Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ...

ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಆ.13 ರಂದು ಧರಣಿ

ವಾರ್ತಾಭಾರತಿವಾರ್ತಾಭಾರತಿ6 Aug 2017 7:07 PM IST
share
ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಆ.13 ರಂದು ಧರಣಿ

ಚಾಮರಾಜನಗರ, ಆ. 6: ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಸಂಪರ್ಕ ಸೇತುವೆಯಂತ್ತಿರುವ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ಖಂಡಿಸಿ ಆಗಷ್ಟ್ 13 ರಂದು ಚಾಮರಾಜನಗರ ರೈಲ್ವೆ ನಿಲ್ದಾಣದಲ್ಲಿ ಚಾಪೆ ಹಾಸಿಕೊಂಡು ಮಲಗಿ ಪ್ರತಿಭಟನೆ ನಡೆಸುವುದಾಗಿ ವಾಟಾಳ್ ನಾಗರಾಜ್ ಹೇಳಿದರು.

ವಾ.ಓ: ಚಾಮರಾಜನಗರ ರೈಲ್ವೆ ನಿಲ್ದಾಣದ ವ್ಯವಸ್ಥೆಗಳನ್ನು ವೀಕ್ಷಿಸಿದ ವಾಟಾಳ್‍ನಾಗರಾಜ್, ಪ್ಲಾಟ್‍ಫಾರಂ ನಲ್ಲಿ ಸುತ್ತಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ರೈಲ್ವೆ ಇಲಾಖೆ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಚಾಮರಾಜನಗರ ಜಿಲ್ಲೆ ಮೂರು ರಾಜ್ಯಗಳ ಸಂಪರ್ಕ ಇರುವ ಜಿಲ್ಲೆಯಾಗಿದ್ದು, ಇಲ್ಲಿಂದ ಕೇರಳ ಮತ್ತು ತಮಿಳುನಾಡಿಗೆ ರೈಲ್ವೆ ಮಾರ್ಗ ಕಲ್ಪಿಸಿದಾಗ ಉತ್ತಮವಾಗಿರುತ್ತದೆ ಎಂದು ಹೇಳಿದ ವಾಟಾಳ್ ನಾಗರಾಜ್, ನಾಮಕಾವಸ್ತೆಯಂತೆ ಸರ್ವೆ ಮಾಡಿದ್ದಾರೆ ಆದರೆ ಇನ್ನೂ ಜಾರಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಲೋಕಸಭಾ ಸದಸ್ಯರು ರಾಜ್ಯದ ರೈಲ್ವೆ ಯೋಜನೆಗಳನ್ನು ಅನುಷ್ಠಾನಕ್ಕೆ ಕೇಂದ್ರ ಸರ್ಕಾರವು ವಿಳಂಬ ನೀತಿಯನ್ನು ಅನುಸರಿಸುತ್ತಿರುವ ಬಗ್ಗೆ ಚಕಾರ ಎತ್ತದೇ ಇರುವುದು ಅನುಮಾನ ಮೂಡಿಸಿದೆ ಈ ಹಿನ್ನಲೆಯಲ್ಲಿ ಚಾಮರಾಜನಗರ ಮೆಟ್ಟುಪಾಳ್ಯಂ ಹಾಗೂ ಬೆಂಗಳೂರು ಕನಕಪುರ ಮಾರ್ಗವಾಗಿ ಚಾಮರಾಜನಗರ ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ಇದೇ 13 ರಂದು ರೈಲ್ವೆ ನಿಲ್ದಾಣದ ಮುಂದೆ ಚಾಪೆ ಹಾಸಿ ಮಲಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಗೋವಾ ಸರ್ಕಾರವು ಉತ್ತರ ಕರ್ನಾಟಕಕ್ಕೆ ಕಳಸ ಬಂಡೂರಿಗೆ ನೀರು ಹರಿಸುವುದಿಲ್ಲ ಎಂದು ಹೇಳುತ್ತಿದೆ ಇದು ಸರಿಯಾದ ಕ್ರಮವಲ್ಲ, ಉತ್ತರ ಕರ್ನಾಟಕ ಜನತೆಯ ಪರವಾಗಿ ಕನ್ನಡ ಸಂಘಟನೆಗಳು ಇದೆ ಹಾಗೂ ಈ ಬಗ್ಗೆ ಕಾರ್ಯ ರೂಪಿಸುವ ಸಲುವಾಗಿ ಇದೇ 12 ರಂದು ಕನ್ನಡ ಸಂಘಟನೆಗಳ ಸಮ್ಮೇಳನ ಹಮ್ಮಿಕೊಂಡಿದ್ದು, ಅಲ್ಲಿ ನಿರ್ಣಯ ಕೈಗೊಂಡು, ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಹೋಗುವ ಎಲ್ಲಾ ಸೌಲಬ್ಯಗಳನ್ನು ಬಂದ್ ಮಾಡುವುದಲ್ಲದೇ ಹೋರಾಟ ಉಗ್ರ ಸ್ವರೂಪಕ್ಕೆ ಕೊಂಡೊಯ್ಯುವುದಾಗಿ ಹೇಳಿದರು.

ಚಾಮರಾಜನಗರದ ಜೋಡಿ ರಸ್ತೆ ಮಾಡಿದ್ದು ನಾನು ಅದು ಜಿಲ್ಲೆಯಾಗುವ ಮೊದಲೇ, ಕ್ರೀಡಾಂಗಣ ಮಾಡಿದ್ದು ನಾನೇ, ಅದೂ ಕೂಡ ಜಿಲ್ಲಾಯಾಗುವುದಕ್ಕೂ ಮೊದಲೇ, ಅದೇ ರೀತಿ ಕಾವೇರಿ ನದಿಯಿಂದ ನೀರು ತಂದಿದ್ದು ನಾನೇ ಎಂದು ಹೇಳಿಕೊಂಡ ವಾಟಾಳ್ ನಾಗರಾಜ್, ಗಡಿ ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಮುಖ್ಯಮಂತ್ರಿಗಳು ಐದು ಸಾವಿರ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದಾಗ ಮಾತ್ರ ಜಿಲ್ಲೆ ಸಮಗ್ರ ಅಭಿವೃದ್ದಿಯಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X