ಹತ್ಯೆಯಾದ ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ನಿವಾಸಕ್ಕೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಭೇಟಿ

ತಿರುವನಂತಪುರ, ಆ. 6: ದುಷ್ಕರ್ಮಿಗಳಿಂದ ಕೊಲೆಗೀಡಾದ ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಅವರ ನಿವಾಸಕ್ಕೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಇಂದು ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿದರು.
ಭೇಟಿಯ ಸಂದರ್ಭ ಜೇಟ್ಲಿ ರಾಜೇಶ್ ಅವರ ಮೂರು ವರ್ಷದ ಪುತ್ರ ಹಾಗೂ ವೃದ್ಧ ತಂದೆ-ತಾಯಿಯನ್ನು ಮಾತನಾಡಿಸಿದರು.
ಕುಮ್ಮನಮ್ ರಾಜಶೇಖರನ್, ರಾಜ್ಯ ಬಿಜೆಪಿ ನಾಯಕರೊಂದಿಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ರಾಜೇಶ್ ಕುಟುಂಬಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
Next Story





