೆಗೆ ತನನ್ನು (ಪುಟ್ಟಣ್ಣಯ್ಯ) ಎಸ್‍ಡಿಎಂಸಿ  ಸದಸ್ಯರು ಆಹ್ವಾನಿಸಿದರೆ, ಮತ್ತೊಬ್ಬ ಜಿಪಂ ಸದಸ್ಯ ತಿಮ್ಮೇಗೌಡ ಆ ಕುಂಟನನ್ನು ಕರೆಯುವುದಾ ಎಂದು ಅವಹೇಳನ ಮಾಡಿದ್ದಾರೆ. ನಾಗರಿಕ ಸಮಾಜದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ಈ ರೀತಿ ಮಾತನಾಡುವುದು ಸರಿಯಲ್ಲ. `ನಾಲಿಗೆ ಅವರ ಕುಲವನ್ನು ಹೇಳುತ್ತದೆ’ ಎಂದು ಎದುರೇಟು ನೀಡಿದರು.

ತಾಲೂಕಿನ ಅಲ್ಪಹಳ್ಳಿ, ಹೊಸ ಸಾಯಪ್ಪನಹಳ್ಳಿ ಗ್ರಾಮದಲ್ಲಿ ನೀರಿನ ಟ್ಯಾಂಕ್, ಮತ್ತು ಎಪಿಎಂಸಿ ವತಿಯಿಂದ 7 ಕಣಗಳ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡುವಾಗ ನನಗೆ ಆಹ್ವಾನ ನೀಡದೇ ಎಂ.ಪಿ.ಗೆ ಮಾತ್ರ ನೀಡಿರುವುದು ಶಿಷ್ಟಾಚಾರ ಉಲ್ಲಂಘಟನೆಯಾಗಿದೆ. ಪಿಎಂಜಿಎಸ್‍ವೈ ಯೋಜನೆಯ ರಸ್ತೆ ಅಭಿವೃದ್ಧಿ ಕಾಮಗಾರಿ ತನ್ನದೆಂದು ಪುಟ್ಟರಾಜು ಸುಳ್ಳು ಹೇಳುತ್ತಾರೆ. ವಾಸ್ತವವಾಗಿ ವಾಹನದ ಒತ್ತಡ ಮತ್ತು ಸಂಖ್ಯೆ ಆಧಾರದ ಮೇಲೆ ಹೆದ್ದಾರಿ ಅಭಿವೃದ್ಧಿ ನಿಗಮ ಈ ಕಾಮಗಾರಿ ನಡೆಸಿದೆ ಎಂದು ಸ್ಪಷ್ಟಪಡಿಸಿದರು.

ಸಂಸದ ಸಿ.ಎಸ್.ಪುಟ್ಟರಾಜು ಮೊದಲು ರಾಷ್ಟ್ರೀಕೃತ ಬ್ಯಾಂಕುಗಳ ಸಭೆ ಕರೆದು ಜಿಲ್ಲೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ, ಸಾಲದ ನೀತಿ ಬಗ್ಗೆ ಚರ್ಚಿಸಿ ರೈತರಿಗೆ ಅನುಕೂಲ ಮಾಡಲಿ. ಅದನ್ನು ಬಿಟ್ಟು ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ದೇಶದಲ್ಲಿ 148 ರೈತ ಸಂಘಟನೆಗಳು ಒಂದಾಗಿ, ಮುಂದಿನ ಚುನಾವಣಾ ರಾಜಕಾರಣದಲ್ಲಿ ಭಾಗವಹಿಸುತ್ತಿವೆ ಎಂದ ಪುಟ್ಟಣ್ಣಯ್ಯ, ಸರಕಾರ ಕಾವೇರಿ ಕಣಿವೆ ಜಲಾಶಯಗಳಿಂದ ಎರಡು ಕಟ್ಟು ನೀರುಹರಿಸಿದರೆ ಅಂತರ್ಜಲ ವೃದ್ಧಿ, ತೆಂಗು, ಅಡಿಕೆ, ರಾಗಿ, ಇತರೆ ಕಾಳುಗಳ ಬೆಳೆಗೆಗಾಗಿ ಸರಕಾರ ಕಾವೇರಿ ಕಣಿವೆ ಜಲಾಶಯಗಳಿಂದ ಎರಡು ಕಟ್ಟು ನೀರುಬಿಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಹಿರೇಮರಳಿ ಕೃಷ್ಣಮೂರ್ತಿ, ಹೊಸಕೋಟೆ ವಿಜಯಕುಮಾರ ಹಾಗು ಹೊಸಹಳ್ಳಿ ಜಯರಾಮು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X