Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಚಿವ ಡಿಕೆಶಿ ಮನೆಯಲ್ಲಿ ಸಿಕ್ಕಿದೆ...

ಸಚಿವ ಡಿಕೆಶಿ ಮನೆಯಲ್ಲಿ ಸಿಕ್ಕಿದೆ ಎನ್ನಲಾದ ಕಂತೆ ಕಂತೆ ನೋಟುಗಳ ವಿಡಿಯೋದ ಹಿಂದಿನ ರಹಸ್ಯವಿದು..

ವಾರ್ತಾಭಾರತಿವಾರ್ತಾಭಾರತಿ6 Aug 2017 3:48 PM IST
share
ಸಚಿವ ಡಿಕೆಶಿ ಮನೆಯಲ್ಲಿ ಸಿಕ್ಕಿದೆ ಎನ್ನಲಾದ ಕಂತೆ ಕಂತೆ ನೋಟುಗಳ ವಿಡಿಯೋದ ಹಿಂದಿನ ರಹಸ್ಯವಿದು..

ಹೊಸದಿಲ್ಲಿ,ಆ.6: ದುರ್ಗಾ ಮೆನನ್ ಎನ್ನುವವರು ತನ್ನ ಟ್ವಿಟರ್ ಖಾತೆಯಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ವಿದ್ಯುತ್ ಸಚಿವ ಪಿಯೂಷ್ ಗೋಯಲ್ ಮತ್ತು ಇತರ ಹಲವಾರು ಹಿರಿಯ ಬಿಜೆಪಿ ನಾಯಕರು ಮೆನನ್ ಅವರ ಟ್ವಿಟರ್ ಹ್ಯಾಂಡಲ್ ಫಾಲೊ ಮಾಡುತ್ತಿದ್ದಾರೆ. ‘‘ ಕರ್ನಾಟಕದ ಸಚಿವ ಡಿ.ಕೆ.ಶಿವಕುಮಾರ ಅವರ ಮನೆಯ ಮೇಲೆ ನಡೆದ ದಾಳಿ ಸಂದರ್ಭ ಕೇವಲ ಒಂದು ಲಾಕರ್‌ನ್ನು ತೆರೆಯಲಾಗಿದೆ. ಕಾಂಗ್ರೆಸಿಗರೇ,ಎಲ್ಲಿ ಬಚ್ಚಿಟ್ಟುಕೊಂಡಿದ್ದೀರಿ?’’ ಎಂಬ ಬರಹ ವೀಡಿಯೊದ ಜೊತೆಯಲ್ಲಿದೆ. ನೋಟುಗಳಿಂದ ತುಂಬಿರುವ ಲಾಕರ್ ಮತ್ತು ನೆಲದ ಮೇಲಿರುವ ನಗದು ಹಣ ತುಂಬಿರುವ ಹಲವಾರು ಬ್ಯಾಗ್‌ಗಳು ಈ ವೀಡಿಯೊದಲ್ಲಿವೆ.

"ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಸಿಕ್ಕಿರುವ ನೋಟಿನ ಕಂತೆಗಳು" ಎನ್ನುವ ತಲೆಬರಹದೊಂದಿಗೆ ವೈರಲ್ ಆದ ಈ ವಿಡಿಯೋದ ಹಿಂದಿನ ಅಸಲಿಯತ್ತನ್ನು ಆಲ್ಟ್ ನ್ಯೂಸ್ ಡಾಟ್ ಇನ್ (altnews.in) ಬಹಿರಂಗಪಡಿಸಿದೆ. 

ಇದೇ ವೀಡಿಯೊ ಫೇಸ್‌ಬುಕ್‌ನಲ್ಲಿಯೂ ವೈರಲ್ ಆಗಿದೆ. ‘‘ಶಿವಕುಮಾರ ಅವರ ಮನೆಯ ಕೇವಲ ಒಂದು ಲಾಕರ್ ರೂಮನ್ನು ಮಾತ್ರ ತೆರೆಯಲಾಗಿದೆ’’ ಎಂಬ ಬರಹ ಹೆಚ್ಚಿನ ಫೇಸ್‌ಬುಕ್ ಪೋಸ್ಟ್‌ಗಳಲ್ಲಿದೆ. ವಾಟ್ಸಾಪ್‌ನಲ್ಲಿ ವೈರಲ್ ಆಗಿರುವ ಈ ವೀಡಿಯೊವನ್ನು ಬಳಕೆದಾರರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡುತ್ತಿರುವುದು ಸ್ಪಷ್ಟವಾಗಿದೆ. ಮೆನನ್ ಕೂಡ ತನಗೆ ಈ ವೀಡಿಯೊ ವ್ಯಾಟ್ಸಾಪ್ ಮೂಲಕ ಬಂದಿತ್ತು ಎಂದು ಹೇಳಿಕೊಂಡಿದ್ದಾರೆ.

ಆದರೆ ವಾಸ್ತವದಲ್ಲಿ ಡಿಕೆಶಿ ಮನೆಯ ಮೇಲಿನ ಆದಾಯ ತೆರಿಗೆ ಇಲಾಖೆಯ ದಾಳಿಯದು ಎಂದು ಹೇಳಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಈ ವೀಡಿಯೊ ಕಳೆದ ವರ್ಷ ದಿಲ್ಲಿಯಲ್ಲಿರುವ ರೋಹಿತ್ ಟಂಡನ್ ನೇತೃತ್ವದ ಟಿ ಆ್ಯಂಡ್ ಟಿ ಲಾ ಫರ್ಮ್‌ನ ಮೇಲೆ ನಡೆದಿದ್ದ ಐಟಿ ದಾಳಿಯದ್ದಾಗಿದೆ. 2016, ಡಿಸೆಂಬರ್‌ನಲ್ಲಿ ಟಂಡನ್ ಅವರ ಈ ಕಾನೂನು ಸಂಸ್ಥೆ ಮತ್ತು ನಿವಾಸಗಳ ಮೇಲೆ ನಡೆದಿದ್ದ ದಾಳಿಯ ವೇಳೆ ಬರೋಬ್ಬರಿ 13 ಕೋ.ರೂ.ನಗದು ಪತ್ತೆಯಾಗಿತ್ತು.

ಈಗ ಡಿಕೆಶಿ ಮನೆಯ ಮೇಲಿನ ದಾಳಿಯ ವೀಡಿಯೊ ಎಂದು ಶೇರ್ ಆಗುತ್ತಿರುವ ಇದನ್ನು ಮೊದಲು ಪತ್ರಕರ್ತ ಶಿವ ಸನ್ನಿ ಅವರು 2016,ಡಿ.10ರಂದು ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು ಮತ್ತು ‘‘ದಿಲ್ಲಿಯ ಗ್ರೇಟರ್ ಕೈಲಾಸ್‌ನ ಟಿ ಆ್ಯಂಡ್ ಟಿ ಲಾ ಫರ್ಮ್‌ನ ಮೇಲೆ ದಿಲ್ಲಿ ಪೊಲೀಸರ ದಾಳಿಯ ವೇಳೆ ವಶಪಡಿಕೊಳ್ಳಲಾದ 8 ಕೋಟಿ ರೂ.(2 ಕೋ.ರೂ.ಗಳ ಹೊಸನೋಟುಗಳು ಸೇರಿದಂತೆ) ನಗದು ಹಣದ ವೀಡಿಯೋ’’ ಎಂದೂ ಅವರು ಉಲ್ಲೇಖಿಸಿದ್ದರು. ಈ ವೀಡಿಯೊ ಕೂಡ ಇಲ್ಲಿದೆ.

ಇತ್ತಿಚೆಗೆ ಕೇರಳದಲ್ಲಿ ರಾಜೇಶ್ ಎಂಬ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿತ್ತು. ರಾಜೇಶ್‌ನದೆಂದು ಹೇಳಿಕೊಂಡು ನಕಲಿ ವೀಡಿಯೊವೊಂದನ್ನು ಬ್ರಝಿಲ್‌ನಿಂದ ಪೋಸ್ಟ್ ಮಾಡಲಾಗಿತ್ತು. ಇಂದಿನ ದಿನಗಳಲ್ಲಿ ಸುದ್ದಿಯಾಗಬಹುದಾದ ಪ್ರತಿಯೊಂದು ರಾಜಕೀಯ ವಿಷಯಕ್ಕೂ ಸಂಬಂಧಿಸಿದಂತೆ ನಕಲಿ ವೀಡಿಯೊಗಳನ್ನು ಪೋಸ್ಟ್ ಮಾಡಲಾಗುತ್ತಿದೆ. ಹೆಚ್ಚಾಗಿ ವೀಡಿಯೊಗಳನ್ನು ಬಿಜೆಪಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಲಾಭವಾಗುವ ಉದ್ದೇಶದಿಂದ ಹರಿಬಿಡಲಾಗುತ್ತಿದೆ.

ಕೃಪೆ: altnews.in

The cash allegedly recovered from T&T law firm in Delhi's GK. Around Rs 2 cr in new notes. Total over Rs 8cr. @the_hindu @abaruah64 pic.twitter.com/s7j8wQu5sm

— Shiv Sunny (@shivsunny) December 10, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X