Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 150 ಗ್ರಾಂ ಚಿನ್ನಾಭರಣ, 50 ಸಾವಿರ ರೂ.,...

150 ಗ್ರಾಂ ಚಿನ್ನಾಭರಣ, 50 ಸಾವಿರ ರೂ., ಮೊಬೈಲ್, ವಾಚ್ ಕಳವು

ರೈಲಿನಲ್ಲಿ ಅಮಲು ಪದಾರ್ಥ ನೀಡಿ ದಂಪತಿಯ ಸೊತ್ತು ಲೂಟಿ

ವಾರ್ತಾಭಾರತಿವಾರ್ತಾಭಾರತಿ6 Aug 2017 11:12 PM IST
share
150 ಗ್ರಾಂ ಚಿನ್ನಾಭರಣ, 50 ಸಾವಿರ ರೂ., ಮೊಬೈಲ್, ವಾಚ್ ಕಳವು

ಉಡುಪಿ, ಆ. 6: ಮುಂಬೈಯಿಂದ ಮುಲ್ಕಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗೆ ಯುವಕರ ತಂಡವೊಂದು ತಂಪು ಪಾನೀಯದಲ್ಲಿ ಅಮಲು ಪದಾರ್ಥ ನೀಡಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು ದೋಚಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಮದ್ಮನೆ ಪಡುಮನೆಯ ಸಂಜೀವ ಶೆಟ್ಟಿ(62) ಹಾಗೂ ಅವರ ಪತ್ನಿ ರತ್ನಾ ಶೆಟ್ಟಿ(56) ಸೊತ್ತುಗಳನ್ನು ಕಳೆದುಕೊಂಡ ದಂಪತಿ ಎಂದು ಗುರುತಿಸಲಾಗಿದೆ.

ಮುಂಬೈಯ ಥಾಣಾ ಎಂಬಲ್ಲಿ ಅಂಗಡಿ ನಡೆಸುತ್ತಿರುವ ಸಂಜೀವ ಶೆಟ್ಟಿಯ ಇಬ್ಬರು ಮಕ್ಕಳು ಮುಂಬೈಯಲ್ಲಿಯೇ ನೆಲೆಸಿದ್ದಾರೆ. ಅನಾರೋಗ್ಯ ಪೀಡಿತ ಪತ್ನಿಯ ಚಿಕಿತ್ಸೆಗಾಗಿ ಸಂಜೀವ ಶೆಟ್ಟಿ ಪತ್ನಿ ಜೊತೆ ಆ. 5ರಂದು ಮಧ್ಯಾಹ್ನ ಥಾಣಾ ನಿಲ್ದಾಣದಿಂದ ಮತ್ಸಗಂಧ ರೈಲಿನ ಎಸ್-2 ಬೋಗಿಯಲ್ಲಿ ಮುಲ್ಕಿಗೆ ಪ್ರಯಾಣ ಬೆಳೆಸಿದ್ದರು.

ರೈಲು ಕುರ್ಲಾ ನಿಲ್ದಾಣಕ್ಕೆ ಆಗಮಿಸಿದಾಗ ಅಲ್ಲಿ ಕೆಲ ಯುವಕರು ರೈಲನ್ನು ಹತ್ತಿ ಸಂಜೀವ ಶೆಟ್ಟಿಯವರ ಬೋಗಿಯಲ್ಲಿ ಬಂದು ಕುಳಿತರು. ಪ್ರಯಾಣದ ಮಧ್ಯೆ ಯುವಕರು ರೈಲಿನ ಕಿಟಕಿಯ ಬದಿಯಲ್ಲಿ ಕುಳಿತುಕೊಳ್ಳುವುದಾಗಿ ದಂಪತಿಯಲ್ಲಿ ವಿನಂತಿಸಿಕೊಂಡರು. ಅದಕ್ಕೆ ಸಂಜೀವ ಶೆಟ್ಟಿ ದಂಪತಿ ಅವಕಾಶ ನೀಡಿದರು. ನಂತರ ತುಂಬಾ ಆತ್ಮೀಯವಾಗಿ ಮಾತನಾಡಿಕೊಂಡು ಬಂದ ಯುವಕರು, ತಮ್ಮಲ್ಲಿದ್ದ ತಂಪು ಪಾನೀಯವನ್ನು ದಂಪತಿಗೆ ನೀಡಿದರು. ಅದನ್ನು ಕುಡಿದ ದಂಪತಿ ಕೂಡಲೇ ನಿದ್ದೆಗೆ ಜಾರಿದರು. ಮುಂದೆ ರವಿವಾರ ನಸುಕಿನ ವೇಳೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸಾವಂತವಾಡಿ ನಿಲ್ದಾಣದಲ್ಲಿ ಯುವಕರು ರೈಲಿನಿಂದ ಇಳಿದು ಹೋದರೆನ್ನಲಾಗಿದೆ.

ಬೆಳಗ್ಗೆ ರೈಲು ಕುಂದಾಪುರಕ್ಕೆ ಆಗಮಿಸಿದಾಗಲೂ ದಂಪತಿ ಎಚ್ಚರವಾಗದೆ ನಿದ್ರಾವಸ್ಥೆಯಲ್ಲಿರುವುದನ್ನು ಕಂಡ ಅದೇ ಬೋಗಿಯಲ್ಲಿದ್ದ ಸ್ಥಳೀಯರೊಬ್ಬರು ಮುಂಬೈಯ ಪರಿಚಯದವರಿಗೆ ಕರೆ ಮಾಡಿ ಊರಿನಲ್ಲಿರುವ ಸಂಜೀವ ಶೆಟ್ಟಿ ಕುಟುಂಬದವರನ್ನು ಸಂಪರ್ಕಿಸಿದರು. ರೈಲು ಉಡುಪಿ ಇಂದ್ರಾಳಿ ನಿಲ್ದಾಣಕ್ಕೆ ಆಗಮಿಸಿದಾಗ ಸಂಜೀವ ಶೆಟ್ಟಿಯ ಮನೆಯವರು ಪ್ರಜ್ಞಾವಸ್ಥೆಯಲ್ಲಿದ್ದ ದಂಪತಿಯನ್ನು ರೈಲಿನಿಂದ ಇಳಿಸಿ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದರು. ಇದೀಗ ದಂಪತಿಗೆ ಪ್ರಜ್ಞೆ ಬಂದಿದ್ದರೂ ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಬಳಿಕ ಪರಿಶೀಲಿಸಿದಾಗ ರತ್ನಾ ಶೆಟ್ಟಿಯ ಮೈಮೇಲೆ ಇದ್ದ ಕರಿಮಣಿ ಸರ, ಚಿನ್ನದ ಸರ, ನಾಲ್ಕು ಬಳೆ, ಎರಡು ಉಂಗುರ ಮತ್ತು ಸಂಜೀವ ಶೆಟ್ಟಿ ಮೈ ಮೇಲೆ ಇದ್ದ ಬ್ರಾಸ್ಲೈಟ್, ಮೂರು ಉಂಗುರ ಸೇರಿದಂತೆ ಒಟ್ಟು 150 ಗ್ರಾಂ ಚಿನ್ನಾಭರಣ, 50  ಸಾವಿರ ರೂ. ನಗದು, ಒಂದು ಮೊಬೈಲ್, 40 ಸಾವಿರ ರೂ. ಮೌಲ್ಯದ ವಾಚ್, ಬ್ಯಾಗ್ ಕಳವಾಗಿರುವುದು ತಿಳಿದುಬಂದಿದೆ. 

ಈ ಬಗ್ಗೆ ಉಡುಪಿ ರೈಲ್ವೆ ಪೊಲೀಸರು ಘಟನೆ ನಡೆದ ಮಹಾರಾಷ್ಟ್ರ ರಾಜ್ಯದ ಅಂಜನಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಅಂಜನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X