Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯದ ಪ್ರತೀಕಾರಕ್ಕೆ ಅಮೆರಿಕದ...

ರಶ್ಯದ ಪ್ರತೀಕಾರಕ್ಕೆ ಅಮೆರಿಕದ ಪ್ರತಿಕ್ರಿಯೆ ಸೆ. 1ರೊಳಗೆ: ರೆಕ್ಸ್ ಟಿಲರ್‌ಸನ್

ವಾರ್ತಾಭಾರತಿವಾರ್ತಾಭಾರತಿ7 Aug 2017 8:54 PM IST
share
ರಶ್ಯದ ಪ್ರತೀಕಾರಕ್ಕೆ ಅಮೆರಿಕದ ಪ್ರತಿಕ್ರಿಯೆ ಸೆ. 1ರೊಳಗೆ: ರೆಕ್ಸ್ ಟಿಲರ್‌ಸನ್

ಮನಿಲಾ (ಫಿಲಿಪ್ಪೀನ್ಸ್), ಆ. 7: ನೂರಾರು ಅಮೆರಿಕನ್ ರಾಜತಾಂತ್ರಿಕರನ್ನು ಉಚ್ಚಾಟಿಸುವ ರಶ್ಯದ ನಿರ್ಧಾರಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂಬ ಬಗ್ಗೆ ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತ ಇನ್ನಷ್ಟೇ ನಿರ್ಧಾರವೊಂದನ್ನು ತೆಗೆದುಕೊಳ್ಳಬೇಕಾಗಿದೆ, ಆದರೆ, ಸೆಪ್ಟಂಬರ್ 1ರ ಒಳಗೆ ಅದು ತನ್ನ ಪ್ರತಿಕ್ರಿಯೆಯನ್ನು ರಶ್ಯಕ್ಕೆ ತಿಳಿಸಲಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೆಕ್ಸ್ ಟಿಲರ್‌ಸನ್ ಸೋಮವಾರ ಹೇಳಿದ್ದಾರೆ.

2016ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಶ್ಯ ಹಸ್ತಕ್ಷೇಪ ನಡೆಸಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಮೆರಿಕದ ಕಾಂಗ್ರೆಸ್ ರಶ್ಯದ ವಿರುದ್ಧ ಕಳೆದ ತಿಂಗಳು ಆರ್ಥಿಕ ದಿಗ್ಬಂಧನ ವಿಧಿಸಿರುವುದನ್ನು ಸ್ಮರಿಸಬಹುದಾಗಿದೆ. ಇದಕ್ಕೆ ಕೋಪದಿಂದ ಪ್ರತಿಕ್ರಿಯಿಸಿರುವ ರಶ್ಯ, ತನ್ನ ದೇಶದಲ್ಲಿರುವ ಅಮೆರಿಕದ ನೂರಾರು ರಾಜತಾಂತ್ರಿಕರು ಸೆಪ್ಟಂಬರ್ ಒಂದರ ಒಳಗೆ ದೇಶ ತೊರೆಯುವಂತೆ ಸೂಚಿಸಿದೆ.

ರಶ್ಯದ ಪ್ರತೀಕಾರದ ನಿರ್ಧಾರಕ್ಕೆ ಸಂಬಂಧಿಸಿ ಹಲವು ವಿಷಯಗಳಲ್ಲಿ ಸ್ಪಷ್ಟೀಕರಣ ಕೋರಿರುವುದಾಗಿ ಫಿಲಿಪ್ಪೀನ್ಸ್‌ನಲ್ಲಿ ರಶ್ಯದ ವಿದೇಶ ಸಚಿವ ಸರ್ಗಿ ಲವ್ರೊವ್ ಜೊತೆ ಮಾತುಕತೆ ನಡೆಸಿದ ಒಂದು ದಿನದ ಬಳಿಕ ಟಿಲರ್‌ಸನ್ ತಿಳಿಸಿದರು.

ರಶ್ಯದ ಈ ಪ್ರತೀಕಾರದ ಕ್ರಮವು ರಶ್ಯದಲ್ಲಿ ಅಮೆರಿಕದ ರಾಜತಾಂತ್ರಿಕ ಉಪಸ್ಥಿತಿಯ ಮೇಲೆ ಹಾಗೂ ಪರಮಾಣು ಶಕ್ತ ದೇಶಗಳ ನಡುವಿನ ಈಗಾಗಲೇ ಹದಗೆಟ್ಟಿರುವ ಸಂಬಂಧದ ಮೇಲೆ ಯಾವ ಪರಿಣಾಮವನ್ನು ಬೀರುವುದು ಎಂಬುದನ್ನು ಅರಿಯಲು ಅಮೆರಿಕ ಪ್ರಸಕ್ತ ಹೆಣಗುತ್ತಿದೆ.

ಅದೇ ವೇಳೆ, ಉತ್ತರ ಕೊರಿಯ, ಸಿರಿಯ, ಯುಕ್ರೇನ್ ಹಾಗೂ ಇತರ ವಿಷಯಗಳ ಬಗ್ಗೆ ಅಮೆರಿಕದೊಂದಿಗೆ ಹೆಚ್ಚಿನ ಮಾತುಕತೆ ನಡೆಸಲು ರಶ್ಯ ಸಿದ್ಧವಿದೆ ಎಂಬುದಾಗಿ ರಶ್ಯದ ವಿದೇಶ ಸಚಿವರ ಘೋಷಿಸಿದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಟಿಲರ್‌ಸನ್, ಕೆಲವು ವಿಷಯಗಳ ಬಗ್ಗೆ ತೀವ್ರ ಭಿನ್ನಾಭಿಪ್ರಾಯಗಳಿರುವ ಹೊರತಾಗಿಯೂ ಅಮೆರಿಕ ಮತ್ತು ರಶ್ಯಗಳು ಗಂಭೀರ ರಾಷ್ಟ್ರೀಯ ಭದ್ರತಾ ವಿಷಯಗಳ ಬಗ್ಗೆ ಮಾತನಾಡಬೇಕಾದ ಅಗತ್ಯವಿದೆ ಎಂದರು.

‘‘ಒಂದೇ ಒಂದು ವಿಷಯಕ್ಕೆ ಸಂಬಂಧಿಸಿ ಎಲ್ಲವನ್ನೂ ಕಡಿದುಕೊಳ್ಳುವುದು ಉಪಯೋಗಕ್ಕೆ ಬರುತ್ತದೆ ಎಂದು ನಾನು ಭಾವಿಸುವುದಿಲ್ಲ’’ ಎಂದು ಟಿಲರ್‌ಸನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X