Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಮೂಹಿಕವಾಗಿ ಬದುಕುವ ಮೌಲ್ಯಗಳು ಕೂಡು...

ಸಾಮೂಹಿಕವಾಗಿ ಬದುಕುವ ಮೌಲ್ಯಗಳು ಕೂಡು ಕುಟುಂಬ ಪದ್ಧತಿಯಲ್ಲಿತ್ತು: ಡಾ.ಬಿ.ಎ.ವಿವೇಕ ರೈ

ವಾರ್ತಾಭಾರತಿವಾರ್ತಾಭಾರತಿ6 Aug 2017 9:47 PM IST
share

ಮಂಗಳೂರು, ಆ.6: ಸಾಮೂಹಿಕವಾಗಿ ಬದುಕುವ ಮೌಲ್ಯಗಳು ತುಳುನಾಡಿನ ಕೂಡು ಕುಟುಂಬ ಪದ್ಧತಿಯಲ್ಲಿತ್ತು. ಬೋಲ ಚಿತ್ತರಂಜನ ದಾಸ ಶೆಟ್ಟಿಯವರ ಕೃತಿಗಳಲ್ಲಿ ತುಳುನಾಡಿನ ಈ ಕೂಡು ಕುಟುಂಬ, ಶ್ರಮ ಸಂಸ್ಕೃತಿಯ ಚಿತ್ರಣವಿದೆ ಎಂದು ಕರ್ನಾಟಕ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ತಿಳಿಸಿದ್ದಾರೆ.

ಅವರು ಇಂದು ನಗರದ ಎಸ್‌ಡಿಎಂ ಕಾನೂನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡ ಬೋಲ ಸ್ಮತಿಯಾನ ಕಾರ್ಯಕ್ರಮದಲ್ಲಿ ದಿವಂಗತ ಬೋಳ ಚಿತ್ತರಂಜನ ದಾಸ ಶೆಟ್ಟಿಯವರ ‘ಮಾತೃಧರ್ಮ ಅಳಿಯ ಸಂತಾನ’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.

ಬೋಲ ಚಿತ್ತರಂಜನ ದಾಸ ಶೆಟ್ಟಿಯವರ ಅಳಿದುಳಿದವರು ಕೃತಿಯಲ್ಲಿ ತುಳುನಾಡಿನ ಮಾತೃಮೂಲೀಯ ಕೂಡು ಕುಟುಂಬದಲ್ಲಿ ಹೆಣ್ಣಿನ ಸ್ಥಾನ ಮಾನದ ಇತಿಮಿತಿಗಳ ಅಲ್ಲಿನ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತದೆ. ಜೊತೆಗೆ ಕೂಡು ಕುಟುಂಬದಲ್ಲಿನ ಗಂಡಿನ ಅನಾಥ ಪ್ರಜ್ಞೆಯ ಬಗ್ಗೆಯೂ ವಿವರ ನೀಡುತ್ತದೆ. ತುಳುನಾಡಿನ ಪಾಡ್ದನಗಳನ್ನು ಇಟ್ಟು ಕೊಂಡು ತಮ್ಮ ಕೃತಿಯಲ್ಲಿ ಸಾಂಸ್ಕೃತಿಕ ವಿಮರ್ಶೆ ಮಾಡಿದವರಲ್ಲಿ ಬೋಲ ಚಿತ್ತರಂಜನದಾಸ ಶೆಟ್ಟಿ ಪ್ರಮುಖರಾಗಿದ್ದಾರೆ.

ಬೋಲರ ಕೃತಿಯಲ್ಲಿ ತುಳುನಾಡಿನ ಜನರ ದುಡಿಮೆ, ಅನ್ನ ಇಲ್ಲದೆ ಸಾಯುವ ಬಡತನದ ಸ್ಥಿತಿ ಒಂದು ಕಾಲದ ಚಿತ್ರಣವನ್ನು ನೀಡುತ್ತದೆ. ಅವರ ಕೃತಿಗಳನ್ನು ಇತರ ಭಾಷೆಗೆ ಅನುವಾದಿಸಲು, ನಾಟಕ ಸಿನಿಮಾವಾಗಿ ಪರಿವರ್ತಿಸಲು ಸಾಧ್ಯವಿದೆ ಎಂದು ವಿವೇಕ ರೈ ತಿಳಿಸಿದ್ದಾರೆ.

 ಕಾಲದ ಪ್ರತಿನಿಧಿಯಾಗಿ ನಿಲ್ಲುವ ಸಾಹಿತ್ಯ ಕೃತಿ ಮುಖ್ಯ:- ಒಂದು ಕಾಲದ ಪ್ರತಿನಿಧಿಯಾಗಿ ಆ ಕಾಲದ ಭಾಷೆಯಲ್ಲಿ ರಚನೆಯಾಗುವ ಸಾಹಿತ್ಯ ಮುಖ್ಯವಾಗುತ್ತದೆ ಎಂದು ಮುಂಬಯಿಯ ಹಿರಿಯ ಸಾಹಿತಿ ಡಾ. ಎಂ.ಸುನಿತಾ ಶೆಟ್ಟಿ ತಿಳಿಸಿದ್ದಾರೆ.

ಬೋಲ ಚಿತ್ತರಂಜನ ದಾಸ ಶೆಟ್ಟಿಯವರ ಕೃತಿ ತುಳುನಾಡಿನ ಒಂದು ಕಾಲದ ಸಂಸ್ಕೃತಿಯ ಚಿತ್ರಣವನ್ನು ನೀಡುವ ಪ್ರಯತ್ನ ಮಾಡುತ್ತದೆ. ತುಳುನಾಡಿನ ಸಿರಿಯನ್ನು ಹೋಲುವ ಸ್ತ್ರೀ , ಅಮೇರಿಕಾದ ಡಯಾನಳ ಪ್ರತಿಮೆಗೂ ಸಾಮ್ಯತೆ ಇದೆ. ತುಳುನಾಡಿನ ಪರಂಪರೆಗೂ ದಕ್ಷಿಣ ಆಫ್ರಿಕಾದ ದ್ರಾವಿಡ ಸಂಸ್ಕೃತಿಗೂ ಹೋಲಿಕೆ ಇದೆ. ಈ ಹಿನ್ನೆಲೆಯಲ್ಲಿ ಸಾಹಿತ್ಯದ ಮೂಲಕ ಶೋಧನೆ ಮುಖ್ಯ. ಸಾಹಿತ್ಯ ಒಂದು ಸಂಸ್ಕೃತಿಯ ಪ್ರತಿ ಬಿಂಬವಾಗಿರುತ್ತದೆ. ಯಾರನ್ನೋ ತಿದ್ದಲು ಸಾಹಿತ್ಯ ರಚಿಸುವುದಲ್ಲ. ಸಾಹಿತಿ ಒಂದು ಜಾತಿ, ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗುವುದಿಲ್ಲ ಎಂದು ಸುನಿತಾ ಶೆಟ್ಟಿ ತಿಳಿಸಿ, ಬೋಲ ಚಿತ್ತರಂಜನದಾಸ ಶೆಟ್ಟಿ ಮುಂಬಯಿಯಲ್ಲಿ ನನ್ನ ವಿದ್ಯಾರ್ಥಿ ಎಂದು ನೆನಪಿಸಿಕೊಂಡರು.

ಡಾ.ಗಣೇಶ್ ಅಮೀನ್ ಸಂಕಮಾರ್ ಮತ್ತು ಡಾ.ಗಣನಾಥ ಎಕ್ಕಾರ್ ಬೊಲ ಚಿತ್ತರಂಜನ ದಾಸರ ಜೀವನ ಮತ್ತು ಕೃತಿಯ ಬಗ್ಗೆ ವಿವರಿಸಿದರು.

ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಡಾ.ಎಂ.ಪ್ರಭಾಕರ ಜೋಶಿ, ಡಾ.ಬಿ.ಎ.ವಿವೇಕ ರೈ, ಮಾಜಿ ಶಾಸಕ ಜಯರಾಮ ಶೆಟ್ಟಿ, ಚಿತ್ತರಂಜನ್ , ಸಾಹಿತಿ ಡಾ.ವಾಮನ ನಂದಾವರ, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X