Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಖ್ಖರು ದ್ವೇಷಾಪರಾಧಗಳ ಪ್ರಧಾನ ಗುರಿ

ಸಿಖ್ಖರು ದ್ವೇಷಾಪರಾಧಗಳ ಪ್ರಧಾನ ಗುರಿ

ವಿಸ್ಕೋನ್ಸಿನ್ ಗುರುದ್ವಾರ ಹತ್ಯಾಕಾಂಡದ 5ನೆ ವಾರ್ಷಿಕ ದಿನದಲ್ಲಿ ಸಮುದಾಯ ನಾಯಕರ ಆತಂಕ

ವಾರ್ತಾಭಾರತಿವಾರ್ತಾಭಾರತಿ7 Aug 2017 8:02 PM IST
share
ಸಿಖ್ಖರು ದ್ವೇಷಾಪರಾಧಗಳ ಪ್ರಧಾನ ಗುರಿ

ವಾಶಿಂಗ್ಟನ್, ಆ. 7: ಅಮೆರಿಕದಲ್ಲಿ ನಡೆಯುತ್ತಿರುವ ದ್ವೇಷಾಪರಾಧಗಳು ಮತ್ತು ವಿಭಜನವಾದಿ ಹಿಂಸೆಯ ಬಲಿಪಶುಗಳ ಪೈಕಿ ಸಿಖ್ಖರು ಅಗ್ರ ಸ್ಥಾನದಲ್ಲಿದ್ದಾರೆ ಎಂದು ಸಿಖ್ ನಾಯಕರು ಹೇಳಿದ್ದಾರೆ.

2012ರಲ್ಲಿ ವಿಸ್ಕೋನ್ಸಿನ್ ನಗರದ ಗುರುದ್ವಾರದಲ್ಲಿ, ಬಿಳಿ ಚರ್ಮದವರು ಶ್ರೇಷ್ಠರು ಎಂಬ ಸಿದ್ಧಾಂತದ ಪ್ರತಿಪಾದಕನೊಬ್ಬ ನಡೆಸಿದ ಹತ್ಯಾಕಾಂಡದ ವಾರ್ಷಿಕ ದಿನದ ಸಂದರ್ಭದಲ್ಲಿ ರವಿವಾರ ಅವರು ಮಾತನಾಡುತ್ತಿದ್ದರು.

ಐದು ವರ್ಷಗಳ ಹಿಂದೆ ನಡೆದ ಹತ್ಯಾಕಾಂಡದಲ್ಲಿ ಆರು ಸಿಖ್ಖರು ಹತರಾಗಿದ್ದರು.

ಹಲವಾರು ಖ್ಯಾತ ಸಿಖ್-ಅಮೆರಿಕನ್ನರು, ಸಂಸದರು, ಸರಕಾರಿ ಅಧಿಕಾರಿಗಳು ಮತ್ತು ಸ್ಥಳೀಯ ನಾಯಕರು ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

‘‘ದೇಶಾದ್ಯಂತವಿರುವ ನಮ್ಮ ಎಲ್ಲ ಗುರುದ್ವಾರ ಸಾಹಿಬ್‌ಗಳನ್ನು ರಕ್ಷಿಸಲು ನಾವು ಎಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಹಾಗೂ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಆದರೆ, ಈಗಲೂ ಸಿಖ್ಖರು ದ್ವೇಷಾಪರಾಧಗಳು, ವಿಭಜನವಾದಿ ಹಿಂಸೆ ಮತ್ತು ಅಮೆರಿಕದ ಶಾಲೆಗಳಲ್ಲಿ ನಡೆಯುತ್ತಿರುವ ಪೀಡನೆಯ ಬಲಿಪಶುಗಳಾಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ದಾಳಿಗಳು ಹಲವು ಪಟ್ಟು ಹೆಚ್ಚಿವೆ’’ ಸಿಖ್ಸ್ ರಾಜಕೀಯ ಕ್ರಿಯಾ ಸಮಿತಿಯ ಮುಖ್ಯಸ್ಥ ಗುರಿಂದರ್ ಸಿಂಗ್ ಖಾಲ್ಸಾ ಹೇಳಿದರು.

ಗುರುದ್ವಾರದಲ್ಲಿ ನಡೆದ ಸಮಾರಂಭದಲ್ಲಿ ಓಕ್ ಕ್ರೀಕ್ ಪೊಲೀಸ್ ಠಾಣೆಯ ನಿವೃತ್ತ ಅಧಿಕಾರಿ ಬ್ರಯಾನ್ ಮರ್ಫಿ ಭಾಗವಹಿಸಿದ್ದರು. ಈ ದಾಳಿಯಲ್ಲಿ ದಾಳಿಕೋರನು ಹತನಾಗುವ ಮುನ್ನ ಅವರ ಮೇಲೆ ದಾಳಿಕೋರನು 15 ಗುಂಡುಗಳನ್ನು ಹಾರಿಸಿದ್ದನು.

 ಅಂದಿನ ಘಟನೆಯನ್ನು ನೆನಪಿಸಿಕೊಂಡ ಮರ್ಫಿ, ‘‘ಅಂದು ಪ್ರಾಣ ಕಳೆದುಕೊಂಡ ಜನರ ಕೂಗು ಈಗಲೂ ಕೇಳಿಸುತ್ತಿದೆ. 2012 ಆಗಸ್ಟ್ 5 ಹಲವರ ಬದುಕನ್ನು ಶಾಶ್ವತವಾಗಿ ಬದಲಾಯಿಸಿತು. ಆದರೆ, ಆಗಸ್ಟ್ 4ರಂದು ಹಾಗೂ ಅದಕ್ಕಿಂತ ಮೊದಲು ಇಲ್ಲಿದ್ದ ಜನರನ್ನು ನೆನಪಿಸಿಕೊಳ್ಳಿ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X